ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಹಾಸನ: ನ್ಯಾನೊ ಕಾರು ಪಲ್ಟಿಯಾಗಿ ದಂಪತಿ ಸಾವು, ಮಕ್ಕಳು ಪಾರು

ಟಾಟಾ ನ್ಯಾನೊ ಕಾರು ಪಲ್ಟಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ...

ಹಾಸನ: ಟಾಟಾ ನ್ಯಾನೊ ಕಾರು ಪಲ್ಟಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ. ಅದೃಷ್ಟವಷಾತ್‌ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತರು ಉಡುಪಿ ಮೂಲದ ಅಶೋಕ್‌ ಪ್ರಭು(45) ಹಾಗೂ ಅವರ ಪತ್ನಿ ಅಶ್ವಿ‌ನಿ ಪ್ರಭು(35) ಎಂದು ತಿಳಿದು ಬಂದಿದ್ದು, ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. 
ಅಶೋಕ್‌ ಅವರು ಬೆಂಗಳೂರಿನ ಕಾನ್ಯೆಂಟ್ರಿಕ್ಸ್‌ ಕಂಪೆನಿಯಲ್ಲಿ ಸಾಫ್ಟ್ವೇರ್‌ ಇಂಜಿನಿಯರ್‌ ಆಗಿದ್ದು,ಉಡುಪಿಯ ಪೆರ್ಣಂಕಿಲದ ನಿವಾಸದಿಂದ ಬೆಂಗಳೂರಿಗೆ ವಾಪಾಸಾಗುತ್ತಿದ್ದರು. 
ಈ ಸಂಬಂಧ ಹಿರಿಸಾವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT