ನ್ಯಾ.ಎಸ್ ಆರ್ ನಾಯಕ್ 
ಜಿಲ್ಲಾ ಸುದ್ದಿ

ನ್ಯಾ.ಎಸ್ ಆರ್ ನಾಯಕ್ ವಿರುದ್ಧ ಜನಾಧಿಕಾರ ಪರಿಷತ್ ದೂರು

ನಿಯಮಗಳನ್ನು ಉಲ್ಲಂಘಿಸಿ ನಿವೃತ್ತ ನ್ಯಾಯಮೂರ್ತಿ ಎಸ್.ಆರ್.ನಾಯಕ್ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್, ಲೋಕಾಯುಕ್ತಕ್ಕೆ ದೂರು ಸಲ್ಲಿಸಿದೆ.

ಬೆಂಗಳೂರು: ನಿಯಮಗಳನ್ನು ಉಲ್ಲಂಘಿಸಿ ನಿವೃತ್ತ ನ್ಯಾಯಮೂರ್ತಿ ಎಸ್.ಆರ್.ನಾಯಕ್ ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್, ಲೋಕಾಯುಕ್ತಕ್ಕೆ  ದೂರು ಸಲ್ಲಿಸಿದೆ.

ಈ ಬಗ್ಗೆ ಲೋಕಾಯುಕ್ತ ಎಡಿಜಿಪಿ ಪರಶಿವಮೂರ್ತಿ ಅವರಿಗೆ ಪರಿಷತ್‍ನ ಅಧ್ಯಕ್ಷ ಆದರ್ಶ ಅಯ್ಯರ್, ಪ್ರಕಾಶ್ ಬಾಬು, ವಿಶ್ವನಾಥ ವಿ.ಬಿ., ರಾಜೇಶ್ ಕುಮಾರ್, ನಾರಾಯಣ, ಜಯರಾಮ ಭಟ್ ಹಾಗೂ ಕಪಾಲಿ ಅವರು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಮತ್ತು ಸೊಸೈಟಿ ನೋಂದಣಿ ಕಾಯ್ದೆಯಡಿ ದೂರು ಸಲ್ಲಿಸಿದ್ದಾರೆ. ಎಸ್.ಆರ್.ನಾಯಕ್ ಅವರನ್ನು ಲೋಕಾಯುಕ್ತ ಹುದ್ದೆಗೆ ನೇಮಿಸಬಾರದು ಹಾಗೂ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ನ್ಯಾಯಮೂರ್ತಿಗಳಾಗಿದ್ದ ಸಂದರ್ಭದಲ್ಲಿ  ಎಸ್. ಆರ್. ನಾಯಕ್ 2002-03ನೇ ಸಾಲಿನಲ್ಲಿ ನ್ಯಾಯಾಂಗ ಇಲಾಖೆಯ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಿಂದ ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಹೋಬಳಿಯ ಅಳ್ಳಾಲಸಂದ್ರದಲ್ಲಿರುವ ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನ ಪಡೆಯುವ ಮೂಲಕ ಖರೀದಿ ಗೃಹ ನಿರ್ಮಾಣ  ಸಂಘದ ನಿಯಮಗಳನ್ನು  ಉಲ್ಲಂಘಿಸಿದ್ದಾರೆ. ಸಂಘದ ಬೈಲಾ ಪ್ರಕಾರ ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನ ಪಡೆಯುವ ವ್ಯಕ್ತಿ ಅಥವಾ ಆತನ ಕುಟುಂಬದ ಸದಸ್ಯರ ಹೆಸರಿನಲ್ಲಿ ಬೇರೆ ಯಾವುದೇ ನಿವೇಶನ ಹೊಂದಿರಬಾರದು.

ಆದರೆ, ಎಸ್.ಆರ್. ನಾಯಕ್ ಬೈಲಾ ನಿಯಮ ಉಲ್ಲಂಘಿಸಿ ಸುಳ್ಳು ಮಾಹಿತಿ ನೀಡಿ ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನ ಪಡೆದಿದ್ದಾರೆ ಎಂದು ಪತ್ರದಲ್ಲಿ ದೂರಿದ್ದಾರೆ. ನ್ಯಾಯಾಂಗ ಬಡಾವಣೆಯಲ್ಲಿ ನಿವೇಶನ ಖರೀದಿಸುವ ಮುನ್ನವೇ ಅಂದರೆ 1990ರಲ್ಲಿಯೇ  ಎಸ್.ಆರ್.ನಾಯಕ್, ಪತ್ನಿ ಶಾಲಿನಿ ನಾಯಕ್ ಹೆಸರಿನಲ್ಲಿ ಹೆಚ್‍ಎಸ್‍ಆರ್ ಲೇಔಟ್‍ನಲ್ಲಿ ಬಿಡಿಎ ನಿವೇಶನ ಪಡೆದಿದ್ದಾರೆ. ಜತೆಗೆ 2001ರಲ್ಲಿ ಆರ್‍ಎಂವಿ ಲೇಔಟ್‍ನ 2ನೇ ಬ್ಲಾಕ್‍ನಲ್ಲಿ 10,200  ಚದರಡಿಯ ಒಂದೂವರೆ ಕೋಟಿ ರು. ಮೌಲ್ಯದ ನಿವೇಶನ ಹಾಗೂ ಗಂಗಮ್ಮನಗುಡಿಯ ಜಾರಕಿಬಂಡೆ ಕಾವಲಿನಲ್ಲಿ ಒಂದು ನಿವೇಶನ ಹೊಂದಿದ್ದಾರೆ. ಆದರೂ ನಿಯಮ ಬಾಹಿರವಾಗಿ ನಿವೇಶನ ಖರೀದಿಸಿರುವುದು ಕಾನೂನಿನ ಉಲ್ಲಂಘನೆಯಾಗಿದೆ ಎಂದು ಜನಾಧಿಕಾರ ಸಂಘರ್ಷ ಪರಿಷತ್ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT