ಜಿಲ್ಲಾ ಸುದ್ದಿ

3150 ರಸ್ತೆ ಗುಂಡಿ ರಿಪೇರಿ

Manjula VN

ಬೆಂಗಳೂರು: ಬೆಂಗಳೂನಗರದಲ್ಲಿ ಇಲ್ಲಿಯವರೆಗು ಒಟ್ಟು 3150 ರಸ್ತೆ ಗುಂಡಿಗಳನ್ನು ಮುಚ್ಚಿರುವುದಾಗಿ ಬಿಬಿಎಂಪಿ ಹೈಕೋರ್ಟ್‍ಗೆ ಸೋಮವಾರ ತಿಳಿಸಿದೆ.

ನಗರದಲ್ಲಿನ ರಸ್ತೆಗಳ ಗುಂಡಿಗಳಿಗೆ ಕಾಮಗಾರಿ ನಡೆಸಿರುವ ಗುತ್ತಿಗೆದಾರರನ್ನು ಹೊಣೆ ಮಾಡಬೇಕು ಎಂದು ಕೊರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಮತ್ತು ನ್ಯಾ.ರವಿ ಮಳಿಮಠ ಅವರಿದ್ದ ನ್ಯಾಯಪೀಠಕ್ಕೆ ಪಾಲಿಕೆ ಈ ಹೇಳಿಕೆ ನೀಡಿದೆ.

 ನಗರದ ಮೇಖ್ರಿ ವೃತ್ತದಿಂದ ಬಿಡಿಎ ವರೆಗಿನ ರಸ್ತೆಯಲ್ಲಿ ಪ್ರಯಾಣ ಮಾಡುವುದು ದುಃಸ್ವಪ್ನದಂತಿದ್ದು, ಈ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಹೈಕೋರ್ಟ್, ರಸ್ತೆ ಅಗಲೀಕರಣಕ್ಕೆ ಅಗತ್ಯ ಕ್ರಮ ಕೈಗೊಳ್ಳವಂತೆ ಸೂಚನೆ ನೀಡಿದೆ.

SCROLL FOR NEXT