ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ದ್ವಿಚಕ್ರ ವಾಹನ ಸವಾರ ಸಾವು

ಎರಡು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಲ್ಲಿ ರಸ್ತೆಗೆ ಬಿದ್ದ ಸವಾರನೊಬ್ಬನ ಮೇಲೆ ಬಿಎಂಟಿಸಿ ಬಸ್ ಚಕ್ರಕ್ಕೆ ಉರುಳಿ ಗಾಯಗೊಂಡು...ಮೃತಪಟ್ಟಿರುವ

ಬೆಂಗಳೂರು: ಎರಡು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಲ್ಲಿ ರಸ್ತೆಗೆ ಬಿದ್ದ    ಸವಾರನೊಬ್ಬನ ಮೇಲೆ ಬಿಎಂಟಿಸಿ ಬಸ್ ಚಕ್ರಕ್ಕೆ ಸಿಕ್ಕಿ ಗಾಯಗೊಂಡು  ಮೃತಪಟ್ಟಿರುವ  ಘಟನೆ ಹಳೇ ಏರ್‍ಪೋರ್ಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ಮಾರತ್ ಹಳ್ಳಿ ನಿವಾಸಿ ಶಿಬುಲಾಲ್(18) ಮೃತಪಟ್ಟವರು. ಎಚ್‍ಎಎಲ್ ಮಾರ್ಕೆಟ್  ಕಡೆಯಿಂದ ತಮ್ಮ ದ್ವಿಚಕ್ರ ವಾಹನದಲ್ಲಿ  ಬರುತ್ತಿದ್ದಾಗ ಬೆಳಗ್ಗೆ 6.30ರ ಸುಮಾರಿಗೆ ಎಚ್ ಎಎಲ್  ಮ್ಯೂಸಿಯಂ ಎದುರು ಈ ಘಟನೆ ನಡೆದಿದೆ. ಪಾನಿಪೂರಿ ವ್ಯಾಪಾರಿಯಾಗಿರುವ ಶಿಬು  ಲಾಲ್ ಏಕಮಖ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬರುವಾಗ ಎದುರಿನಿಂದ ದ್ವಿಚಕ್ರ  ವಾಹನವೊಂದು  ವೇಗವಾಗಿ ಬಂದ ಪರಿಣಾಮ  ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಈ  ವೇಳೆ  ಎಡ ಬದಿಗೆ ಬಿದ್ದ ಶಿಬುಲಾಲ್ ಮೇಲೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ಬಸ್‍ನ ಚಕ್ರ  ಉರುಳಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆತನನ್ನು ಸ್ಥಳೀಯರು ಸಮೀಪದ  ಆಸ್ಪತ್ರೆಗೆ  ಕರೆದೊಯ್ದರು. ಅಷ್ಟರಲ್ಲಾಗಲೇ ಶಿಬುಲಾಲ್ ಮೃತಪಟ್ಟಿದ್ದರು.

ಮತ್ತೊಂದು ದ್ವಿಚಕ್ರ ವಾಹನ ಸವಾರರು ಬಲಬದಿಯ ರಸ್ತೆ ತಡೆಗೋಡೆಗೆ ಗುದ್ದಿದರೂ ಸಣ್ಣಪುಟ್ಟ ಗಾಯಗಳೊಂದಿಗೆ  ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT