ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮೋದಿ ಭೇಟಿ ವೇಳೆ ಪ್ರತಿಭಟನೆ ಮಾಡಲು ಹೊರಟವರನ್ನು ತಡೆದ ಪೊಲೀಸರು

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಧಾನಿಯವರು ಬರುವ ವೇಳೆಗೆ ಪ್ರತಿಭಟನೆಗೆ ಮುಂದಾಗಿದ್ದ...

ಬೆಳಗಾವಿ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಧಾನಿಯವರು ಬರುವ ವೇಳೆಗೆ ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳಸಾಬಂಡೂರಿ ಯೋಜನೆ ಜಾರಿಗೆ ಆಗ್ರಹ, ಸಾಲಮನ್ನಾ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಘೋಷಿಸುವುದು ಸೇರಿದಂತೆ ವಿವಿಧ ಯೋಜನೆಗಳನ್ನು ಮುಂದಿಟ್ಟುಕೊಂಡು ರೈತರು ಇಂದು ಬೆಳಗಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮೋದಿಯವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಬೇಕೆಂದುಕೊಂಡಿದ್ದರು. ಕರ್ನಾಟಕ ರಾಜ್ಯ ರೈತ ಸಂಘ, ಕಳಸಾ-ಬಂಡೂರಿ ಹೋರಾಟ ಸಮಿತಿ ಮತ್ತು ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ಪ್ರತಿಭಟನೆಗೆ ಮುಂದಾಗಿತ್ತು.

ಆದರೆ ಅವರನ್ನು ಬೆಳಗಾವಿಯ ಹೊರವಲಯದಲ್ಲಿಯೇ ಪೊಲೀಸರು ತಡೆದಿದ್ದಾರೆ. ಪೊಲೀಸರ ಈ ಕ್ರಮಕ್ಕೆ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿಯವರು ಇಂದು ಸಂಜೆ ಫಸಲ್ ಭೀಮಾ ಯೋಜನೆಗೆ ಚಾಲನೆ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!

ಬಾಂಗ್ಲಾದವರ ಬಗ್ಗೆ ಮಾಹಿತಿ ಕೊಟ್ಟ 15 ನಿಮಿಷದಲ್ಲೇ ಭಾರತೀಯನ ವಿರುದ್ಧವೇ ಹಲ್ಲೆ ಕೇಸ್: ನಿಮ್ಮ ಓಲೈಕೆ ನಿಲ್ಲಿಸಿ, ಸರ್ಕಾರಕ್ಕೆ ಹೈಕೋರ್ಟ್ ಚಾಟಿ!

ಪಂಜಾಬ್ ವಿವಿಯಲ್ಲಿ ಘೋರ ದುರಂತ: ಕ್ಯಾಂಪಸ್‌ನಲ್ಲೇ ವಿದ್ಯುತ್ ತಗುಲಿ ಪಿಎಚ್‌ಡಿ ವಿದ್ಯಾರ್ಥಿನಿ ಸಾವು; ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ

ಸತತ 2 IPL ಟ್ರೋಫಿ ಗೆಲುವಿನ ಬೆನ್ನಲ್ಲೇ ಗಗನಕ್ಕೇರಿದ RCB ಬ್ರ್ಯಾಂಡ್ ವ್ಯಾಲ್ಯೂ; 4ನೇ ಸ್ಥಾನಕ್ಕೆ ಕುಸಿದ CSK.. ಇಲ್ಲಿದೆ ಫುಲ್ ಲಿಸ್ಟ್