ಕಿರುಷಷ್ಠಿ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು. 
ಜಿಲ್ಲಾ ಸುದ್ದಿ

ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ಭಕ್ತರ ಎಡೆಸ್ನಾನ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಪ್ರಯುಕ್ತ ಪಂಚಮಿ ದಿನವಾದ ಶುಕ್ರವಾರ 52 ಭಕ್ತರು ಎಡೆ ಸ್ನಾನ ಸೇವೆ ಪೂರೈಸಿದರು...

ಸುಬ್ರಹಣ್ಯ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಿರುಷಷ್ಠಿ ಪ್ರಯುಕ್ತ ಪಂಚಮಿ ದಿನವಾದ ಶುಕ್ರವಾರ 52 ಭಕ್ತರು ಎಡೆ ಸ್ನಾನ ಸೇವೆ ಪೂರೈಸಿದರು. ಮಧ್ಯಾಹ್ನ ದೇವರಿಗೆ ಮಹಾಪೂಜೆ ನೆರವೇರಿದ ಬಳಿಕ ದೇವಸ್ಥಾನದ ಹೊರಾಂಗಣದ ಸುತ್ತ ಹಾಕಲಾದ ಬಾಳೆಲೆ ಮೇಲೆ ದೇವರ ನೈವೆಧ್ಯ ಬಡಿಸಿ, ಅದನ್ನು ದೇವಸ್ಥಾನದ ಗೋವುಗಳಿಗೆ ತಿನ್ನಿಸಿ ನಂತರ ಭಕ್ತರು ಉರುಳುಸೇವೆ ನಡೆಸಿದರು. 
ಬ್ರಾಹ್ಮಣರು ಉಂಡ ಎಲೆಯ ಮೇಲೆ ಉರುಳುವ (ಉಚ್ಚಿಷ್ಠ) ಮಡೆ ಮಡೆ ಸ್ನಾನ ಸೇವೆ ಸಂಪ್ರದಾಯ ನಿಷೇಧಗೊಂಡು ಇಂದಿಗೆ ವರ್ಷ ತುಂಬಿದೆ. ಕಳೆದ ವರ್ಷ ಕಿರುಷಷ್ಠಿ ವೇಳೆ 62 ಭಕ್ತರು ಮೊದಲ ಬಾರಿ ಎಡೆಸ್ನಾನ ಸೇವೆ ನಡೆಸಿದ್ದು, ಈ ಬಾರಿ ಭಕ್ತರ ಸಂಖ್ಯೆ ಕಡಿಮೆ ಇತ್ತು. ಮಡೆ ಮಡೆ ಸ್ನಾನ ಸೇವೆ ಕುರಿತು ಪರ, ವಿರೋಧ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣ ನ್ಯಾಯಾಲಯದಲ್ಲಿದೆ. 
ಈ ನಡುವೆ ಉಚ್ಛ ನ್ಯಾಯಾಲಯದ ಆದೇಶದಂತೆ ಜಿಲ್ಲಾಡಳಿತ ಕ್ಷೇತ್ರದಲ್ಲಿ ಎಡೆಸ್ನಾನಕ್ಕೆ ಅವಕಾಶ ಕಲ್ಪಿಸಿತ್ತು. ಕಳೆದ ತಿಂಗಳು ನಡೆದ ವಾರ್ಷಿಕ ಮಹಾ ಜಾತ್ರೆ ಸಂದರ್ಭದಲ್ಲೂ ಎಡೆ ಸ್ನಾನ ನೆರವೇರಿತ್ತು. ಎರಡು ಬಾರಿ ರಥೋತ್ಸವ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿ ಎಂಬಂತೆ ಒಂದೇ ದಿನ ಎರಡು ಬಾರಿ ಪಂಚಮಿ ರಥ ಎಳೆಯಲಾಯಿತು. 
ಮಕರ ಸಂಕ್ರಮಣ ದಿನವಾದ ಶುಕ್ರವಾರ ಬೆಳಗ್ಗೆ ದೇವಾಲಯದಲ್ಲಿ ಕುಕ್ಕೆಲಿಂಗ ದೇವರ ಜಾತ್ರೆ ಪ್ರಯುಕ್ತ ಪಂಚಮಿ ರಥ ಎಳೆಯಲಾಯಿತು. ನಂತರ ಕಾಜುಕುಜುಂಬ ದೈವದ ನಡಾವಳಿ ನೆರವೇರಿತು. ಬಳಿಕ ಚಿಕ್ಕ ರಥೋತ್ಸವ ನಡೆದು ಸವಾರಿ ಮಂಟಪದಲ್ಲಿ ದೇವರಿಗೆ ಕಟ್ಟೆಪೂಜೆ ನೆರವೇರಿತು. ಕಿರುಷಷ್ಠಿ ಪ್ರಯುಕ್ತ ರಾತ್ರಿ ಮತ್ತೊಮ್ಮೆ ಪಂಚಮಿ ರಥೋತ್ಸವ ನಡೆಯಿತು. ಕಿರುಷಷ್ಠಿ ಪ್ರಯುಕ್ತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT