ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಹೊಸ ವರ್ಷ ಆಚರಣೆ ವೇಳೆ ಕ್ಷುಲ್ಲಕ ಜಗಳಕ್ಕೆ ಯುವಕ ಕೊಲೆ

ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ಮದ್ಯದ ಅಮಲಿನಲ್ಲಿದ್ದ ಸ್ನೇಹಿತರಿಂದಲೇ...

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ಮದ್ಯದ ಅಮಲಿನಲ್ಲಿದ್ದ ಸ್ನೇಹಿತರಿಂದಲೇ ಇರಿತಕ್ಕೆ ಒಳಗಾಗಿ ಮೃತಪಟ್ಟಿರುವ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. 
ಸಕಲೇಶಪುರ ಮೂಲದ ಸಂತೋಷ್(27) ಸ್ನೇಹಿತರಿಂದ ಹತರಾದವರು. ಇವರು ಸುಬ್ರಮಣ್ಯಪುರದಲ್ಲಿ ಕೇಬಲ್ ಟಿವಿ ಆಪರೇಟರ್ ಆಗಿದ್ದರು. ಘಟನೆ ಸಂಬಂಧ ಆರೋಪಿಗಳಾದ ಮನೋಜ್, ದೀಪಕ್ ಮತ್ತು ಪವನ್‍ನ ಪೊಲೀಸರು ಬಂಧಿಸಿದ್ದಾರೆ. 
ಸುಬ್ರಮಣ್ಯಪುರದ ಶ್ರೇಯಸ್ ಬಡಾವಣೆಯ ಮನೆಯೊಂದರಲ್ಲಿ ಹೊಸ ವರ್ಷದ ಸಂಭ್ರಮಾಚರಿಸಲು ನಾಲ್ವರು ಸ್ನೇಹಿತರು ಸೇರಿದ್ದರು. ಈ ವೇಳೆ ನಾಲ್ವರು ಮದ್ಯ ಸೇವಿಸಿ ಸಂಭ್ರಮಾಚರಿಸುವಾಗ ನಡುರಾತ್ರಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಜಗಳ ಏರ್ಪಡಿದೆ. 
ಜಗಳ ವಿಕೋಪಕ್ಕೆ ತಿರುಗಿ ಪರಿಸ್ಥಿತಿ ಕೈಮೀರಿದಾಗ ಮೂವರು ಸ್ನೇಹಿತರು ಚಾಕುವಿನಿಂದ ಸಂತೋಷನ ಹೊಟ್ಟೆಗೆ ಇರಿದಿದ್ದರು. ಇರಿತದಿಂದ ತೀವ್ರವಾಗಿ ಗಾಯಗೊಂಡ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸುಬ್ರಮಣ್ಯಪುರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಚಿವ ಜಮೀರ್ ಅಹ್ಮದ್ ಧ್ವಜಾರೋಹಣ ಮಾಡದಷ್ಟು ದೊಡ್ಡವರೇ? ಇದು ದೇಶಕ್ಕೆ ಮಾಡಿದ ಅವಮಾನ, ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ! ಸಚಿವ ಸ್ಥಾನದಿಂದ ವಜಾಕ್ಕೆ ಒತ್ತಾಯ

'ಅಪ್ಪಿಕೋ' ವಿದೇಶಾಂಗ ನೀತಿ: ಮೋದಿ ಕೆಣಕಿದ ರಾಹುಲ್ ಗಾಂಧಿ; ಇಂದಿರಾ ಗಾಂಧಿ ವಿಡಿಯೋ ಮೂಲಕ ಬಿಜೆಪಿ ತಿರುಗೇಟು!

ಆತ್ಮನಿರ್ಭರ ಭಾರತಕ್ಕೆ ಮತ್ತೊಂದು ಗರಿ: ದೇಶೀಯವಾಗಿ ಫೈಟರ್ ಜೆಟ್ ಎಂಜಿನ್ ನಿರ್ಮಿಸಲಿವೆ ರಿಲಯನ್ಸ್-ರೋಲ್ಸ್ ರಾಯ್ಸ್!

Toxic: ಯಶ್ ಅಭಿನಯದ 'ಟಾಕ್ಸಿಕ್'ಗೆ ಸಿಕ್ತು ʻA’ ಸರ್ಟಿಫಿಕೇಟ್; ರನ್‌ಟೈಮ್‌ ಕೇಳಿದ್ರೆ ಥ್ರಿಲ್‌ ಆಗ್ತೀರಾ!

ತವಾದಿಂದ ಹೊಡೆದು ಮಾಜಿ ಪತಿಯನ್ನು ಕೊಂದ ಮಹಿಳೆ!