ಮುಖ್ಯಮಂತ್ರಿ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕಾಂಗ್ರೆಸ್ ಟಿಕೆಟ್‍ಗೆ ಶುರುವಾಗಿದೆ ಪೈಪೋಟಿ

ಹೆಬ್ಬಾಳ ಕ್ಷೇತ್ರದ ಉಪ ಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿನ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಿದ್ದು, ಬಂಟ ಸಮುದಾಯದ ರವಿ ಶಂಕರ ಶೆಟ್ಟಿ ಪರ ಕರಾವಳಿ ಕನ್ನಡಿಗರು ಬ್ಯಾಟಿಂಗ್ ಆರಂಭಿಸಿದ್ದಾರೆ...

ಬೆಂಗಳೂರು: ಹೆಬ್ಬಾಳ ಕ್ಷೇತ್ರದ ಉಪ ಚುನಾವಣೆ ದಿನಾಂಕ ಪ್ರಕಟವಾಗುತ್ತಿದ್ದಂತೆ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿನ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಿದ್ದು, ಬಂಟ ಸಮುದಾಯದ ರವಿ ಶಂಕರ ಶೆಟ್ಟಿ ಪರ ಕರಾವಳಿ ಕನ್ನಡಿಗರು ಬ್ಯಾಟಿಂಗ್ ಆರಂಭಿಸಿದ್ದಾರೆ.

ಈ ಮಧ್ಯೆ ತಾನು ಕೂಡ ಟಿಕೆಟ್ ಆಕಾಂಕ್ಷಿ ಎಂದು ಮೇಲ್ಮನೆ ಸದಸ್ಯ ಎಚ್.ಎಂ.ರೇವಣ್ಣ ಹೇಳುವ ಮೂಲಕ ಟಿಕೆಟ್ ಗೆ ಕಾಂಗ್ರೆಸ್ ನಲ್ಲಿ ಭಾರೀ ಪೈ ಪೋಟಿ ಶುರುವಾಗಿದೆ.

ಹೆಬ್ಬಾಳದ ಶಾಸಕರಾಗಿದ್ದ ಎನ್. ಜಗದೀಶ್‍ಕುಮಾರ್ ನಿಧನದಿಂದ  ತೆರವಾಗಿರುವ ಸ್ಥಾನಕ್ಕೆ ಫೆಬ್ರವರಿ 13 ಕ್ಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಬಯಸಿ ಈಗಾಗಲೇ ಹಲವು ಮಂದಿಯ ಹೆಸರು ಕೇಳಿ ಬರುತ್ತಿವೆ. ಅದರಲ್ಲಿ ವಿಧಾನ ಪರಿಷತ್ತಿನ ಹಾಲಿ ಮೂವರು ಸದಸ್ಯರು ಇದ್ದಾರೆ. ಕಳೆದ 2008ರಲ್ಲಿ ಬಿ ಫಾರಂ ಪಡೆದೂ ಕೊನೆ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿಸಿಕೊಂಡಿದ್ದ ರವಿಶಂಕರ್ ಶೆಟ್ಟಿ ಅವರು ಈಗ ಮುಂಚೂಣಿಗೆ ಬಂದಿದ್ದಾರೆ. ಹೆಬ್ಬಾಳ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ತಾವೂ ಆಕಾಂಕ್ಷಿ ಎಂದು ಮೇಲ್ಮನೆ ಸದಸ್ಯ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!