ಅಂಕಣಕಾರ ಚಕ್ರವರ್ತಿ ಸೂಲಿಬೆಲೆ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸೂಲಿಬೆಲೆ ಅಂಕಣಕ್ಕೆ ಖಂಡನೆ

ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಯೇಸು ಕ್ರಿಸ್ತನ ಬಗ್ಗೆ ಆಧಾರ ರಹಿತವಾಗಿ ದಿನ ಪತ್ರಿಕೆಯೊಂದರ ಅಂಕಣದಲ್ಲಿ ಬರೆಯುವ ಮೂಲಕ ಅಸಹಿಷ್ಣುತೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆಲ್ ಇಂಡಿಯಾ ಟ್ರೂ ಕ್ರಿಶ್ಚಿಯನ್ ಕೌನ್ಸಿಲ್ ತೀವ್ರವಾಗಿ ಖಂಡಿಸಿದೆ...

ಬೆಂಗಳೂರು: ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಯೇಸು ಕ್ರಿಸ್ತನ ಬಗ್ಗೆ ಆಧಾರ ರಹಿತವಾಗಿ ದಿನ ಪತ್ರಿಕೆಯೊಂದರ ಅಂಕಣದಲ್ಲಿ ಬರೆಯುವ ಮೂಲಕ ಅಸಹಿಷ್ಣುತೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆಲ್ ಇಂಡಿಯಾ ಟ್ರೂ ಕ್ರಿಶ್ಚಿಯನ್ ಕೌನ್ಸಿಲ್ ತೀವ್ರವಾಗಿ ಖಂಡಿಸಿದೆ.

ಶನಿವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕೌನ್ಸಿಲ್‍ನ ರಾಜ್ಯಧ್ಯಕ್ಷ ಸಿ.ರಾಮು ಮಾತನಾಡಿ, ಚಕ್ರವರ್ತಿ ಸೂಲಿಬೆಲೆಯವರು ಅಂಕಣದಲ್ಲಿ `ಯೇಸು ಕ್ರಿಸ್ತ ತಮ್ಮ 14ನೇ ವಯಸ್ಸಿನಲ್ಲಿ ಭಾರತಕ್ಕೆ ಬಂದು ಬುದ್ದನ ಅನುಯಾಯಿಗಳಿಂದ ಆಧ್ಯಾತ್ಮಿಕ ಭೋದನೆ ಕಲಿತಿದ್ದಾರೆ ಎಂದು ಕಲ್ಪಿತವಾಗಿ ಬರೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂಕಣದಲ್ಲಿ ಕ್ರಿಸ್ತನ ಮತ್ತು ಕ್ರೈಸ್ತ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಅಂಕಣದಲ್ಲಿ ಬರೆದಿರುವ ಈ ಹೇಳಿಕೆ ಪುರಾವೆ ರಹಿತ ಮತ್ತು ಅಧ್ಯಯನ ರಹಿತವಾಗಿ ಕೂಡಿದೆ ಅಲ್ಲದೆ ಕ್ರಿಸ್ತನ ಬಗ್ಗೆ ಅವರಿಗೆ ಸರಿಯಾಗಿ ಗೊತ್ತಿಲ್ಲದೆ ಬರೆಯಲಾಗಿದೆ. ಇದರಿಂದ ಕ್ರೈಸ್ತ ಧರ್ಮಕ್ಕೆ ಅಪಮಾನ ಮಾಡಿದಂತಾಗಿದೆ. ಹಾಗೆಯೇ ಇದು ಧಾರ್ಮಿಕ ನಿಂದನೆ ಹಾಗೂ ಅಸಹಿಷ್ಣುತೆಯ ಪ್ರತೀಕವಾಗಿದೆ ಎಂದು ಪ್ರಾತಿಪಾದಿಸಿದರು. ದಲಿತ ಕ್ರಿಶ್ಚಿಯನ್ ಒಕ್ಕೂದ ಸಂಚಾಲಕ ಡಾ.ಮನೋಹರ್ ಚಂದ್ರ ಪ್ರಕಾಶ್ ಮಾತನಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT