ಎಚ್.ನರಸಿಂಹಯ್ಯ, (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಎಚ್.ಎನ್ ಹುಟ್ಟೂರು ದೇಶದ ಮೊದಲ ಹೊಗೆ ಮುಕ್ತ ಗ್ರಾಪಂ

ಶಿಕ್ಷಣ ತಜ್ಞ ಡಾ.ಎಚ್ ನರಸಿಂಹಯ್ಯ ಅವರ ಹುಟ್ಟೂರು ಹೊಸೂರು ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಧಾನಸಭಾ ಉಪ ಸಭಾಪತಿ ...

ಗೌರಿಬಿದನೂರು: ಶಿಕ್ಷಣ ತಜ್ಞ ಡಾ.ಎಚ್ ನರಸಿಂಹಯ್ಯ ಅವರ ಹುಟ್ಟೂರು ಹೊಸೂರು ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ವಿಧಾನಸಭಾ ಉಪ ಸಭಾಪತಿ ಎಚ್.ಎನ್ ಶಿವಶಂಕರ ರೆಡ್ಡಿ ಮತ್ತು ಜಿಲ್ಲಾಧಿಕಾರಿ ಡಾ.ಎಂ.ವಿ ವೆಂಕಟೇಶ್ ಅವರು ಹೊಗೆ ಮುಕ್ತ ಗ್ರಾ. ಪಂ ಅನ್ನು ಲೋಕಾರ್ಪಣೆ ಮಾಡಿದರು.

ಹೊಸೂರಿನ ಡಾ.ಎಚ್.ಎನ್ ಪ್ರೌಢಶಾಲಾ ಸಭಾಂಗಣದಲ್ಲಿ ಆಹಾರ ಇಲಾಖೆ, ರಾಘವೇಂದ್ರ ಟ್ರಸ್ಟ್ ಎಜುಕೇಷನ್ ಆಂಡ್ ಎನ್ವಿರಾನ್ಮೆಂಟ್ ಆಕ್ಷನ್ ನೀಡ್ಸ್ ಎಂಬ ಸ್ವಯಂ ಸೇವಾ ಸಂಸ್ಥೆ ಹೊಸೂರು ಗ್ರಾ ಪಂ ಯೋಜನೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸುಮಾರು 1.470 ಕುಟುಂಬಗಳನ್ನು ಹೊಂದಿರುವ ಗ್ರಾಮದಲ್ಲಿ 1.125 ಮನೆಗಳಿಗೆ ಈಗಾಗಲೇ ಅನಿಲ ಸಂಪರ್ಕ ಕಲ್ಪಿಸಲಾಗಿದೆ. ಉಳಿದ 345 ಕುಟುಂಬಗಳಿಗೆ ಕೇಂದ್ರ ಸರ್ಕಾರದ ಸಮುದಾಯ ಸಾಮಾಜಿಕ ಬದ್ಧತಾ ಯೋಜನೆಯಡಿ ಕೇವಲ ರು.1600, ರು. 1.450 ರೆಗ್ಯುಲೇಟರ್ 150 ಕ್ಕೆ ಸಂಪರ್ಕ ನೀಡಲಾಗಿದೆ ಎಂದರು.

ಬಯಲು ಶೌಚ ರಹಿತ ಗ್ರಾಮವಾಗಿಯೂ ಹೊಸೂರು ಗ್ರಾಮವನ್ನು ಮಾಡಲಾಗುವುದು. ಶ್ರೇಣಿಕ್ ಎಂಟರ್ ಪ್ರೈಸಸ್ ಮಾಲಿಕ ಗೀತ ಜಯಂತ್ ಶ್ರಮ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಿದೆ ಎಂದು ಹೇಳಿದರು.

ಶಾಸಕ ಎನ್. ಎಚ್ ಶಿವಶಂಕರ ರೆಡ್ಡಿ ಜಿಲ್ಲಾಧಿಕಾರಿ, ಡಾ.ಎಂ.ವಿ ವೆಂಕಟೇಶ್ ತಾಪಂ ಮಾಜಿ ಅಧ್ಯಕ್ಷ ಎಚ್.ವಿ ಮಂಜುನಾಥ್ ಮಾತನಾಡಿದರು. ಇದೇ ಗ್ರಾಮ ದೇಶದ ಮೊದಲ ಹೊಗೆ ರಹಿತ ಗ್ರಾಮಏ ಎನ್ನುವ ಗೌರವಕ್ಕೆ ಪಾತ್ರವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT