ಎಚ್. ಆಂಜನೇಯ 
ಜಿಲ್ಲಾ ಸುದ್ದಿ

ಸಚಿವ ಆಗಿರುವುದರಿಂದ ಗೌರವ, ಇಲ್ಲಾಂದ್ರೆ ನಾನೂ ಅಸ್ಪೃಶ್ಯನೆ!

ಸಚಿವನಾಗಿರುವ ಕಾರಣ ನನ್ನನ್ನು ಕೆಲವು ಕಡೆ ಅಸ್ಪೃಶ್ಯನಂತೆ ನೋಡದೇ ಇರಬಹುದು. ಆದರೆ ನಮ್ಮ ಸಮುದಾಯದವರನ್ನು ಇಂದಿಗೂ ಅಸ್ಪೃಶ್ಯರಂತೆ ಕೀಳಾಗಿ ...,.

ಚಿತ್ರದುರ್ಗ: ಸಚಿವನಾಗಿರುವ ಕಾರಣ ನನ್ನನ್ನು ಕೆಲವು ಕಡೆ ಅಸ್ಪೃಶ್ಯನಂತೆ ನೋಡದೇ ಇರಬಹುದು. ಆದರೆ ನಮ್ಮ ಸಮುದಾಯದವರನ್ನು ಇಂದಿಗೂ ಅಸ್ಪೃಶ್ಯರಂತೆ ಕೀಳಾಗಿ ಕಾಣಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದ್ದಾರೆ.

ನಗರದ ಹೊರ ವಲಯದಲ್ಲಿರುವ ಗುತ್ತಿನಾಡು ವಿಶ್ವಮಾನವ ಸಾಂಸ್ಕೃತಿಕ ವಿದ್ಯಾಸಂಸ್ಥೆ ಆವರಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ನದಾಫ್ , ಪಿಂಜಾರ ಸಮಾಜದ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಮಾವೇಶದಲ್ಲಿ ಮಾತನಾಡಿ, ಅಸ್ಪೃಶ್ಯ ಜಾತಿಯಲ್ಲಿ ಹುಟ್ಟಿದ ನನಗೆ ಧರ್ಮ ಯಾವುದೆಂದು ಗೊತ್ತಿಲ್ಲ. ನಾವು ವಿಶ್ವಮಾನವರು. ಎಲ್ಲ ಧರ್ಮದ ಜನ, ವರ್ಗದವರ ಸೇವೆ ಮಾಡುತ್ತೇವೆ. ಹಾಗಾಗಿ ನಮ್ಮನ್ನು ದಲಿತರೆಂದು ಕರೆಯುತ್ತಾರೆ ಎಂದು ಹೇಳಿದರು.

ಬಸವಣ್ಣನವರು ದಯವೇ ಧರ್ಮದ ಮೂಲವಯ್ಯ ಎಂದರು. ಪೈಗಂಬರ್, ಏಸು ಕ್ರಿಸ್ತ ವಿಶ್ವ ಮಾನವತ್ವ ಪ್ರತಿಪಾದನೆ ಮಾಡಿದರು. ಹಿಂದೂ ಧರ್ಮ ಸೇರಿ ಎಲ್ಲ ಧರ್ಮದ ಸ್ತೀಯರಿಗೆ ಸ್ವಾತಂತ್ರ್ಯ ಸಿಗಬೇಕು. ಮಹಿಳೆ ಎಲ್ಲ ಕಡೆ ಭಾಗವಹಿಸಬೇಕೆನ್ನುವ ಉದ್ದೇಶದಿಂದ ಅಂಬೇಡ್ಕರ್ ಸಂವಿಧಾನ ರಚನೆಯ ಸಂದರ್ಭದಲ್ಲಿ ಮಹಿಳೆಯರಿಗೆ ಸಮಾನ ಅವಕಾಶನೀಡಿ ಪ್ರಪಂಚ ಮೆಚ್ಚುವಂತಹ ಬೃಹತ್ ಸಂವಿಧಾನ ಕೊಟ್ಟಿದ್ದಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT