(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಹಾಳಾಗುತ್ತಿರುವ ಕೆರೆಗಳನ್ನು ರಕ್ಷಿಸಿ

ಬೆಂಗಳೂರಿನ ಕೆರೆಗಳು ಇತ್ತೀಚೆಗೆ ಹಾಳಾಗುತ್ತಿದ್ದು, ಅವುಗಳನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಉಪಾಧ್ಯಕ್ಷ ಎಸ್.ಎಂ. ಜೈಕರ್ ಹೇಳಿದರು...

ಬೆಂಗಳೂರು: ಬೆಂಗಳೂರಿನ ಕೆರೆಗಳು ಇತ್ತೀಚೆಗೆ ಹಾಳಾಗುತ್ತಿದ್ದು, ಅವುಗಳನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾ ಉಪಾಧ್ಯಕ್ಷ ಎಸ್.ಎಂ. ಜೈಕರ್ ಹೇಳಿದರು.

ನಮ್ಮ ಬೆಂಗಳೂರು ಫೌಂಡೇಷನ್ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ಒಂದು ವೇಳೆ ನಗರದಲ್ಲಿರುವ ಕೆರೆಗಳು ಬತ್ತಿ ಹೋದರೆ, ಏನೆಲ್ಲಾ ಅನಾಹುತಗಳು ಸಂಭವಿಸುತ್ತವೆ ಎಂದು ಎಲ್ಲರೂ ಮನಗಾಣಬೇಕು. ಈ ನಿಟ್ಟಿನಲ್ಲಿ ಕೆರೆಗಳನ್ನು ರಕ್ಷಣೆ ಮಾಡಬೇಕು ಎಂದರು. ಕಲೆಗೆ ಅದರಲ್ಲೂ ಚಿತ್ರಕಲೆಗೆ ತನ್ನದೇ ಆದ ಶಕ್ತಿಯಿದೆ. ಇದರಿಂದ ಉತ್ತಮ ಭವಿಷ್ಯವಿದೆ. ಇದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಚಲನಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ ಮಾತನಾಡಿ, ಕಲೆ ಕಲೆಯಾಗಿಯೇ ಉಳಿಸಿದೆ. ಅದನ್ನು ವಿಬಿsನ್ನ ರೀತಿಯಲ್ಲಿ ಪ್ರಸ್ತುತಪಡಿಸುವ ದಾರಿಯನ್ನು ಕಂಡುಕೊಳ್ಳಬೇಕು ಎಂದು ಕಲಾವಿದರಿಗೆ ಕಿವಿಮಾತು ಹೇಳಿದರು. 40 ವರ್ಷಗಳ ಹಿಂದೆ ಇದೇ ಸ್ಯಾಂಕಿ ಟ್ಯಾಂಕಿ ಕೆರೆ ಬಳಿ ನಾಟಕ ತಯಾರಿ ಮಾಡುತ್ತಿದ್ದೆವು. ಅಂದು ಸಮೃದ್ಧವಾಗಿದ್ದ ಕೆರೆ ಎಲ್ಲರನ್ನು ಪೊೀಷಣೆ ಮಾಡುತ್ತಿತ್ತು. ಆದರೆ, ಇಂದು ನಾವು ಈ ಕೆರೆಯನ್ನು ಪೋಷಣೆ ಮಾಡದಿರುವುದು ದುಃಖದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸುಮಾರು 170ಕ್ಕೂ ಹೆಚ್ಚು ಜನ ಕಲಾವಿದರು ಭಾಗವಹಿಸಿದ್ದರು. ವೇದಿಕೆಯಲ್ಲಿ ಎಸ್‍ಪಿಡಬ್ಲ್ಯೂಎ ಉಪಾಧ್ಯಕ್ಷ ಮಲ್ಲಪ್ಪ ಸುಲ್ ದಾಳ್, ರಮೇಶ್ ಶಿವರಾಂ, ಛಾಯಾಗ್ರಾಹಕ ಮಯೂರ್ ಚನ್ನಗೆರೆ, ಅಶ್ವತ್ಥನಾರಾಯಣ್, ನಮ್ಮ ಬೆಂಗಳೂರು ಫೌಂಡೇಷನ್ ಸಿಇಒ ಶ್ರೀಧರ್ ಪಬ್ಬಿಶೆಟ್ಟಿ ಮತ್ತಿತರರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT