ಕಡಲೇಕಾಯಿ ಪರಿಷೆ(ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕೆಂಗೇರಿಯಲ್ಲಿ ಕಡಲೇಕಾಯಿ ಪರಿಷೆ

ಕೆಂಗೇರಿ ಸುತ್ತಮುತ್ತಲ ಗ್ರಾಮಸ್ಥರು ಬಸವೇಶ್ವರನ ಸನ್ನಿಧಾನದಲ್ಲಿ ಕಡಲೆಕಾಯಿ ಪರಿಷೆಯನ್ನು ಏಳುವರ್ಷಗಳಿಂದ ಬಂದಿದ್ದಾರೆ ಎಂಬುದು ಕುತೂಹಲ ಸಂಗತಿಯಾಗಿದೆ.

ಬೆಂಗಳೂರು: ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆ ಪ್ರಸಿದ್ಧಿ ಹೊಂದಿರುವುದು ಎಲ್ಲರಿಗೂ ಗೊತ್ತು. `ಸುಗ್ಗಿ ಹಬ್ಬ ಸಂಕ್ರಾಂತಿ'ಯಂದು ನಗರ ಹೊರವಲಯದ ಕೆಂಗೇರಿ ಸುತ್ತಮುತ್ತಲ ಗ್ರಾಮಸ್ಥರು ಬಸವೇಶ್ವರನ ಸನ್ನಿಧಾನದಲ್ಲಿ ಕಡಲೆಕಾಯಿ ಪರಿಷೆಯನ್ನು ಏಳುವರ್ಷಗಳಿಂದ ಬಂದಿದ್ದಾರೆ ಎಂಬುದು ಕುತೂಹಲ ಸಂಗತಿಯಾಗಿದೆ.

ನೈಸ್ ಕಾರಿಡಾರ್ ವೃತ್ತ ಸಮೀಪದ ಚನ್ನವೀರಯ್ಯನಪಾಳ್ಯದ ಸೋಂಪುರ ಬಳಿಯ ವರಹಾಸಂದ್ರದಲ್ಲಿ ಜ. 15ರಂದು ಸಂಕ್ರಾಂತಿಯೊಂದಿಗೆ 7ನೇ ವರ್ಷದ ಕಡಲೆಕಾಯಿ ಪರಿಷೆ ಹಾಗೂಗ್ರಾಮ ದೇವತೆಗಳ ಉತ್ಸವ ವಿಜೃಂಭಣೆಯಿಂದ ನಡೆಸಲು ಸಿದ್ಧತೆ ಭರದಿಂದ ಸಾಗಿವೆ. ಈಗಾಗಲೇ ಸೋಂಪುರದ ರಸ್ತೆಯ ಇಕ್ಕೆಲಗಳಲ್ಲಿ ಕಬ್ಬು, ಕಡಲೆಕಾಯಿ, ಗೆಣಸು ರಾಶಿಯೊಂದಿಗೆ ರೈತರು ಬಿಡಾರ ಹೂಡಿದ್ದಾರೆ. ಈ ರೀತಿ ವಿನೂತನವಾಗಿ ಸುಗ್ಗಿ ಹಬ್ಬ ಆಚರಿಸುತ್ತಾ ಬಂದಿದ್ದು, ಗ್ರಾಮ ದೇವತೆಗಳ ಉತ್ಸವ, ಗ್ರಾಮೀಣ ಸಂಸ್ಕೃತಿ ಹಬ್ಬ, ಕಿಚ್ಚು ಹಾಯಿಸುವ ಉತ್ಸವದಲ್ಲಿ ಮಿಂದೇಳಲಿದ್ದಾರೆ.

ಇತಿಹಾಸ ಪ್ರಸಿದ್ಧ ಚೋಳರ ಕಾಲದ ಬಸವೇಶ್ವರ ಸ್ವಾಮೀ ದೇವಾಲಯದಲ್ಲಿ ಏಳು ವರ್ಷದಿಂದ ಸಂಕ್ರಾಂತಿ ಹಬ್ಬದೊಂದಿಗೆ ಕಡಲೇಕಾಯಿ ಪರಿಷೆಯನ್ನೂ ಆಚರಿಸಲಾಗುತ್ತಿದೆ. ಪರಿಷೆಗಾಗಿ ರಾಮನಗರ, ಮಾಗಡಿ, ಕನಕಪುರ, ಪಾವಗಡ, ಹೊಸೂರು, ಅನಂತಪುರ, ಚಿತ್ತೂರುಗಳಿಂದ 200 ಟನ್ ಗೂ ಹೆಚ್ಚು ಕಡಲೇಕಾಯಿ ತರಿಸಲಾಗಿದೆ. ಈ ಕಡಲೇಕಾಯಿ ಪರಿಷೆಯಲ್ಲಿ ಎರಡು ಲಕ್ಷಕ್ಕೂ ಅಧಿಕ ಭಕ್ತರು ಸೇರಲಿದ್ದು ಪ್ರತಿಯೊಬ್ಬರಿಗೂ ಎರಡು ಸೇರು ಕಡಲೇಕಾಯಿ ಜೊತೆಗೆ ಒಂದು ಕಬ್ಬಿಣ ಜಲ್ಲೆ ಉಚಿತವಾಗಿ ನೀಡಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT