ಬೆಂಗಳೂರಿನಲ್ಲಿ ಶನಿವಾರ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಪರಿಷತ್ ನ ಕಾರ್ಯದರ್ಶಿ ಸುರೇಂದ್ರ ಕುಮಾರ್, ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಕಾರಿ 
ಜಿಲ್ಲಾ ಸುದ್ದಿ

ಭಯೋತ್ಪಾದನೆ ವಿರುದ್ಧ ಜನಜಾಗೃತಿ ಅಭಿಯಾನ: ಪ್ರವೀಣ್ ತೊಗಾಡಿಯಾ

ಭಯೋತ್ಪಾದನೆ ಜಗತ್ತಿನ ಬಹು ದೊಡ್ಡ ಸವಾಲಾಗಿದ್ದು, ಸರ್ಕಾರ ಅಥವಾ ಸೇನೆ ಯಿಂದ ಅದನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಭಾರತವನ್ನು ಭಯೋತ್ಪಾದನೆ...

ಬೆಂಗಳೂರು: ಭಯೋತ್ಪಾದನೆ ಜಗತ್ತಿನ ಬಹು ದೊಡ್ಡ ಸವಾಲಾಗಿದ್ದು, ಸರ್ಕಾರ ಅಥವಾ  ಸೇನೆ ಯಿಂದ ಅದನ್ನು ನಿಯಂತ್ರಿಸಲು ಸಾಧ್ಯವಿಲ್ಲ.  ಭಾರತವನ್ನು ಭಯೋತ್ಪಾದನೆ   ಮುಕ್ತವಾಗಿ ಸಲು ಭಜರಂಗ ದಳ `ಶೋಭಾಯಾತ್ರೆ' ಎಂಬ ಅಭಿಯಾನ ನಡೆಸಲಿದೆ ಎಂದು  ವಿಶ್ವ ಹಿಂದೂ ಪರಿಷತ್‍ನ ಅಂತಾರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ  ಡಾ.ಪ್ರವೀಣ್ ತೊಗಾಡಿಯಾ ತಿಳಿಸಿದ್ದಾರೆ.

ಶನಿವಾರ ನಗರದ ಸರ್ದಾರ್ ಪಟೇಲ್ ಭವನದಲ್ಲಿ  ಏರ್ಪಡಿಸಿದ್ದ ಎರಡು ದಿನಗಳ ರಾಷ್ಟ್ರೀಯ  ರ್ಯಕಾರಿಣಿ  ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ  ಭಯೋತ್ಪಾದಕರ ಸಂಖ್ಯೆ ಹೆಚ್ಚುತ್ತಿದೆ. ಕೆಲ ದೇಶಗಳು ಇವರಿಗೆ ತರಬೇತಿ ನೀಡುತ್ತಿದ್ದು,  ಯೋತ್ಪಾದಕರ ವಿರುದ್ಧ ಶೌರ್ಯ ಪ್ರದರ್ಶನ ಮಾಡಿ ದೇಶವನ್ನು ಭಯೋತ್ಪಾದನೆ  ಮುಕ್ತಗೊಳಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ವಿಹಿಂಪ ವತಿಯಿಂದ ಹಳ್ಳಿ-ಹಳ್ಳಿಗಳಿಗೆ  ಹೋಗಿ ಭಯೋತ್ಪಾದನೆಯ ಕುರಿತು ಜಾಗೃತಿ ಮೂಡಿಸಲಾಗುವುದು ಎಂದರು.

ಸಭೆಯ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ತೊಗಾಡಿಯಾ, ದಾದ್ರಿ ಘಟನೆ ಬಳಿಕ  ಹಲವಾರು ಸಾಹಿತಿಗಳು ಪ್ರಶಸ್ತಿ ವಾಪಾಸ್ಸು ಮಾಡಿ ದೇಶದಲ್ಲಿ ಅಸಹಿಷ್ಣುತೆ ಇದೆ ಎಂದಿದ್ದರು.
ಆದರೆ, ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದ ಹಿಂದೂಗಳ ಮೇಲಿನ ದಾಳಿಗೆ ಯಾವುದೇ   ಹಿತಿಗಳು ಸ್ಪಂದಿಸಿಲ್ಲ. ಅಸಹಿಷ್ಣುತೆಯನ್ನು ಜಾತಿ ಆಧಾರದಲ್ಲಿ ಪರಿಗಣಿಸಲಾಗುತ್ತಿದೆ. ರಾತ್ರಿ  2ರ ಬಳಿಕ ಗಣೇಶ ಮಂದಿರದಲ್ಲಿ ಮೈಕ್ ನಿಷೇಧಿಸಲಾಗುತ್ತದೆ.

ಆದರೆ, ಮಸೀದಿಗಳಲ್ಲಿ ಬೆಳಗಿನ ಜಾವ ಆಝಾನ್ ಕರೆಗೆ ಏಕೆ ನಿಷೇಧವಿಲ್ಲ, ಇಲ್ಲಿಯೂ  ಹಿಂದೂಗಳಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ದೂರಿದರು. ಕಾರ್ಯಕ್ರಮದಲ್ಲಿ ಆನಂದ  ರೂಜಿ, ವಿಶ್ವಹಿಂದು ಪರಿಷತ್‍ನ ರಾಷ್ಟ್ರಿಯ  ಕಾರ್ಯದರ್ಶಿ ಸುರೇಂದ್ರ ಕುಮಾರ್ ಜೈನ್,  ಭಜರಂಗದಳದ ರಾಷ್ಟ್ರೀಯ ಸಂಯೋಜಕ ರಾಜೇಶ್ ಪಾಂಡೆ, ಭಜರಂಗದಳದ ರಾಷ್ಟ್ರಿಯ   ಹ ಸಂಯೋಜಕ ಮನೋಜ್ ಶರ್ಮಾ, ವಿಶ್ವಹಿಂದು ಪರಿಷತ್ ಕರ್ನಾಟಕ ದಕ್ಷಿಣದ  ಕಾರ್ಯದರ್ಶಿ ಟಿ.ಎ.ಪಿ.ಶೆಣೈ ಪಾಲ್ಗೊಂಡಿದ್ದರು.

ಬೆಂಗಳೂರಿನಲ್ಲಿ ಶನಿವಾರ ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ರಾಷ್ಟ್ರೀಯ  ಕಾರ್ಯಕಾರಣಿ ಸಭೆಯಲ್ಲಿ ಪರಿಷತ್ ನ ಕಾರ್ಯದರ್ಶಿ ಸುರೇಂದ್ರ ಕುಮಾರ್, ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಹಾಗೂ ಆನಂದ ಗುರೂಜಿ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT