ದಿನೇಶ್ ಗುಂಡೂರಾವ್ 
ಜಿಲ್ಲಾ ಸುದ್ದಿ

ಪಡಿತರ ವಿತರಕರು ಬಾಕಿ ಹಣ ಪಡೆಯಲು ಅಗತ್ಯ ದಾಖಲೆ ಸಲ್ಲಿಸಬೇಕು: ದಿನೇಶ್ ಗುಂಡೂರಾವ್

ಪಡಿತರ ಆಹಾರ ಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ರಾಜ್ಯದಲ್ಲಿ ನಿಗಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು...

ಬೆಂಗಳೂರು: ಪಡಿತರ ಆಹಾರ ಧಾನ್ಯಗಳನ್ನು  ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಯಲು ರಾಜ್ಯದಲ್ಲಿ ನಿಗಾ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಶುಕ್ರವಾರ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಆಯೋಜಿಸಿದ್ದ 30 ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ರಾಜ್ಯ ಮಟ್ಟದ  ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು ಪಡಿತರ ಆಹಾರ ಪದಾರ್ಥಗಳು  ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಲು ಈಗಾಗಲೇ ಲಾರಿಗಳಿಗೆ ಜಿಪಿಎಸ್ ಅಳವಡಿಸಲಾಗಿದ್ದು, ಅವುಗಳು ಸಂಚರಿಸುವ ಮಾರ್ಗ ತಿಳಿಯಲು ನಿಗಾ ಘಟಕಗಳನ್ನು  ಸ್ಥಾಪಿಸಲಾಗುವುದು, ಇದರಿಂದ ಲಾರಿಗಳು ಯಾವ ಮಾರ್ಗದಲ್ಲಿ  ಚಲಿಸುತ್ತವೆ  ಸರಿಯಾದ ಸಮಯಕ್ಕೆ ನಿಗದಿ ಪಡಿಸಿದ ಸ್ಥಳವನ್ನು ತಲುಪಿದೆಯೇ ಎಂಬ ಮಾಹಿತಿಯನ್ನು ನಿಗಾ ಘಟಕಗಳು ಪತ್ತೆ ಹಚ್ಚಲಿವೆ ಎಂದರು.

ಇಲಾಖೆ ಪಡಿತರ ಚೀಟಿಯೊಂದಿಗೆ ಗುರುತಿನ ಚೀಟಿ ಹಾಗೂ ಆಧಾರ್ ಕಾರ್ಡ್ ಜೋಣೆ ಮಾಡುವ ಕಾರ್ಯಕ್ಕೆ ಮುಂದಾಗಿದ್ದು,  ಮುಂದಿನ ಆರು ಆರು ತಿಂಗಳೊಳಗೆ ರಾಜ್ಯದ ಎಲ್ಲಾ ಪಡಿತರ ಪಡೆಯುವವರ ಮಾಹಿತಿ , ಇಲಾಖೆಗೆ ಲಭ್ಯವಾಗಲಿದೆ. ಈ ಮೂಲಕ ರಾಜ್ಯದಲ್ಲಿನ ನಕಲಿ ಪಡಿತರ ಕಾರ್ಡ್ ಗಳನ್ನು ರದ್ದು ಪಡಿಸಬಹುದಾಗಿದೆ.  ಕಳೆದ ಎರಡು ವರೆ ವರ್ಷದಲ್ಲಿ  10 ಲಕ್ಷ ನಕಲಿ ಪಡಿತರ ಕಾರ್ಡ್ ಗಳನ್ನು ರದ್ದು ಪಡಿಸಿದ್ದು, 20 ಲಕ್ಷ ಹೊಸ ಪಡಿತರ ಕಾರ್ಡ್ ಗಳನ್ನು  ವಿತರಿಸಲಾಗಿದೆ.  ಈ ಅವಧಿಯಲ್ಲಿ  ಇಲಾಖೆ ಒಮ್ಮೆಯೂ ಪಡಿತರ ವಿತರಣೆಯನ್ನೂ ನಿಲ್ಲಿಸಿಲ್ಲ. ಪಡಿತರ ವಿತರಣೆಯನ್ನು ನಿಲ್ಲಿಸಿಲ್ಲ.  ಪಡಿತರ ವಿತರಣೆಯಲ್ಲಿ ಕರ್ನಾಟಕ ದೇಶಕ್ಕೆ ಮಾದರಿಯಾಗಿದ್ದು, ಇದನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪಡಿತರ ವಿತರಕರು ಕೆಲಸ ಮಾಡಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರ ಪಡಿತರ ವಿತರಕರಿಗೆ ಕ್ವಿಂಟಾಲ್ ಗೆ 36.ರು ಕಮಿಷನ್ ನೀಡುತ್ತಿದ್ದು, ಆಹಾರ ಭದ್ರತೆ ಕಾಯ್ದೆ ಜಾರಿಗೆ ಬಂದ ನಂತರ ಕೇಂದ್ರ ಸರ್ಕಾರ 34 ರು. ನೀಡುತ್ತಿದ್ದು, ಪಡಿತರ ವಿತರಕರು ಕಳೆದ ಏಪ್ರಿಲ್ ನಿಂದ ಬಾಕಿ ಇರುವ ಹಣವನ್ನು ಪಡೆಯಲು ಬೇಕಾದ ಅಗತ್ಯ ದಾಖಲೆಗಳನ್ನು ಇಲಾಖೆಗೆ ಸಲ್ಲಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! Capital gains ಎಂದು ಪರಿಗಣಿಸುವ ಘೋಷಣೆ

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!

SCROLL FOR NEXT