ಅಂಕಣಕಾರ ಚಕ್ರವರ್ತಿ ಸೂಲಿಬೆಲೆ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಸೂಲಿಬೆಲೆ ಅಂಕಣಕ್ಕೆ ಖಂಡನೆ

ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಯೇಸು ಕ್ರಿಸ್ತನ ಬಗ್ಗೆ ಆಧಾರ ರಹಿತವಾಗಿ ದಿನ ಪತ್ರಿಕೆಯೊಂದರ ಅಂಕಣದಲ್ಲಿ ಬರೆಯುವ ಮೂಲಕ ಅಸಹಿಷ್ಣುತೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆಲ್ ಇಂಡಿಯಾ ಟ್ರೂ ಕ್ರಿಶ್ಚಿಯನ್ ಕೌನ್ಸಿಲ್ ತೀವ್ರವಾಗಿ ಖಂಡಿಸಿದೆ...

ಬೆಂಗಳೂರು: ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಯೇಸು ಕ್ರಿಸ್ತನ ಬಗ್ಗೆ ಆಧಾರ ರಹಿತವಾಗಿ ದಿನ ಪತ್ರಿಕೆಯೊಂದರ ಅಂಕಣದಲ್ಲಿ ಬರೆಯುವ ಮೂಲಕ ಅಸಹಿಷ್ಣುತೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಆಲ್ ಇಂಡಿಯಾ ಟ್ರೂ ಕ್ರಿಶ್ಚಿಯನ್ ಕೌನ್ಸಿಲ್ ತೀವ್ರವಾಗಿ ಖಂಡಿಸಿದೆ.

ಶನಿವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಕೌನ್ಸಿಲ್‍ನ ರಾಜ್ಯಧ್ಯಕ್ಷ ಸಿ.ರಾಮು ಮಾತನಾಡಿ, ಚಕ್ರವರ್ತಿ ಸೂಲಿಬೆಲೆಯವರು ಅಂಕಣದಲ್ಲಿ `ಯೇಸು ಕ್ರಿಸ್ತ ತಮ್ಮ 14ನೇ ವಯಸ್ಸಿನಲ್ಲಿ ಭಾರತಕ್ಕೆ ಬಂದು ಬುದ್ದನ ಅನುಯಾಯಿಗಳಿಂದ ಆಧ್ಯಾತ್ಮಿಕ ಭೋದನೆ ಕಲಿತಿದ್ದಾರೆ ಎಂದು ಕಲ್ಪಿತವಾಗಿ ಬರೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂಕಣದಲ್ಲಿ ಕ್ರಿಸ್ತನ ಮತ್ತು ಕ್ರೈಸ್ತ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಅಂಕಣದಲ್ಲಿ ಬರೆದಿರುವ ಈ ಹೇಳಿಕೆ ಪುರಾವೆ ರಹಿತ ಮತ್ತು ಅಧ್ಯಯನ ರಹಿತವಾಗಿ ಕೂಡಿದೆ ಅಲ್ಲದೆ ಕ್ರಿಸ್ತನ ಬಗ್ಗೆ ಅವರಿಗೆ ಸರಿಯಾಗಿ ಗೊತ್ತಿಲ್ಲದೆ ಬರೆಯಲಾಗಿದೆ. ಇದರಿಂದ ಕ್ರೈಸ್ತ ಧರ್ಮಕ್ಕೆ ಅಪಮಾನ ಮಾಡಿದಂತಾಗಿದೆ. ಹಾಗೆಯೇ ಇದು ಧಾರ್ಮಿಕ ನಿಂದನೆ ಹಾಗೂ ಅಸಹಿಷ್ಣುತೆಯ ಪ್ರತೀಕವಾಗಿದೆ ಎಂದು ಪ್ರಾತಿಪಾದಿಸಿದರು. ದಲಿತ ಕ್ರಿಶ್ಚಿಯನ್ ಒಕ್ಕೂದ ಸಂಚಾಲಕ ಡಾ.ಮನೋಹರ್ ಚಂದ್ರ ಪ್ರಕಾಶ್ ಮಾತನಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!