ಬಿಬಿಎಂಪಿ ಆಯುಕ್ತ ಜಿ.ಕುಮಾರನಾಯಕ್ 
ಜಿಲ್ಲಾ ಸುದ್ದಿ

ಅನಧಿಕೃತವಾಗಿ ಸಿನೆಮಾ ಪೋಸ್ಟರ್ ಅಂಟಿಸಬೇಡಿ

ನಗರದಲ್ಲಿ ಅನಧಿಕೃತವಾಗಿ ಚಲನಚಿತ್ರ ಪೋಸ್ಟರ್ ಮತ್ತು ಬ್ಯಾನರ್‍ಗಳನ್ನು ಅಳವಡಿಸದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘದವರಲ್ಲಿ ಬಿಬಿಎಂಪಿ ಆಯುಕ್ತ ಜಿ.ಕುಮಾರನಾಯಕ್ ಮನವಿ ಮಾಡಿದ್ದಾರೆ...

ಬೆಂಗಳೂರು: ನಗರದಲ್ಲಿ ಅನಧಿಕೃತವಾಗಿ ಚಲನಚಿತ್ರ ಪೋಸ್ಟರ್ ಮತ್ತು ಬ್ಯಾನರ್‍ಗಳನ್ನು ಅಳವಡಿಸದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ
ಸಂಘದವರಲ್ಲಿ ಬಿಬಿಎಂಪಿ ಆಯುಕ್ತ ಜಿ.ಕುಮಾರನಾಯಕ್ ಮನವಿ ಮಾಡಿದ್ದಾರೆ.

ವಾಣಿಜ್ಯ ಮಂಡಳಿ ಮತ್ತು ನಿರ್ಮಾಪಕರ ಸಂಘದ ಪದಾಧಿಕಾರಿಗಳೊಂದಿಗೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಅನಧಿಕೃತ ಜಾಹೀರಾತು, ಪೋಸ್ಟರ್‍ಗಳಿಂದ ನಗರದ ಸೌಂದರ್ಯ ಹಾಳಾಗುತ್ತಿದೆ. ಜೊತೆಗೆ, ಪಾಲಿಕೆಗೆ ಬರಬೇಕಾದ ಆದಾಯವೂ ಸರಿಯಾಗಿ ಪಾವತಿಯಾಗುತ್ತಿಲ್ಲ. ಹಾಗಾಗಿ ಪಾಲಿಕೆಯೊಂದಿಗೆ ಸಹಕರಿಸಬೇಕು ಎಂದು ಹೇಳಿದರು.

ವಿಶೇಷ ಆಯುಕ್ತ ವಿ.ರಶ್ಮಿ ಅವರು ಮಾತನಾಡಿ, ನಿರ್ಮಾಪಕರು ಹಾಗೂ ಚಿತ್ರಮಂದಿರ ಮಾಲೀಕರು ಪಾಲಿಕೆಯಿಂದ ಅನುಮತಿ ಪಡೆಯದೆ ಜಾಹೀರಾತು ಫಲಕಗಳನ್ನು ಅಳವಡಿಸುತ್ತಿದ್ದಾರೆ. ಇನ್ನು ಮುಂದೆ ಕಡ್ಡಾಯವಾಗಿ ಪಾಲಿಕೆ ಅನುಮತಿ ಪಡೆಯಬೇಕು. `ಎ' ವಲಯದಲ್ಲಿ ಯಾವುದೇ ರೀತಿಯ ಜಾಹೀರಾತು ಫಲಕ ಅಳವಡಿಸಲು ಅವಕಾಶವಿಲ್ಲದಿದ್ದರೂ, ನಿಯಮ ಉಲ್ಲಂಘಿಸುತ್ತಿದ್ದಾರೆ. ಅನುಮತಿ ಪಡೆ ಯುವುದನ್ನು ಸರಳೀಕರಣಗೊಳಿಸಲು ಒಂದು ವಾರದೊಳಗೆ ಆನ್ ಲೈನ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದರು.

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದ್ ಮಾತನಾಡಿ, ನಗರದ ಸೌಂದರ್ಯ ಕಾಪಾಡಲು ಚಿತ್ರರಂಗದಿಂದ ಸಂಪೂರ್ಣ ಸಹಕಾರವಿದೆ. ಆದರೆ, ಸಿನಿಮಾಗಳಿಗೆ ಸರಿಯಾದ ಪ್ರಚಾರ ಸಿಗದಿದ್ದರೆ, ಕೋಟ್ಯಾಂತರ ರುಪಾಯಿ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಪಾಲಿಕೆಯಿಂದಲೇ ಪ್ರತಿ ವಾರ್ಡಿನಲ್ಲಿ 4 ರಿಂದ 5 ಹೋರ್ಡಿಂಗ್ಸ್‍ಗಳನ್ನು ಚಲನಚಿತ್ರಗಳಿಗೆ ಮೀಸಲಿಟ್ಟು, ಕಡಿಮೆ ದರದಲ್ಲಿ ನೀಡಬೇಕು ಎಂದು ಆಯುಕ್ತರಲ್ಲಿ ಮನವಿ ಮಾಡಿದರು. ಕಾಂಗ್ರೆಸ್ ಶಾಸಕ ಮತ್ತು ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT