ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಯಲ್ಲಮ್ಮದೇವಿ ಜಾತ್ರೆಯಲ್ಲಿ ಪ್ರಾಣಿ ಬಲಿ

ಜಿಲ್ಲಾ ಆಡಳಿತದ ನಿಷೇಧದ ನಡುವೆಯೂ ಕೊಕಟನೂರಿನ ಯಲ್ಲಮ್ಮ ದೇವಿ ಜಾತ್ರೆ ಸಂದರ್ಭದಲ್ಲಿ ಗುರುವಾರ ಪ್ರಾಣಿ ಬಲಿ ಅವ್ಯಾಹತವಾಗಿ ನಡೆದಿದೆ. ಜ.5 ರಿಂದಲೇ ...

ಅಥಣಿ: ಜಿಲ್ಲಾ ಆಡಳಿತದ ನಿಷೇಧದ ನಡುವೆಯೂ ಕೊಕಟನೂರಿನ ಯಲ್ಲಮ್ಮ ದೇವಿ ಜಾತ್ರೆ ಸಂದರ್ಭದಲ್ಲಿ ಗುರುವಾರ ಪ್ರಾಣಿ ಬಲಿ ಅವ್ಯಾಹತವಾಗಿ ನಡೆದಿದೆ. ಜ.5 ರಿಂದಲೇ ಕೊಕಟನೂರಿನ ಯಲ್ಲಮ್ಮ ದೇವಿಯ ಜಾತ್ರೆ ಆರಂಭವಾಗಿತ್ತು.

ಆರಂಭದ ಎರಡು ದಿನ ಪ್ರಾಣಿ ಬಲಿ, ನೈವೇದ್ಯ ಇರಲಿಲ್ಲ. ಆದರೆ ಗುರುವಾರ ಪೊಲೀಸರು ಹಾಗೂ ಪ್ರಾಣಿ ದಯಾ ಸಂಘದವರ ಕಣ್ಣು ತಪ್ಪಿಸಿ ಮಾತಂಗಿ ದೇವಿಗೆ ಪ್ರಾಣಿ ಮಾಂಸ ನೈವೇದ್ಯ ಮಾಡಿದರು. ದೇವಾಲಯದ ಮುಂಭಾಗ ಅಥವಾ ಹತ್ತಿರದಲ್ಲಿ ಪ್ರಾಣಿ ಬಲಿ ನಡೆದಿಲ್ಲ.

ಬದಲು ಸ್ವಲ್ಪ ದೂರದಲ್ಲಿ ದೂರದ ಗ್ರಾಮಗಳಿಂದ ಬಂದ ಜನರು ಟೆಂಟ್ ಹಾಕಿಕೊಂಡು ಅಲ್ಲಿಯೇ ಪ್ರಾಣಿ ಬಲಿ ನಡೆಸಿ ಮಾತಂಗಿ ದೇವಿಗೆ ನೈವೇದ್ಯ ಅರ್ಪಿಸಿದರು. ದೂರದ ಹೊಲಗಳಲ್ಲಿ, ವಾಹನ ನಿಲ್ಲಿಸುವ ಸ್ಥಳಗಳಲ್ಲಿ ಪ್ರಾಣಿ ಬಲಿ ಮಾಡಲಾಗಿದ್ದು, ಅಲ್ಲಲ್ಲಿ ರಕ್ತವೂ ಬಿದ್ದಿದೆ. ಮಾಂಸಗಳನ್ನು ನೇತು ಹಾಕಿದ ದೃಶ್ಯಗಳೂ ಪತ್ರಕರ್ತರ ಕಣ್ಣಿಗೆ ಬಿದ್ದವು. ಆದರೆ ಇದನ್ನು ತಡೆಯಬೇಕಾದ ತಾಲೂಕು ಆಡಳಿತದ ಯಾವ ಅಧಿಕಾರಿಯೂ ಅಲ್ಲಿ ಇರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT