ಬಿಬಿಎಂಪಿ ಆಯುಕ್ತ ಜಿ.ಕುಮಾರನಾಯಕ್ 
ಜಿಲ್ಲಾ ಸುದ್ದಿ

ಅನಧಿಕೃತವಾಗಿ ಸಿನೆಮಾ ಪೋಸ್ಟರ್ ಅಂಟಿಸಬೇಡಿ

ನಗರದಲ್ಲಿ ಅನಧಿಕೃತವಾಗಿ ಚಲನಚಿತ್ರ ಪೋಸ್ಟರ್ ಮತ್ತು ಬ್ಯಾನರ್‍ಗಳನ್ನು ಅಳವಡಿಸದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘದವರಲ್ಲಿ ಬಿಬಿಎಂಪಿ ಆಯುಕ್ತ ಜಿ.ಕುಮಾರನಾಯಕ್ ಮನವಿ ಮಾಡಿದ್ದಾರೆ...

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಚಲನಚಿತ್ರ ಪೋಸ್ಟರ್ ಮತ್ತು ಬ್ಯಾನರ್‍ಗಳನ್ನು ಅಳವಡಿಸದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ
ಸಂಘದವರಲ್ಲಿ ಬಿಬಿಎಂಪಿ ಆಯುಕ್ತ ಜಿ.ಕುಮಾರನಾಯಕ್ ಮನವಿ ಮಾಡಿದ್ದಾರೆ.

ವಾಣಿಜ್ಯ ಮಂಡಳಿ ಮತ್ತು ನಿರ್ಮಾಪಕರ ಸಂಘದ ಪದಾಧಿಕಾರಿಗಳೊಂದಿಗೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಅನಧಿಕೃತ ಜಾಹೀರಾತು, ಪೋಸ್ಟರ್‍ಗಳಿಂದ ನಗರದ ಸೌಂದರ್ಯ ಹಾಳಾಗುತ್ತಿದೆ. ಜೊತೆಗೆ, ಪಾಲಿಕೆಗೆ ಬರಬೇಕಾದ ಆದಾಯವೂ ಸರಿಯಾಗಿ ಪಾವತಿಯಾಗುತ್ತಿಲ್ಲ. ಹಾಗಾಗಿ ಪಾಲಿಕೆಯೊಂದಿಗೆ ಸಹಕರಿಸಬೇಕು ಎಂದು ಹೇಳಿದರು.

ವಿಶೇಷ ಆಯುಕ್ತ ವಿ.ರಶ್ಮಿ ಅವರು ಮಾತನಾಡಿ, ನಿರ್ಮಾಪಕರು ಹಾಗೂ ಚಿತ್ರಮಂದಿರ ಮಾಲೀಕರು ಪಾಲಿಕೆಯಿಂದ ಅನುಮತಿ ಪಡೆಯದೆ ಜಾಹೀರಾತು ಫಲಕಗಳನ್ನು ಅಳವಡಿಸುತ್ತಿದ್ದಾರೆ. ಇನ್ನು ಮುಂದೆ ಕಡ್ಡಾಯವಾಗಿ ಪಾಲಿಕೆ ಅನುಮತಿ ಪಡೆಯಬೇಕು. `ಎ' ವಲಯದಲ್ಲಿ ಯಾವುದೇ ರೀತಿಯ ಜಾಹೀರಾತು ಫಲಕ ಅಳವಡಿಸಲು ಅವಕಾಶವಿಲ್ಲದಿದ್ದರೂ, ನಿಯಮ ಉಲ್ಲಂಘಿಸುತ್ತಿದ್ದಾರೆ. ಅನುಮತಿ ಪಡೆ ಯುವುದನ್ನು ಸರಳೀಕರಣಗೊಳಿಸಲು ಒಂದು ವಾರದೊಳಗೆ ಆನ್ ಲೈನ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದರು.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದ್ ಮಾತನಾಡಿ, ನಗರದ ಸೌಂದರ್ಯ ಕಾಪಾಡಲು ಚಿತ್ರರಂಗದಿಂದ ಸಂಪೂರ್ಣ ಸಹಕಾರವಿದೆ. ಆದರೆ, ಸಿನಿಮಾಗಳಿಗೆ ಸರಿಯಾದ ಪ್ರಚಾರ ಸಿಗದಿದ್ದರೆ, ಕೋಟ್ಯಾಂತರ ರುಪಾಯಿ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಪಾಲಿಕೆಯಿಂದಲೇ ಪ್ರತಿ ವಾರ್ಡಿನಲ್ಲಿ 4 ರಿಂದ 5 ಹೋರ್ಡಿಂಗ್ಸ್‍ಗಳನ್ನು ಚಲನಚಿತ್ರಗಳಿಗೆ ಮೀಸಲಿಟ್ಟು, ಕಡಿಮೆ ದರದಲ್ಲಿ ನೀಡಬೇಕು ಎಂದು ಆಯುಕ್ತರಲ್ಲಿ ಮನವಿ ಮಾಡಿದರು. ಕಾಂಗ್ರೆಸ್ ಶಾಸಕ ಮತ್ತು ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಇದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT