ಜಿಲ್ಲಾ ಸುದ್ದಿ

ಕರ್ನಾಟಕ ಸೇರಿದಂತೆ ದೇಶದಲ್ಲಿ 6 ಫಾರ್ಮಾ ಪಾರ್ಕ್ ಸ್ಥಾಪನೆ: ಅನಂತ್ ಕುಮಾರ್

ಕರ್ನಾಟಕ ಸೇರಿದಂತೆ ದೇಶ ಆರು ಭಾಗಗಳಲ್ಲಿ ಫಾರ್ಮ್ ಪಾರ್ಕ್‍ಗಳು ಮತ್ತು 12 ರಾಷ್ಟ್ರೀಯ ಔಷಧೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಅನಂತ್ ಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಭಾರತೀಯ ಔಷಧ ಮತ್ತು ವೈದ್ಯಕೀಯ ವಲಯದ ಬೆಳವಣಿಯ ದೃಷ್ಟಿಯಿಂದ ಕರ್ನಾಟಕ ಸೇರಿದಂತೆ ದೇಶ ಆರು ಭಾಗಗಳಲ್ಲಿ ಫಾರ್ಮ್ ಪಾರ್ಕ್‍ಗಳು ಮತ್ತು 12 ರಾಷ್ಟ್ರೀಯ ಔಷಧೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ  ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.

ಗುರುವಾರ ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ `ಇಂಡಿಯಾ ಮೆಡಿಕಲ್ ಫಾರ್ಮ್ ಮತ್ತು ಇಂಡಿಯಾ ಮೆಡಿಕಲ್ ಎಕ್ಸ್ ಪೊ-2016 ಉದ್ಘಾಟಿಸಿ ಮಾತನಾಡಿದ ಅವರು, ಅತಿ ಹೆಚ್ಚು ಔಷಧಿಗಳ ಉತ್ಪಾದನೆಯಲ್ಲಿ ಭಾರತ ವಿಶ್ವದ 3 ನೇ ರಾಷ್ಟ್ರವಾಗಿದೆ. 2020 ವೇಳೆಗೆ ಭಾರತ ಔಷಧೀಯ ಕ್ಷೇತ್ರವನ್ನು ಮುನ್ನಡೆಸಲಿದೆ. ಕರ್ನಾಟಕ ಸರ್ಕಾರ ಈಗಾಗಲೇ ಪಾರ್ಕ್ ನಿಮರ್ಮಾಣಕ್ಕೆ ಜಮೀನು ಹಾಗೂ ಮೂಲಸೌಕರ್ಯಗಳನ್ನು ಒದಗಿಸಿಕೊಡುವ ಭರವಸೆ ನೀಡಿದೆ. ಮುಂದಿನ ತಿಂಗಳು ನಡೆಯುವ `ಇನ್ವೆಸ್ಟ್ ಕರ್ನಾಟಕ 2016' ಜಾಗತಿಕ ಸಮಾವೇಶದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಧಿಕಾರಿಗಳು ಒಡಂಬಡಿಕೆಗೆ ಸಹಿ ಹಾಕಲಿದ್ದಾರೆ.

ಉಳಿದಂತೆ ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ಆಂಧ್ರಪ್ರದೇಶಗಳಲ್ಲಿ ಪಾಕ್ರ್ ಗಳು ಸ್ಥಾಪನೆಯಾಗಲಿವೆ ಎಂದರು. ಜಗತ್ತಿನಲ್ಲಿ ಜನರು ಸೇವಿಸುವ 5 ಮಾತ್ರೆಗಳ ಪೈಕಿ 1 ಮಾತ್ರೆ ಭಾರತದ್ದಾಗಿದ್ದು, ಔಷಧಗಳ ಉತ್ಪಾದನಾ ವೆಚ್ಚವನ್ನು ಶೇ.30ರಷ್ಟು ಕಡಿಮೆ ಮಾಡಿದರೆ ಭಾರತ ಚೀನಾ ದೇಶಕ್ಕೆ ಇನ್ನಷ್ಟು ಪೈಪೋಟಿ ನೀಡಬಹುದಾಗಿದೆ. ಸಂಶೋಧನೆ ಮತ್ತು ಅಭಿವೃದ್ಧಿ  ಕೈಗಾರಿಕೆಗಳ ಬೆನ್ನೆಲುಬಾಗಿದ್ದು ಕೇಂದ್ರ ನೀಡುತ್ತಿರುವ ಅನುದಾನವನ್ನು ಮುಂದುವರಿಸುವ ಕುರಿತು ಮಾತುಕತೆ ನಡೆಸಲು ಕೇಂದ್ರ ಹಣಕಾಸು ಸಚಿವರ ಬಳಿಗೆ ಉದ್ಯಮಿಗಳ ನಿಯೋಗ ಕರೆದುಕೊಂಡು ಹೋಗಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!