ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ಕರ್ತವ್ಯಲೋಪ: ಪೊಲಿಸ್ ಅಧಿಕಾರಿಗಳಿಬ್ಬರ ಅಮಾನತು

ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಬ್ಬಾಳ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಾಗೇಶ್ ಮತ್ತು ಸಬ್ ಇನ್ಸ್ ಪೆಕ್ಟರ್ ವೇದಾವತಿ ಅಮಾನತುಗೊಂಡಿದ್ದಾರೆ...

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಬ್ಬಾಳ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಾಗೇಶ್ ಮತ್ತು  ಸಬ್ ಇನ್ಸ್ ಪೆಕ್ಟರ್ ವೇದಾವತಿ ಅಮಾನತುಗೊಂಡಿದ್ದಾರೆ.

ಈ ಇಬ್ಬರು ಅಧಿಕಾರಿಗಳು ಪ್ರಕರಣದ ತನಿಖೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದು, ಆರೋಪಿ ಪರ ನಿಂತಿದ್ದಾರೆ ಎಂದು ಆರೋಪಿಸಿ ನೊಂದ ಮಹಿಳೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿತ್ತು. ಮಹಿಳೆ ದೂರು ನೀಡಿದಂತೆ, ಪೊಲೀಸ್ ಇನ್ಸ್ ಪೆಕ್ಟರ್ ನಾಗೇಶ್ ಮತ್ತು ಸಬ್ ಇನ್ಸ್ ಪೆಕ್ಟರ್ ವೇದಾವತಿ ಅವರುಗಳು ಪ್ರಕರಣದ ತನಿಖೆಯಲ್ಲಿ ಕರ್ತವ್ಯಲೋಪ ಎಸೆಗಿರುವುದು ಇಲಾಖಾ ತನಿಖೆಯಲ್ಲಿ ಸಾಬೀತಾಗಿತ್ತು.

ಆ ಹಿನ್ನೆಲೆಯಲ್ಲಿ ತಪ್ಪಿತಸ್ಥ ಇಬ್ಬರೂ ಅಧಿಕಾರಿಗಳನ್ನು ಅಮಾನತುಗೊಳಿಸಿ ಡಿಸಿಪಿ ಸುರೇಶ್ ಅವರು ಆದೇಶ ಹೊರಡಿಸಿದ್ದಾರೆ. ``ವರದಕ್ಷಿಣೆ ಕಿರುಕುಳದಂತಹ ಗಂಭೀರ ಪಕರಣದ ತನಿಖೆಯಲ್ಲಿ  ಜವಾಬ್ದಾರಿಯುತವಾಗಿ ತನಿಖೆ ನಡೆಸಬೇಕಿದ್ದ ಅಧಿಕಾರಿಗಳು, ಗಂಭೀರ ಲೋಪ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಅವರು ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದ್ದು, ಅಮಾನತು ಮಾಡಿ  ಆದೇಶಿಸಲಾಗಿದೆ'' ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಏನೇನಾಯ್ತು?
-ವರದಕ್ಷಿಣೆ ಪ್ರಕರಣ ವಿಚಾರಣೆ ಲೋಪ ಎಸಗಿದ್ದರು
-ನೊಂದ ಮಹಿಳೆಯಿಂದ ಉನ್ನತಾಧಿಕಾರಿಗಳಿಗೆ ದೂರು
-ಇಲಾಖೆ ತನಿಖೆಯಲ್ಲಿ ಅಧಿಕಾರಿಗಳ ವಿರುದ್ಧದ ಆರೋಪ ಸಾಬೀತು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಛತ್ತೀಸ್‌ಗಢ: ವರ್ಷದ ಆರಂಭದಲ್ಲೇ ಭರ್ಜರಿ ಭೇಟೆ: 'ಎನ್‌ಕೌಂಟರ್‌' ನಲ್ಲಿ 14 ನಕ್ಸಲೀಯರ ಹತ್ಯೆ!

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಚಾರಕ್ಕೂ ಮುನ್ನವೇ ಮಹಾಯುತಿ ಮೇಲುಗೈ; 70 ಸ್ಥಾನಗಳಿಗೆ ಅವಿರೋಧ ಆಯ್ಕೆ

VB-G RAM G ಜಾರಿ ಬದಲು ಸ್ವಂತ ಉದ್ಯೋಗ ಖಾತ್ರಿ ಯೋಜನೆಗೆ ಕರ್ನಾಟಕ ಮುಂದು: ಇಂದು ಘೋಷಣೆ?

ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

ಬಳ್ಳಾರಿ ಗಲಾಟೆ: ಆರು ಸದಸ್ಯರ ಸತ್ಯಶೋಧನಾ ಸಮಿತಿ ರಚಿಸಿದ ಕಾಂಗ್ರೆಸ್

SCROLL FOR NEXT