ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಶಿಕ್ಷಣದ ಜೊತೆಗೆ ಯೋಗ ಕೇಂದ್ರ ತೆರೆಯಲು ಮುಂದಾದ ಸರ್ಕಾರ

ನೂತನ ಶಿಕ್ಷಣ ನೀತಿ ಜಾರಿಗೆ ತರುವ ಉತ್ಸಾಹದಲ್ಲಿ ಕೇಂದ್ರ ಸರ್ಕಾರ ಉತ್ಸಾಹದಲ್ಲಿ ಕೇಂದ್ರ ಸರ್ಕಾರ ಯೋಗವನ್ನು ಶಿಕ್ಷಣದಲ್ಲಿ ಒಂದು ಭಾಗವಾಗಿ ರೂಪಿಸಲು ತಯಾರಿ ..

ನೂತನ ಶಿಕ್ಷಣ ನೀತಿ ಜಾರಿಗೆ ತರುವ ಉತ್ಸಾಹದಲ್ಲಿ ಕೇಂದ್ರ ಸರ್ಕಾರ ಉತ್ಸಾಹದಲ್ಲಿ ಕೇಂದ್ರ ಸರ್ಕಾರ ಯೋಗವನ್ನು ಶಿಕ್ಷಣದಲ್ಲಿ  ಒಂದು ಭಾಗವಾಗಿ ರೂಪಿಸಲು ತಯಾರಿ ನಡೆಸಿದೆ.

ಕೇಂದ್ರ ಸಚಿವೆ ಸ್ಮೃತಿ ಇರಾನಿಯ ಈ ವಿಚಾರದಲ್ಲಿ ವಿಶೇಷ ಆಸಕ್ತಿ ತೆಗೆದುಕೊಂಡಿದ್ದು, ಶಿಕ್ಷಣದಿಂದ ಕಾಲೇಜು ಹಂತದವರೆಗೆ ಯಾವ ರೀತಿಯಲ್ಲಿ ಯೋಗವನ್ನು ಅಳವಡಿಸಬಹುದೆಂಬ ಬಗ್ಗೆ ಯೋಗ ತಜ್ಞರಿಂದ ಸಲಹೆಗಳನ್ನು ಸ್ವೀಕರಿಸುತ್ತಿದ್ದಾರೆ.
ಪ್ರಮುಖವಾಗಿ ಬೆಂಗಳೂರಿನಲ್ಲಿರುವ ವಿವೇಕಾನಂದ ಯೋಗ ಅನುಸಂಧಾನ  (ವಿಶ್ವವಿದ್ಯಾಲಯ) ಈ ಸಂಬಂಧ ವರದಿಯನ್ನು ಕೇಳಿರುವ ಸಚಿವರು ಈ ಬಗ್ಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿಶ್ವ ವಿದ್ಯಾಲಯ ಧನಸಹಾಯ ಆಯೋಗದ ಅಧ್ಯಕ್ಷ ಪ್ರೊ. ವೇದ ಪ್ರಕಾಶ್ ಸೇರಿದಂತೆ ಇಲಾಖೆಯ ಪ್ರಮುಖರು ಇದ್ದರು. ಯೋಗ ಶಿಕ್ಷಣ ಅನುಷ್ಠಾನದ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ.

ಪ್ರಾಥಮಿಕ ಶಿಕ್ಷಣದಿಂದ ಕಾಲೇಜು ಹಂತದವರೆಗೆ ಯೋಗವನ್ನು ಪರಿಚಯಿಸುವುದು, ಶಿಕ್ಷಕರಿಗೆ ಮೊದಲು ಯೋಗ ತರಬೇತಿ ನೀಡುವುದು, ದೈಹಿಕ ಶಿಕ್ಷಣದಿಂದ ಯೋಗವನ್ನು ಪ್ರತ್ಯೇಕವಾಗಿಸುವುದು, ವಿಶ್ವವಿ ದ್ಯಾಲಯಗಳು ಯೋಗಕ್ಕಾಗಿಯೇ ಒಂದು ಪ್ರತ್ಯೇಕ ವಿಭಾಗ ಆರಂಭಿಸುವುದು, ಯೋಗವನ್ನು ಕಲೆ, ಸಂಸ್ಕೃತಿ, ವಿಜ್ಞಾನವಾಗಿ ಒಂದು ಪ್ರಾಧಾನ್ಯತೆ ಕಲ್ಪಿಸುವುದು.  ಯೋಗ ಕೇವಲ ದೈಹಿಕ ಕಸರತ್ತಷ್ಟೇ ಅಲ್ಲ ಉತ್ತಮ ಮನಸ್ಥಿತಿಗೂ ಪೂರಕ ಎಂಬುದನ್ನು ಎತ್ತಿ ಹಿಡಿಯುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ.

ಅನುಷ್ಠಾನ ಹೇಗೆ?: ದೇಶಾದ್ಯಂತ ಶಿಕ್ಷಕರಿಗೆ ತರಬೇತಿ ನೀಡುವ ಅನೇಕ ಸಂಸ್ಥೆಗಳಿವೆ, ಅಲ್ಲಿ ಯೋಗ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತದೆ. ಇದರಿಂದ ಮುಂದೆ ಸಹಜವಾಗಿ ಶಾಲಾ ಹಂತದಲ್ಲಿ ಯೋಗ ಅರಿತ ಶಿಕ್ಷಕರು ರೂಪುಗೊಳ್ಳುತ್ತಾರೆ. ಇನ್ನು ಯೋಗವನ್ನು ಶಿಕ್ಷಣದ ಭಾಗವಾಗಿಸುವುದು ಪ್ರತಿ ರಾಜ್ಯಗಳ ಜವಾಬ್ದಾರಿಯಾಗಿರುತ್ತದೆ, ಅದನ್ನು ರೂಪಿಸಲು ಕೇಂದ್ರಸರ್ಕಾರ ರಾಜ್ಯಗಳಿಗೆ ಸಲಹೆ ನೀಡಲಿದೆ ಎಂದು ತಿಳಿದುಬಂದಿದೆ. ಇನ್ನು ಯುಜಿಸಿಯು ಕಾಲೇಜುಗಳಲ್ಲಿ ಯೋಗಕ್ಕೆ ಪ್ರಾಧಾನ್ಯತೆ ಕಲ್ಪಿ ಸುವ ಕಾರ್ಯದ ಹೊಣೆ ಹೊತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT