ಮುದ್ದೆ ಕೋಲಿನಿಂದ ಪತಿಯ ಕೊಂದ ಪತ್ನಿ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಮುದ್ದೆ ಕೋಲಿನಿಂದ ಪತಿಯ ಕೊಂದ ಪತ್ನಿ

ದಿನನಿತ್ಯ ಕುಡಿದು ಮನೆಗೆ ಬಂದು ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಗಂಡನನ್ನು ತನ್ನ ಸಹೋದರನ ಜೊತೆ ಸೇರಿ ಪತ್ನಿಯೇ ಹತ್ಯೆಗೈದಿರುವ ಘಟನೆ ಕೆ.ಆರ್.ಪುರದ ಭಟ್ಟರಹಳ್ಳಿಯಲ್ಲಿ ಗುರುವಾರ ನಡೆದಿದೆ...

ಬೆಂಗಳೂರು: ದಿನನಿತ್ಯ ಕುಡಿದು ಮನೆಗೆ ಬಂದು ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಗಂಡನನ್ನು ತನ್ನ ಸಹೋದರನ ಜೊತೆ ಸೇರಿ ಪತ್ನಿಯೇ ಹತ್ಯೆಗೈದಿರುವ ಘಟನೆ ಕೆ.ಆರ್.ಪುರದ  ಭಟ್ಟರಹಳ್ಳಿಯಲ್ಲಿ ಗುರುವಾರ ನಡೆದಿದೆ.

ಹೆಚ್‍ಎಎಲ್ ಬಳಿಯ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಾರುತಿ (39) ಕೊಲೆಯಾದ ವ್ಯಕ್ತಿ. ಕೆ.ಆರ್.ಪುರದ ಭಟ್ಟರಹಳ್ಳಿ ವಾಸಿಯಾಗಿದ್ದ ಮಾರುತಿ ಕಳೆದ 15 ವರ್ಷಗಳ ಹಿಂದೆ ದಾಸರಹಳ್ಳಿಯ ಶಾರದ ಎಂಬುವರನ್ನು ವಿವಾಹವಾಗಿದ್ದರು. ಇವರಿಗೆ ವಿಕಲಚೇತನ ಪುತ್ರ ಆದಿತ್ಯ ಹಾಗೂ ಪುನೀತ್ ಎಂಬ ಗಂಡು ಮಕ್ಕಳಿದ್ದಾರೆ. ಕೆಲಸಕ್ಕೆ ಹೋಗುತ್ತಿದ್ದ ಮಾರುತಿ ಕುಡಿದ ಅಮಲಿನಲ್ಲಿ ಮನೆಗೆ ಬರುತ್ತಿದ್ದ. ವಿನಾಃಕಾರಣ ಪತ್ನಿಯ ಮೇಲೆ ಜಗಳ ಮಾಡುತ್ತಿದ್ದ.

ಈ ಸಂಬಂಧ ಕೆ.ಆರ್.ಪುರ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಕೌಟುಂಬಿಕ ವಿಚಾರವಾದ ಕಾರಣ ಸಂಧಾನ ಮಾಡಿಕೊಳ್ಳುವುದಾಗಿ ಶಾರದ ಪೊಷಕರು ಬುಧವಾರ ಸಂಜೆ ಠಾಣೆಯಿಂದ  ಇಬ್ಬರನ್ನು ಕರೆದೊಯ್ದಿದ್ದರು. ಠಾಣೆಯಿಂದ ಹೋದ ಮಾರುತಿ ಮನೆಗೆ ಹೋಗಿರಲಿಲ್ಲ, ಗುರುವಾರ ಬೆಳಗಿನ ಜಾವ 3ಗಂಟೆ ಸುಮಾರಿಗೆ ಕಂಠ ಪೂರ್ತಿ ಕುಡಿದು ಮನೆಗೆ ಹೋಗಿ ಮತ್ತೆ ಜಗಳ ಮಾಡಿದ್ದಾನೆ.

ಇದರಿಂದ ಕೋಪಗೊಂಡ ಪತ್ನಿ ಶಾರದ ತನ್ನ ಸಹೋದರ ಧನರಾಜ್ ನನ್ನು ಕರೆಸಿಕೊಂಡಿದ್ದಾಳೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ. ಸಿಟ್ಟಿಗೆದ್ದ ಶಾರಧ ಮತ್ತು ಆಕೆಯ ಸಹೋಧರ ಮುದ್ದೆ  ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಕುಸಿದು ಬಿದ್ದ ಮಾರುತಿಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೆ.ಆರ್. ಪುರ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT