ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ದ್ವಿಚಕ್ರ ವಾಹನ ಸವಾರ ಸಾವು

ಎರಡು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಲ್ಲಿ ರಸ್ತೆಗೆ ಬಿದ್ದ ಸವಾರನೊಬ್ಬನ ಮೇಲೆ ಬಿಎಂಟಿಸಿ ಬಸ್ ಚಕ್ರಕ್ಕೆ ಉರುಳಿ ಗಾಯಗೊಂಡು...ಮೃತಪಟ್ಟಿರುವ

ಬೆಂಗಳೂರು: ಎರಡು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಲ್ಲಿ ರಸ್ತೆಗೆ ಬಿದ್ದ    ಸವಾರನೊಬ್ಬನ ಮೇಲೆ ಬಿಎಂಟಿಸಿ ಬಸ್ ಚಕ್ರಕ್ಕೆ ಸಿಕ್ಕಿ ಗಾಯಗೊಂಡು  ಮೃತಪಟ್ಟಿರುವ  ಘಟನೆ ಹಳೇ ಏರ್‍ಪೋರ್ಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ಮಾರತ್ ಹಳ್ಳಿ ನಿವಾಸಿ ಶಿಬುಲಾಲ್(18) ಮೃತಪಟ್ಟವರು. ಎಚ್‍ಎಎಲ್ ಮಾರ್ಕೆಟ್  ಕಡೆಯಿಂದ ತಮ್ಮ ದ್ವಿಚಕ್ರ ವಾಹನದಲ್ಲಿ  ಬರುತ್ತಿದ್ದಾಗ ಬೆಳಗ್ಗೆ 6.30ರ ಸುಮಾರಿಗೆ ಎಚ್ ಎಎಲ್  ಮ್ಯೂಸಿಯಂ ಎದುರು ಈ ಘಟನೆ ನಡೆದಿದೆ. ಪಾನಿಪೂರಿ ವ್ಯಾಪಾರಿಯಾಗಿರುವ ಶಿಬು  ಲಾಲ್ ಏಕಮಖ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬರುವಾಗ ಎದುರಿನಿಂದ ದ್ವಿಚಕ್ರ  ವಾಹನವೊಂದು  ವೇಗವಾಗಿ ಬಂದ ಪರಿಣಾಮ  ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಈ  ವೇಳೆ  ಎಡ ಬದಿಗೆ ಬಿದ್ದ ಶಿಬುಲಾಲ್ ಮೇಲೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ಬಸ್‍ನ ಚಕ್ರ  ಉರುಳಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆತನನ್ನು ಸ್ಥಳೀಯರು ಸಮೀಪದ  ಆಸ್ಪತ್ರೆಗೆ  ಕರೆದೊಯ್ದರು. ಅಷ್ಟರಲ್ಲಾಗಲೇ ಶಿಬುಲಾಲ್ ಮೃತಪಟ್ಟಿದ್ದರು.

ಮತ್ತೊಂದು ದ್ವಿಚಕ್ರ ವಾಹನ ಸವಾರರು ಬಲಬದಿಯ ರಸ್ತೆ ತಡೆಗೋಡೆಗೆ ಗುದ್ದಿದರೂ ಸಣ್ಣಪುಟ್ಟ ಗಾಯಗಳೊಂದಿಗೆ  ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT