(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ನಿರುದ್ಯೋಗಿಗಳಿಗೆ ವಂಚಿಸುತ್ತಿದ್ದವನ ಬಂಧನ

ನಕಲಿ ನೇಮಕಾತಿ ಪತ್ರ, ಪ್ರಮಾಣ ಪತ್ರ, ಗುರುತಿನ ಚೀಟಿ ಸೃಷ್ಟಿಸಿ ನಿರುದ್ಯೋಗಿಗಳಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಕೊಡಿಸುತ್ತಿದ್ದ ಜಾಲವೊಂದರ ಮೇಲೆ ದಾಳಿ ನಡೆಸಿರುವ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು, ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ...

ಬೆಂಗಳೂರು: ನಕಲಿ ನೇಮಕಾತಿ ಪತ್ರ, ಪ್ರಮಾಣ ಪತ್ರ, ಗುರುತಿನ ಚೀಟಿ ಸೃಷ್ಟಿಸಿ ನಿರುದ್ಯೋಗಿಗಳಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಕೊಡಿಸುತ್ತಿದ್ದ ಜಾಲವೊಂದರ ಮೇಲೆ ದಾಳಿ ನಡೆಸಿರುವ ಕೇಂದ್ರ ಅಪರಾಧ ವಿಭಾಗದ(ಸಿಸಿಬಿ) ಪೊಲೀಸರು, ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.

ಕಸ್ತೂರಿನಗರದ ಕಂಡಿಪಟ್ಟಿ (35) ಬಂಧಿತ ಆರೋಪಿ. ಮೂಲತಃ ಆಂಧ್ರಪ್ರದೇಶದ ತಡ ಮಂಡಲದ ಆರೋಪಿಯು ನಗರದ ಕಸ್ತೂರಿನಗರ ಈಸ್ಟ್ ಆಫ್ಎನ್‍ಜಿಇಎಫ್ ನಲ್ಲಿ ಮೇನಿಕ್ಯೂ
ಸಾಫ್ಟ್ ವೇರ್ ಸೆಲ್ಯೂಷನ್ಸ್ ಮತ್ತು ಎಕೋನಿಕ್ಸ್ ಟೆಕ್ನಾಲಜೀಸ್ ಹೆಸರಿನಲ್ಲಿ ಕಚೇರಿ ತೆರೆದಿದ್ದ. ನಿರುದ್ಯೋಗಿ ಯುವಕರಿಂದರು.10- ರಿಂದರು.15 ಸಾವಿರ ಹಣ ಪಡೆದು ನಕಲಿ ನೇಮಕಾತಿ ಪತ್ರ, ವೇತನ ಪ್ರಮಾಣ ಪತ್ರ, ಬಿಡುಗಡೆ ಪತ್ರ, ಗುರುತಿನ ಚೀಟಿ ನೀಡುವ ಮೂಲಕ ಅಕ್ರಮವಾಗಿ ಹಣಗಳಿಸುತ್ತಿದ್ದ. ಈ ಕುರಿತು ಮಾಹಿತಿ ಸಂಗ್ರಹಿಸಿದ ಸಿಸಿಬಿ ಪೊಲೀಸರು ಆರೋಪಿಯ ಎರಡು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಕಂಪ್ಯೂಟರ್, ಲ್ಯಾಪ್‍ಟಾಪ್ ಸೇರಿದಂತೆ ಕೆಲ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಪಾಲುದಾರಿಕೆಯಲ್ಲಿ ಕಳೆದ ಒಂದು ವರ್ಷದ ಹಿಂದೆ ಕಂಪನಿ ಆರಂಭಿಸಿದ್ದ ಆರೋಪಿಯು ಈ ಅವಧಿಯಲ್ಲಿ ಸುಮಾರು 500 ಮಂದಿ ನಿರುದ್ಯೋಗಿ ಯುವಕರಿಗೆ ನಕಲಿ ದಾಖಲೆಗಳನ್ನು ನೀಡಿ ಹಣ ಪಡೆದಿದ್ದಾನೆ. ನಿರುದ್ಯೋಗಿಗಳು ಇಂದಿಗೂ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ವಿಚಾರಣೆಯಿಂದ ತಿಳಿದು ಬಂದಿದೆ. ಪಾಲುದಾರರಾದ ವಿಶ್ವನಾಥ್ ರೆಡ್ಡಿ, ಮೋಹನ ಮತ್ತು ಜಯಕುಮಾರ್ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT