ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಮೋದಿ ಭೇಟಿ ವೇಳೆ ಪ್ರತಿಭಟನೆ ಮಾಡಲು ಹೊರಟವರನ್ನು ತಡೆದ ಪೊಲೀಸರು

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಧಾನಿಯವರು ಬರುವ ವೇಳೆಗೆ ಪ್ರತಿಭಟನೆಗೆ ಮುಂದಾಗಿದ್ದ...

ಬೆಳಗಾವಿ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಧಾನಿಯವರು ಬರುವ ವೇಳೆಗೆ ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳಸಾಬಂಡೂರಿ ಯೋಜನೆ ಜಾರಿಗೆ ಆಗ್ರಹ, ಸಾಲಮನ್ನಾ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಘೋಷಿಸುವುದು ಸೇರಿದಂತೆ ವಿವಿಧ ಯೋಜನೆಗಳನ್ನು ಮುಂದಿಟ್ಟುಕೊಂಡು ರೈತರು ಇಂದು ಬೆಳಗಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮೋದಿಯವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಬೇಕೆಂದುಕೊಂಡಿದ್ದರು. ಕರ್ನಾಟಕ ರಾಜ್ಯ ರೈತ ಸಂಘ, ಕಳಸಾ-ಬಂಡೂರಿ ಹೋರಾಟ ಸಮಿತಿ ಮತ್ತು ಭಾರತೀಯ ಕೃಷಿಕ ಸಮಾಜ (ಸಂಯುಕ್ತ) ಸಂಘಟನೆ ಪ್ರತಿಭಟನೆಗೆ ಮುಂದಾಗಿತ್ತು.

ಆದರೆ ಅವರನ್ನು ಬೆಳಗಾವಿಯ ಹೊರವಲಯದಲ್ಲಿಯೇ ಪೊಲೀಸರು ತಡೆದಿದ್ದಾರೆ. ಪೊಲೀಸರ ಈ ಕ್ರಮಕ್ಕೆ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿಯವರು ಇಂದು ಸಂಜೆ ಫಸಲ್ ಭೀಮಾ ಯೋಜನೆಗೆ ಚಾಲನೆ ನೀಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪರಿಹಾರಕ್ಕೆ ಯಾವುದೇ ಮಾರ್ಗಸೂಚಿ ಇಲ್ಲ': ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

ಜಾತಿ ರಹಿತ ಸಮಾಜ ನಿರ್ಮಾಣವೇ ಸಂವಿಧಾನದ ಆಶಯ: ಸಿಎಂ ಸಿದ್ದರಾಮಯ್ಯ

ಸಂಚಾರ ದಂಡ ರಿಯಾಯಿತಿಯಿಂದ ಬರೋಬ್ಬರಿ 106 ಕೋಟಿ ಸಂಗ್ರಹ: 37.86 ಲಕ್ಷ ಪ್ರಕರಣ ಇತ್ಯರ್ಥ

AI ವೀಡಿಯೊ ಮೂಲಕ ಪ್ರಧಾನಿ ಮೋದಿ ಮತ್ತು ಅವರ ದಿವಂಗತ ತಾಯಿಯ ತೇಜೋವಧೆ: Congress, ಐಟಿ ಸೆಲ್ ವಿರುದ್ಧ ಎಫ್ಐಆರ್

ಯಾರೂ ಭಾರತ-ಪಾಕ್ ಪಂದ್ಯ ನೋಡಬೇಡಿ, TV ಆಫ್ ಮಾಡಿ: ಪಹಲ್ಗಾಮ್ ಬಲಿಪಶು ಶುಭಂ ದ್ವಿವೇದಿ ಪತ್ನಿ ಕರೆ

SCROLL FOR NEXT