ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಟೆಕ್ಕಿಗಳ ದೋಚಿದ್ದ ಇಬ್ಬರು ನಕಲಿ ಪೊಲೀಸರ ಬಂಧನ

ಪೊಲೀಸರ ಸೋಗಿನಲ್ಲಿ ಹಣ ಸುಲಿಗೆ ಮಾಡಿದ್ದ ಪ್ರಕರಣ ಭೇದಿಸಿರುವ ತಲಘಟ್ಟಪುರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ..

ಬೆಂಗಳೂರು: ಪೊಲೀಸರ ಸೋಗಿನಲ್ಲಿ ಹಣ ಸುಲಿಗೆ ಮಾಡಿದ್ದ ಪ್ರಕರಣ ಭೇದಿಸಿರುವ ತಲಘಟ್ಟಪುರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಮನಗರ ಜಿಲ್ಲೆ ನರಸಿಂಹಯ್ಯನ ದೊಡ್ಡಿ ನಿವಾರಿ ರಘು (29) ಮತ್ತು ಲಕ್ಷ್ಮೀಪುರ ಗ್ರಾಮದ ಗೋವಿಂದರಾಜು (43)ಬಂಧಿತರು. ಆರೋಪಿಗಳು ಡಿ.19ರಂದು ಸಂಜೆ 6.30ರ ಸುಮಾರಿಗೆ ನೈಸ್  ರಸ್ತೆಯ ಬನ್ನೇರುಘಟ್ಟ ಟೋಲ್ ಬಳಿ ಇಬ್ಬರು ಟೆಕ್ಕಿ ಗೆಳೆಯರಿದ್ದ ಕಾರು ಅಡ್ಡಗಟ್ಟಿ ಪೊಲೀಸರೆಂದು ಹೆದರಿಸಿ ಎಟಿಎಂನಿಂದ ರು.60 ಸಾವಿರ ಹಣ ಡ್ರಾ ಮಾಡಿಸಿಕೊಂಡು ಪರಾರಿಯಾಗಿದ್ದರು.

ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ಕಾರ್ಯಾಚರಣೆಗೆ ಮುಂದಾದ ತಲಘಟ್ಟಪುರ ಪೊಲೀಸರು, ಜ.4ರಂದು ಆರೋಪಿಗಳನ್ನು ಕಗ್ಗಲಿಪುರದ ಬಳಿ ಬಂಧಿಸುವ ಮೂಲಕ ರು.52 ಸಾವಿರ  ನಗದು, ಸ್ವಿಫ್ಟ್ ಕಾರು ಹಾಗೂ ಪೊಲೀಸ್ ಸಮವಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಎರಡು ಬಾರಿ ಜೈಲು: ಆರೋಪಿ ರಘು 2012ರಲ್ಲೂ ಸ್ನೇಹಿತರ ಜತೆಗೂಡಿ ಪೊಲೀಸರೆಂದು ಹೇಳಿಕೊಂಡು ರಾಮನಗರ ಗ್ರಾಮಾಂತರ ಮತ್ತು ರಾಜರಾಜೇಶ್ವರಿನಗರ ಠಾಣೆ ವ್ಯಾಪ್ತಿಯಲ್ಲಿ ಪ್ರೇಮಿಗಳನ್ನು  ಹೆದರಿಸಿ ಹಣ ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಆರೋಪಿ ರಘುನನ್ನು ಬಂಧಿಸಿದ್ದ ಪೊಲೀಸರು ಬಳಿಕ ಜೈಲಿಗಟ್ಟಿದ್ದರು. ರಾಮನಗರ ಕಾರಾಗೃಹದಲ್ಲಿ 3 ತಿಂಗಳು ಮತ್ತು ನಗರದ  ಕಾರಗೃಹದಲ್ಲಿ 7 ದಿನ ಶಿಕ್ಷೆ ಅನುಭವಿಸಿದ ಬಳಿಕ ಆರೋಪಿ ಜಾಮೀನು ಮೇಲೆ ಹೊರ ಬಂದಿದ್ದ ಎಂದು ಪೊಲೀಸರು ತಿಳಿಸಿದರು.
 
ರಾಮನಗರದಲ್ಲಿ ಹೋಂ ಗಾರ್ಡ್ ಆಗಿ ಕೆಲಸ ಮಾಡುವ ವೇಳೆ ಇದೇ ಮಾದರಿ ಪ್ರಕರಣದಲ್ಲಿ ಸಿಲುಕಿದ್ದ ರಘುನನ್ನು ಕೆಲಸದಿಂದ ತೆಗೆಯಲಾಗಿತ್ತು. ಬಳಿಕ ಹಾರೋಹಳ್ಳಿಯಲ್ಲಿ ಬಾಡಿಗೆ ಕಾರು ಚಾಲಕನಾಗಿ  ಕಾರ್ಯ ನಿರ್ವಹಿಸುತ್ತಿದ್ದ. ಇತ್ತೀಚೆಗೆ ಆರೋಪಿ ಗೋವಿಂದರಾಜು ಮತ್ತು ಈತ ಸ್ನೇಹಿತರಾಗಿದ್ದರು. ಬಳಿಕ ಇಬ್ಬರು ಪೊಲೀಸರೆಂದು ಹೇಳಿಕೊಂಡು ನಗರದ ಹೊರವಲಯದಲ್ಲಿ ವಾಯು ವಿಹಾರಕ್ಕೆ ಬರುವ  ಪ್ರೇಮಿಗಳು, ಗೆಳೆಯರನ್ನು ಹೆದರಿಸಿ ಸುಲಿಗೆ ಮಾಡುತ್ತಿದ್ದರು. ಡಿ.19ರಂದು ಟೆಕ್ಕಿಗಳ ಕಾರು ಅಡ್ಡಗಟ್ಟಿ ಆರೋಪಿಗಳು, ಅನೈತಿಕ ಚಟುವಟಿಕೆ ನಡೆಸುತ್ತಿದ್ದೀರಾ ಎಂದು ಹೆದರಿಸಿದ್ದರು. ಬಳಿಕ  ತಲಘಟ್ಟಪುರಕ್ಕೆ ಕರೆದೊಯ್ದು ಎಟಿಎಂನಲ್ಲಿ ಹಣ ಬಿಡಿಸಿಕೊಂಡು ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT