(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಬಿಎಂಟಿಸಿ ಕಲ್ಯಾಣ ಮಂಟಪ ಸಂಸ್ಥೆಗೆ ಶೀಘ್ರದಲ್ಲೇ ವಾಪಸ್

ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಸಂಸ್ಥೆಗಳಿಂದ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಿರ್ಮಾಣ ಮಾಡಲಾಗಿರುವ ಕಲ್ಯಾಣ ಮಂಟಪವನ್ನು ತಿಂಗಳಲ್ಲಿ ಖಾಸಗಿಯವರಿಂದ ಸಂಸ್ಥೆಯ ವಶಕ್ಕೆ ಪಡೆಯಲಾಗುವುದು ಎಂದು ಬಿಎಂಟಿಸಿ ಉಪಾಧ್ಯಕ್ಷ ವಿ.ಎಸ್.ಆರಾಧ್ಯ ತಿಳಿಸಿದ್ದಾರೆ...

ಬೆಂಗಳೂರು: ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿ ಸಂಸ್ಥೆಗಳಿಂದ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಿರ್ಮಾಣ ಮಾಡಲಾಗಿರುವ ಕಲ್ಯಾಣ ಮಂಟಪವನ್ನು ತಿಂಗಳಲ್ಲಿ ಖಾಸಗಿಯವರಿಂದ ಸಂಸ್ಥೆಯ ವಶಕ್ಕೆ ಪಡೆಯಲಾಗುವುದು ಎಂದು ಬಿಎಂಟಿಸಿ ಉಪಾಧ್ಯಕ್ಷ ವಿ.ಎಸ್.ಆರಾಧ್ಯ ತಿಳಿಸಿದ್ದಾರೆ.

ಶುಕ್ರವಾರ ನಂಗರದಲ್ಲಿ ಕೆಎಸ್ಆರ್ ಟಿಸಿಯ ಪ.ಜಾ/ಪ.ಪಂ. ನೌಕರರ ಸಂಘ ಆಯೋಜಿಸಿದ್ದ '2016ರ ಕ್ಯಾಲೆಂಡರ' ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ಇಲಾಖೆಗಳಿಂದ ಕಟ್ಟಿರುವ ಕಲ್ಯಾಣ ಮಂಟಪವನ್ನು ಖಾಸಗಿಯವರಿಗೆ ಭೋಗ್ಯಕ್ಕೆ ನೀಡಲಾಗಿದ್ದು, ಅವರು ಸಾರ್ವಜನಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಜೊತೆಗೆ ಸಂಸ್ಥೆಯ ನೌಕರರಿಂದಲೂ ಅಷ್ಟೇ ಪ್ರಮಾಣದ ಹಣವನ್ನು ವಸೂಲಿ ಮಾಡಿದ್ದು, ಕಲ್ಯಾಣ ಮಂಟಪವನ್ನು ಸಂಸ್ಥೆಯ ವಶಕ್ಕೆ ಪಡೆದು ಸಂಸ್ಥೆಗಳ ನೌಕರರಿಗೆ ಕಡಿಮೆ ಮೊತ್ತಕ್ಕೆ ನೀಡಲಾಗುವುದು. ಇಲಾಖೆಯಲ್ಲಿರುವ ನೌಕರರಿಗಿಂತ ಅವರ ಮೇಲಿನ ಕೇಸುಗಳು ಹಾಗೂ ನೋಟಿಸುಗಳ ಸಂಖ್ಯೆ ಹೆಚ್ಚಿದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ಕಡಿಮೆ ಮಾಡುವ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಂಘದ ರಾಜ್ಯಧ್ಯಕ್ಷ ಎಫ್.ಎಚ್.ಜಕ್ಕಪ್ಪ ಅವರು ಮಾತನಾಡಿ, ಸರ್ಕಾರದಿಂದ ಸರ್ಕಾರದಿಂದ 57 ಲಕ್ಷ ಬಿಡುಗಡೆಗೊಂಡಿದ್ದರೂ ಇನ್ನೂ ಅಂಬೇಡ್ಕರ್ ಭವನ ಹಾಗೂ ಕ್ರೆಡಿಟ್ ಕೋ-ಅಪರೇಟಿವ್ ಬ್ಯಾಂಕ್ ನಿರ್ಮಾಣಕ್ಕೆ ಅಧಿಕಾರಿಗಳು ಜಾಗವನ್ನು ಗುರುತಿಸಿಲ್ಲ. ಸಂಸ್ಥೆಗೆ ನೇಮಕವಾಗಿ 2 ವರ್ಷಗಳು ಕಳೆದರೂ ನೂರಾರು ಜನರಿಗೆ ಇನ್ನೂ ಉದ್ಯೋಗ ಸಿಕ್ಕಿಲ್ಲ ಹಾಗೂ ವಾಯುವ್ಯ ವಿಭಾಗದಲ್ಲಿ ದಿನಕ್ಕೆ ಇಬ್ಬರು ನೌಕರರನ್ನು ಸಣ್ಣಪುಟ್ಟ ಕಾರಣಗಳಿಗೆ ಅಮಾನತು ಮಾಡಲಾಗುತ್ತಿದೆ ಎಂದು ದೂರಿದರು. ಕಾರ್ಯಕ್ರಮದಲ್ಲಿ ಕೆಎಸ್‍ಆರ್‍ಟಿಸಿ ಉಪಾಧ್ಯಕ್ಷ ಲೋಹಿತ್ ಡಿ.ನಾಯ್ಕರ ಹಾಗೂ ರಾಜೇಂದ್ರಕುಮಾರ ಕಟಾರಿಯಾ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT