ಪದ್ಮನಾಭ ಪ್ರಸನ್ನ 
ಜಿಲ್ಲಾ ಸುದ್ದಿ

ಸಂಸದೀಯ ಕಾರ್ಯದರ್ಶಿಗಳ ನೇಮಕ: ಅರ್ಜಿ ಹಿಂದಕ್ಕೆ

ರಾಜ್ಯ ಸರ್ಕಾರ ವಿಧಾನ ಸಭೆಯ 10 ಹಾಗೂ ವಿಧಾನ ಪರಿಷತ್‍ನ ಒಬ್ಬ ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಿರುವ ಕ್ರಮವನ್ನು ಪ್ರಶ್ನಿಸಿ ...

ಬೆಂಗಳೂರು: ರಾಜ್ಯ ಸರ್ಕಾರ ವಿಧಾನ ಸಭೆಯ 10 ಹಾಗೂ ವಿಧಾನ ಪರಿಷತ್‍ನ ಒಬ್ಬ ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಿರುವ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಜನತಾ ಪಕ್ಷದ ಮುಖಂಡ ಪದ್ಮನಾಭ ಪ್ರಸನ್ನಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.

ಅರ್ಜಿಯ ನಡೆಸಿದ ನ್ಯಾಯಮೂರ್ತಿ  ಬಿ.ಹಿಂಚೆಗೇರಿ ಅವರಿದ್ದ ನ್ಯಾಯಪೀಠ, ಆರ್ಜಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಕೂಡಿದ್ದು, ತಕರಾರು ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿಲ್ಲ. ಆದ್ದರಿಂದಾಗಿ ಸಾರ್ವಜನಿಕ ಹಿತಾಸಕ್ತಿ ಸಲ್ಲಿಸಿ ಎಂದು ಸೂಚಿಸಿದರು. ನ್ಯಾಯಪೀಠದ ಆದೇಶದಲ್ಲಿ ಅರ್ಜಿಯನ್ನು ಹಿಂಪಡೆದರು.

ಸಂವಿಧಾನದ ಅನುಚ್ಛೇದ 164ರ ಪ್ರಕಾರ ಒಟ್ಟು ಶಾಸಕರಲ್ಲಿ ಶೇ.15 ರಷ್ಟು ಮಾತ್ರ ಸಚಿವರಿರಬೇಕು ಎಂಬ ನಿಯಮವಿದೆ. ಆದರೆ ಸರ್ಕಾರ ನಿಯಮವನ್ನು ಉಲ್ಲಂಘಿಸಿ ಸಚಿವರ ಸ್ಥಾನಮಾನ ನೀಡಿ 11 ಜನ ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಆದೇಶಿಸಿದೆ. ಇದು ಸಂವಿಧಾನ ಬಾಹಿರ. ಸರ್ಕಾರದ ಈ ನಿರ್ಧಾರದಿಂದಾಗಿ ಸಾರ್ವಜನಿಕರ  ತೆರಿಗೆ ಹಣವನ್ನು ಅನಗತ್ಯವಾಗಿ ದುಂದು ವೆಚ್ಚಕ್ಕೆ ಮುಂದಾಗಿದೆ ಎಂದು ಆರೋಪಿಸಲಾಗಿತ್ತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT