ಅಮಾನತ್ ಬ್ಯಾಂಕ್ 
ಜಿಲ್ಲಾ ಸುದ್ದಿ

ಬ್ಯಾಂಕ್ ವಿಲೀನ ಪ್ರಕರಣದಿಂದ ಹಿಂದೆ ಸರಿದ ನ್ಯಾಯಮೂರ್ತಿ

ನಷ್ಟದ ಸುಳಿಯಲ್ಲಿ ಸಿಲುಕಿದ್ದ ಅಮಾನತ್ ಬ್ಯಾಂಕ್‍ನ್ನು ಕೆನರಾ ಬ್ಯಾಂಕ್‍ ನೊಂದಿಗೆ ವಿಲೀನಗೊಳಿಸುವ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾ.ಅಬ್ದುಲ್ ...

ಬೆಂಗಳೂರು: ನಷ್ಟದ ಸುಳಿಯಲ್ಲಿ ಸಿಲುಕಿದ್ದ ಅಮಾನತ್ ಬ್ಯಾಂಕ್‍ನ್ನು ಕೆನರಾ ಬ್ಯಾಂಕ್‍ ನೊಂದಿಗೆ ವಿಲೀನಗೊಳಿಸುವ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾ.ಅಬ್ದುಲ್ ನಜೀರ್ ಹಿಂದೆ ಸರಿದಿದ್ದಾರೆ.

ಸೋಮವಾರ ಬೆಳಗ್ಗೆ ಪ್ರಕರಣ ವಿಚಾರಣೆಗೆ ಬಂದ ಸಂದರ್ಭದಲ್ಲಿ ಈ ಪ್ರಕರಣದ ವಿಚಾರಣೆಯಲ್ಲಿ ನನ್ನ ನಿಯತ್ತಿನ ಬಗ್ಗೆ ಸಂದೇಹ ವ್ಯಕ್ತಪಡಿಸಿ ನನಗೆ ಹಾಗೂ ಮುಖ್ಯ ನ್ಯಾಯಮೂರ್ತಿಗಳಿಗೆ ಕೆಲವರು ಅನಾಮಧೇಯ ಪತ್ರ ಬರೆದಿದ್ದಾರೆ. ಇದರಿಂದ ನನಗೆ ನೋವಾಗಿದೆ. ವಿಚಾರಣೆ ಸೂಕ್ತವಾಗಿ ನಡೆಯುತ್ತಿತ್ತು. ಇದೇ ರೀತಿಯಲ್ಲಿ ಮುಂದುವರೆದಿದ್ದಲ್ಲಿ ಮುಂದಿನ ದಿನಗಳಲ್ಲಿ ಬ್ಯಾಂಕ್ ಸಶಕ್ತವಾಗಿ ಬೆಳೆಯುವುದಕ್ಕೆ ಅವಕಾಶವಿತ್ತು. ಆದರೆ, ಈ ಸಂದರ್ಭದಲ್ಲಿ ಇಂತಹ ಬೆಳವಣಿಗೆ ಆಗಬಾರದಿತ್ತು ಎಂದು ಬೇಸರದಿಂದ ಹೇಳಿದ ನ್ಯಾಯಮೂರ್ತಿಗಳು ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ತಿಳಿಸಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡುತ್ತಿರುವುದಾಗಿ ಹೇಳಿದರು.

ಹಿಂದೆ ಸರಿದ ಎರಡನೇ ನ್ಯಾಯಮೂರ್ತಿ: ಈ ಪ್ರಕರಣ ನಜೀರ್ ಅವರ ಪೀಠದ ಮುಂದೆ ವಿಚಾರಣೆಗೆ ಬರುವ ಮುನ್ನ ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಯಲ್ಲಿತ್ತು. ಆಗಲೂ ವಿಚಾರಣೆಯು ನಿರ್ಣಾಯಕ ಹಂತ ತಲುಪಿದೆ ಎನ್ನುವಾಗ ನ್ಯಾಯಮೂರ್ತಿ ಅನಾಮಧೇಯ ಪತ್ರಗಳನ್ನು ಬಂದಿದ್ದವು  ಇದರಿಂದ ರಾಮಮೋಹನ ರೆಡ್ಡಿ ಅವರು ಪ್ರಕರಣದ ವಿಚಾರಣೆ ಕೈಬಿಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT