ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಒಳಚರಂಡಿ ಕಾಮಗಾರಿ ಅವಘಡ: ಕೂಲಿ ಸಾವು, ಇಬ್ಬರಿಗೆ ಗಾಯ,

ಜಲಮಂಡಳಿ ಕೈಗೊಂಡಿರುವ ಒಳಚರಂಡಿ ಕಾಮಗಾರಿ ವೇಳೆ 30 ಅಡಿ ಆಳದ ಗುಂಡಿಗೆ ಬಿದ್ದು ಕಾರ್ಮಿಕನೊಬ್ಬ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮೈಸೂರು...

ಬೆಂಗಳೂರು: ಜಲಮಂಡಳಿ ಕೈಗೊಂಡಿರುವ ಒಳಚರಂಡಿ ಕಾಮಗಾರಿ ವೇಳೆ 30 ಅಡಿ ಆಳದ ಗುಂಡಿಗೆ ಬಿದ್ದು ಕಾರ್ಮಿಕನೊಬ್ಬ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಮಾರ್ಕಂಡೇಶ್ವರ ನಗರದಲ್ಲಿ ಸೋಮವಾರ ನಡೆದಿದೆ.

ಅಲ್ಲದೆ ಇನ್ನಿಬ್ಬರು ಕಾರ್ಮಿಕರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಜರಾತ್ ಮೂಲದ ಅತಿಲಾ ಕಾಟು(25) ಮೃತಪಟ್ಟ ಕಾರ್ಮಿಕ. ಚಂಗಡ ಮಂಗು ಮತ್ತು ಅಂಕಿತ್ ಗಾಯಗೊಂಡ ಇನ್ನಿಬ್ಬರು ಕಾರ್ಮಿಕರು. ಮೂವರು ಕಾರ್ಮಿಕರು ಗುಜರಾತ್ ಮೂಲದವರು. ಕೆಲಸದ ನಿಮಿತ್ತ ಕೆಲ ತಿಂಗಳ ಹಿಂದೆಯಷ್ಟೇ ನಗರಕ್ಕೆ ಬಂದಿದ್ದರು. ಅಲ್ಲದೆ, ನಾಯಂಡಳ್ಳಿಯಲ್ಲಿರುವ ಕಾರ್ಮಿಕರ ಶೆಡ್‍ನಲ್ಲಿ ವಾಸವಾಗಿದ್ದರು.

ಮಧ್ಯಾಹ್ನ 1.30ರ ವೇಳೆಯಲ್ಲಿ ಈ ಮೂವರು ಸುಮಾರು 30 ಅಡಿ ಆಳದ ಗುಂಡಿಯ ಮೇಲೆ ನಿಂತು ಒಳಚರಂಡಿ ಪೈಪ್ ಲಿಂಕ್ ಮಾಡುತ್ತಿದ್ದರು. ಈ ವೇಳೆ ಇದಕ್ಕಿದ್ದಂತೆ ಗುಂಡಿಯ ಗೋಡೆ ಕುಸಿದಿದ್ದರಿಂದ ಮೂವರು ಈ ಆಳದ ಗುಂಡಿಗೆ ಬಿದ್ದಿದ್ದಾರೆ. ಕೂಡಲೇ ಕಾರ್ಮಿಕರ ನೆರವಿಗೆ ಧಾವಿಸಿದ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದರು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಕಾರ್ಮಿಕರನ್ನು ಮೇಲೆ ತಂದು ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಈ ಪೈಕಿ ಅತಿಲಾ ಕಾಟು ಚಿಕಿತ್ಸೆ
ಫಲಕಾರಿಯಾಗದೆ ಮೃತಪಟ್ಟಿದ್ದ. ಉಳಿದಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಜಗಜೀವನರಾಂ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.

ಕೆಲಸದ ವೇಳೆ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದ ಗುತ್ತಿಗೆದಾರ ಹಾಗೂ ಜಲಮಂಡಳಿ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಆರೋಪದ ಕೇಸು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ