ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಒಳಚರಂಡಿ ಕಾಮಗಾರಿ ಅವಘಡ: ಕೂಲಿ ಸಾವು, ಇಬ್ಬರಿಗೆ ಗಾಯ,

ಜಲಮಂಡಳಿ ಕೈಗೊಂಡಿರುವ ಒಳಚರಂಡಿ ಕಾಮಗಾರಿ ವೇಳೆ 30 ಅಡಿ ಆಳದ ಗುಂಡಿಗೆ ಬಿದ್ದು ಕಾರ್ಮಿಕನೊಬ್ಬ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮೈಸೂರು...

ಬೆಂಗಳೂರು: ಜಲಮಂಡಳಿ ಕೈಗೊಂಡಿರುವ ಒಳಚರಂಡಿ ಕಾಮಗಾರಿ ವೇಳೆ 30 ಅಡಿ ಆಳದ ಗುಂಡಿಗೆ ಬಿದ್ದು ಕಾರ್ಮಿಕನೊಬ್ಬ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಮಾರ್ಕಂಡೇಶ್ವರ ನಗರದಲ್ಲಿ ಸೋಮವಾರ ನಡೆದಿದೆ.

ಅಲ್ಲದೆ ಇನ್ನಿಬ್ಬರು ಕಾರ್ಮಿಕರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಜರಾತ್ ಮೂಲದ ಅತಿಲಾ ಕಾಟು(25) ಮೃತಪಟ್ಟ ಕಾರ್ಮಿಕ. ಚಂಗಡ ಮಂಗು ಮತ್ತು ಅಂಕಿತ್ ಗಾಯಗೊಂಡ ಇನ್ನಿಬ್ಬರು ಕಾರ್ಮಿಕರು. ಮೂವರು ಕಾರ್ಮಿಕರು ಗುಜರಾತ್ ಮೂಲದವರು. ಕೆಲಸದ ನಿಮಿತ್ತ ಕೆಲ ತಿಂಗಳ ಹಿಂದೆಯಷ್ಟೇ ನಗರಕ್ಕೆ ಬಂದಿದ್ದರು. ಅಲ್ಲದೆ, ನಾಯಂಡಳ್ಳಿಯಲ್ಲಿರುವ ಕಾರ್ಮಿಕರ ಶೆಡ್‍ನಲ್ಲಿ ವಾಸವಾಗಿದ್ದರು.

ಮಧ್ಯಾಹ್ನ 1.30ರ ವೇಳೆಯಲ್ಲಿ ಈ ಮೂವರು ಸುಮಾರು 30 ಅಡಿ ಆಳದ ಗುಂಡಿಯ ಮೇಲೆ ನಿಂತು ಒಳಚರಂಡಿ ಪೈಪ್ ಲಿಂಕ್ ಮಾಡುತ್ತಿದ್ದರು. ಈ ವೇಳೆ ಇದಕ್ಕಿದ್ದಂತೆ ಗುಂಡಿಯ ಗೋಡೆ ಕುಸಿದಿದ್ದರಿಂದ ಮೂವರು ಈ ಆಳದ ಗುಂಡಿಗೆ ಬಿದ್ದಿದ್ದಾರೆ. ಕೂಡಲೇ ಕಾರ್ಮಿಕರ ನೆರವಿಗೆ ಧಾವಿಸಿದ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ಮುಟ್ಟಿಸಿದರು. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಕಾರ್ಮಿಕರನ್ನು ಮೇಲೆ ತಂದು ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಈ ಪೈಕಿ ಅತಿಲಾ ಕಾಟು ಚಿಕಿತ್ಸೆ
ಫಲಕಾರಿಯಾಗದೆ ಮೃತಪಟ್ಟಿದ್ದ. ಉಳಿದಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಜಗಜೀವನರಾಂ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.

ಕೆಲಸದ ವೇಳೆ ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದ ಗುತ್ತಿಗೆದಾರ ಹಾಗೂ ಜಲಮಂಡಳಿ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಆರೋಪದ ಕೇಸು ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT