ಸಂಗ್ರಹ ಚಿತ್ರ 
ಜಿಲ್ಲಾ ಸುದ್ದಿ

ಕರ್ತವ್ಯಲೋಪ: ಪೊಲಿಸ್ ಅಧಿಕಾರಿಗಳಿಬ್ಬರ ಅಮಾನತು

ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಬ್ಬಾಳ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಾಗೇಶ್ ಮತ್ತು ಸಬ್ ಇನ್ಸ್ ಪೆಕ್ಟರ್ ವೇದಾವತಿ ಅಮಾನತುಗೊಂಡಿದ್ದಾರೆ...

ಬೆಂಗಳೂರು: ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹೆಬ್ಬಾಳ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಾಗೇಶ್ ಮತ್ತು  ಸಬ್ ಇನ್ಸ್ ಪೆಕ್ಟರ್ ವೇದಾವತಿ ಅಮಾನತುಗೊಂಡಿದ್ದಾರೆ.

ಈ ಇಬ್ಬರು ಅಧಿಕಾರಿಗಳು ಪ್ರಕರಣದ ತನಿಖೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದು, ಆರೋಪಿ ಪರ ನಿಂತಿದ್ದಾರೆ ಎಂದು ಆರೋಪಿಸಿ ನೊಂದ ಮಹಿಳೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿತ್ತು. ಮಹಿಳೆ ದೂರು ನೀಡಿದಂತೆ, ಪೊಲೀಸ್ ಇನ್ಸ್ ಪೆಕ್ಟರ್ ನಾಗೇಶ್ ಮತ್ತು ಸಬ್ ಇನ್ಸ್ ಪೆಕ್ಟರ್ ವೇದಾವತಿ ಅವರುಗಳು ಪ್ರಕರಣದ ತನಿಖೆಯಲ್ಲಿ ಕರ್ತವ್ಯಲೋಪ ಎಸೆಗಿರುವುದು ಇಲಾಖಾ ತನಿಖೆಯಲ್ಲಿ ಸಾಬೀತಾಗಿತ್ತು.

ಆ ಹಿನ್ನೆಲೆಯಲ್ಲಿ ತಪ್ಪಿತಸ್ಥ ಇಬ್ಬರೂ ಅಧಿಕಾರಿಗಳನ್ನು ಅಮಾನತುಗೊಳಿಸಿ ಡಿಸಿಪಿ ಸುರೇಶ್ ಅವರು ಆದೇಶ ಹೊರಡಿಸಿದ್ದಾರೆ. ``ವರದಕ್ಷಿಣೆ ಕಿರುಕುಳದಂತಹ ಗಂಭೀರ ಪಕರಣದ ತನಿಖೆಯಲ್ಲಿ  ಜವಾಬ್ದಾರಿಯುತವಾಗಿ ತನಿಖೆ ನಡೆಸಬೇಕಿದ್ದ ಅಧಿಕಾರಿಗಳು, ಗಂಭೀರ ಲೋಪ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಅವರು ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದ್ದು, ಅಮಾನತು ಮಾಡಿ  ಆದೇಶಿಸಲಾಗಿದೆ'' ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಏನೇನಾಯ್ತು?
-ವರದಕ್ಷಿಣೆ ಪ್ರಕರಣ ವಿಚಾರಣೆ ಲೋಪ ಎಸಗಿದ್ದರು
-ನೊಂದ ಮಹಿಳೆಯಿಂದ ಉನ್ನತಾಧಿಕಾರಿಗಳಿಗೆ ದೂರು
-ಇಲಾಖೆ ತನಿಖೆಯಲ್ಲಿ ಅಧಿಕಾರಿಗಳ ವಿರುದ್ಧದ ಆರೋಪ ಸಾಬೀತು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!

2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ: 11 ಮಕ್ಕಳ ಸಾವಿನ ನಂತರ ಕೇಂದ್ರ ಎಚ್ಚರಿಕೆ

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

SCROLL FOR NEXT