ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ನಡೆದ ಚಿತ್ರಸಂತೆ 
ಜಿಲ್ಲಾ ಸುದ್ದಿ

95 ಸಾವಿರ ರು. ನೀಡಿ ಕಲಾಕೃತಿ ಖರೀದಿಸಿದ ಪರಮೇಶ್ವರ್

ಕಲಾವಿದನೊಬ್ಬನ ಕಲಾಕೃತಿಗೆ ಮನಸೋತ ಗೃಹ ಸಚಿವ ಜಿ. ಪರಮೇಶ್ವರ ಅವರು 95 ಸಾವಿರ ರು. ನೀಡಿ ಆಕರ್ಷಕ ಕಲಾಕೃತಿಯನ್ನು ಭಾನುವಾರ ಖರೀದಿ ಮಾಡಿದ್ದಾರೆ...

ಬೆಂಗಳೂರು: ಕಲಾವಿದನೊಬ್ಬನ ಕಲಾಕೃತಿಗೆ ಮನಸೋತ ಗೃಹ ಸಚಿವ ಜಿ. ಪರಮೇಶ್ವರ ಅವರು 95 ಸಾವಿರ ರು. ನೀಡಿ ಆಕರ್ಷಕ ಕಲಾಕೃತಿಯನ್ನು ಭಾನುವಾರ ಖರೀದಿ ಮಾಡಿದ್ದಾರೆ.

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಭಾನುವಾರ ನಡೆದ ಚಿತ್ರ ಸಂತೆಯನ್ನು ಉದ್ಘಾಟಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಕಲಾವಿದರ ಆಕರ್ಷಕ ಚಿತ್ರಗಳನ್ನು  ನೋಡಿ ಮನಸೋತರು. ಅಲ್ಲದೆ ಉತ್ತರ ಪ್ರದೇಶ ಮೂಲದ ಕಲಾವಿದನೊಬ್ಬ ಬಿಡಿಸಿದ್ದ ಸುಂದರ ಕಲಾಕೃತಿಯನ್ನು 95 ಸಾವಿರ ರು. ನೀಡಿ ಖರೀದಿಸಿ ಕಲಾವಿದನನ್ನು ಪ್ರೋತ್ಸಾಹಿಸುವ ಮೂಲಕ  ತಮ್ಮ ಕಲಾಸಕ್ತಿಯನ್ನು ತೋರಿದರು.

ಉತ್ತರ ಪ್ರದೇಶದ ಅಂಗವಿಕಲ ಕಲಾವಿದ ಮೋಹಿತ್ ವರ್ಮಾ ಎಂಬುವವರು `ಸಂಜೆಯ ದೀಪದ ಬೆಳಕಿನಲ್ಲಿ ಅಲಂಕೃತಗೊಂಡು ಗಂಡನ ನಿರೀಕ್ಷೆಗಾಗಿ ಕಾದು ಕುಳಿತಿರುವ ಸುಂದರ ಮಹಿಳೆ’ಯ  ಅಪೂರ್ವ ಕಲಾಕೃತಿ ರಚಿಸಿದ್ದರು. ಚಿತ್ರಸಂತೆಯ ಉದ್ಘಾಟನೆಗೂ ಮುನ್ನ ಚಿತ್ರ ಕಲಾವಿದರ ಕಲಾಕೃತಿಗಳನ್ನು ವೀಕ್ಷಿಸುತ್ತಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಈತ ರಚಿಸಿದ್ದ ಕಲಾಕೃತಿಯನ್ನು   ಯಾವುದೇ ಚೌಕಾಸಿ ಮಾಡದೆ ಖರೀದಿಸಿ ಸಂತಸಪಟ್ಟರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಮ್ಮ ಕೃತಿಯನ್ನು ಖರೀದಿಸಿದ್ದಕ್ಕೆ ಸಂತಸಗೊಂಡ ಕಲಾವಿದ ಮೋಹಿತ್ ವರ್ಮಾ ಇದು ತಮ್ಮ ಜೀವನದ ಅವಿಸ್ಮರಣೀಯ ಕ್ಷಣ ಎಂದು ಬಾವುಕರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

'96 ' ಚಿತ್ರದಲ್ಲಿ ಜಾನಕಿ ಹೆಸರಿನ ಪಾತ್ರ: ನೆನಪಿಸಿಕೊಂಡ ನಟಿ ತ್ರಿಶಾ ಕೃಷ್ಣನ್, Deleted scene ಹಂಚಿಕೊಂಡ ಅಭಿಮಾನಿಗಳು! ಅದ್ರಲ್ಲಿ ಏನಿದೆ..? Video..

ಅಮೆರಿಕ ಜೊತೆ ಒಪ್ಪಂದ 'ಮುಗಿದಿದೆ': ಹೊಸ ದಾಳಿಗಳ ಬೆನ್ನಲ್ಲೇ ಇರಾನ್ ಘೋಷಣೆ

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ