(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಮಸಾಜ್ ನೆಪದಲ್ಲಿ ಆಭರಣ ದೋಚಿ ಪರಾರಿ

ಮಸಾಜ್ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಗಮನ ಬೇರೆಡೆ ಸೆಳೆದು ಸುರಾರು 100 ಗ್ರಾಂ ತೂಕದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ...

ಬೆಂಗಳೂರು: ಮಸಾಜ್ ಮಾಡುವ ನೆಪದಲ್ಲಿ ಮಹಿಳೆಯೊಬ್ಬರ ಗಮನ ಬೇರೆಡೆ ಸೆಳೆದು ಸುರಾರು 100 ಗ್ರಾಂ ತೂಕದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಶುಕ್ರವಾರ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೈಕೋ ಲೇಔಟ್ ನಿವಾಸಿ ಲಕ್ಷ್ಮೀನರಸಮ್ಮ (58) ಚಿನ್ನಾಭರಣ ಕಳೆದುಕೊಂಡವರು. ಗುರುವಾರವಷ್ಟೇ ಮನೆಗೆಲಸಕ್ಕೆ ಸೇರಿಕೊಂಡಿದ್ದ ಲಕ್ಷ್ಮೀ ಎಂಬಾಕೆ ಈ ಕೃತ್ಯ ಎಸೆಗಿ ಪರಾರಿಯಾಗಿದ್ದಾಳೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆಗೆಲಸಕ್ಕೆ ಬಂದ ಈಕೆ ಮನೆಯೊಡತಿಗೆ ಮಸಾಜ್ ಮಾಡುವುದಾಗಿ ಹೇಳಿದ್ದಾಳೆ.

ಇದಕ್ಕೆ ಒಪ್ಪಿದ ನರಸಮ್ಮ ಮಸಾಜ್ ಮಾಡಿಸಿಕೊಳ್ಳುವಾಗ ಮೈಮೇಲಿದ್ದ ಒಡವೆಗಳನ್ನು ಸ್ವಲ್ಪ ಸಮಯ ಬಿಚ್ಚಿಡುವಂತೆ ಹೇಳಿದ್ದಾಳೆ. ಇದಕ್ಕೂ ಸಮ್ಮತಿಸಿ ಕೊರಳಿನಲ್ಲಿದ್ದ ಚಿನ್ನದ ಸರ ಹಾಗೂ ಕೈಯಲ್ಲಿದ್ದ ಬಳೆಗಳನ್ನು ಬಿಚ್ಚಿ ಅಲ್ಲೇ ಪಕ್ಕಕ್ಕೆ ಇಟ್ಟಿದ್ದಾರೆ. ಮಸಾಜ್ ಮಾಡಿದ ಲಕ್ಷ್ಮೀ ಮೆಲ್ಲೆಗೆ ಕಣ್ಮುಚ್ಚಿ ರಿಲ್ಯಾಕ್ಸ್ ಮಾಡುವಂತೆ ಹೇಳಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲಸಕ್ಕೆ ಸೇರಿ ಕೇವಲ ಒಂದೇ ದಿನದಲ್ಲಿ ಮಹಿಳೆ ಈ ಕೃತ್ಯ ಎಸೆಗಿದ್ದಾಳೆ. ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ ಗಲಾಟೆ: ಆರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್

ನೈಸ್‌ ಯೋಜನೆ: ಡಿ.ಕೆ ಶಿವಕುಮಾರ್ ಆಕ್ಷೇಪ ಸ್ವಾಗತಾರ್ಹ; ಕ್ರಮ ಕೈಗೊಳ್ಳುತ್ತಾರೆಯೇ ಕಾದು ನೋಡೋಣ- ದೇವೇಗೌಡ

20 ಸಾವಿರಕ್ಕೆ ಬಿಹಾರ ಯುವತಿಯರು ವಿವಾಹಕ್ಕೆ ಲಭ್ಯ: ಉತ್ತರಾಖಂಡ ಸಚಿವೆಯ ಪತಿ ವಿವಾದಾತ್ಮಕ ಹೇಳಿಕೆ

ಅಕ್ರಮ ಬಾಂಗ್ಲಾ ವಲಸಿಗರು ಬೆಂಗಳೂರಿಗೆ ಹೇಗೆ ಬಂದರು? ಮೋದಿ- ಅಮಿತ್ ಶಾ ಏನು ಮಾಡುತ್ತಿದ್ದಾರೆ? ರಾಮಲಿಂಗಾ ರೆಡ್ಡಿ ಪ್ರಶ್ನೆ

SCROLL FOR NEXT