(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ಯಲಹಂಕದಲ್ಲಿ ಸರಗಳ್ಳತನ

ಪಲ್ಸರ್ ಬೈಕ್‍ನಲ್ಲಿ ಬಂದ ಇಬ್ಬರು ಯುವಕರು ಶನಿವಾರ ಬೆಳಗ್ಗೆ ವೃದ್ಧೆಯೊಬ್ಬರ ಸರ ಅಪಹರಿಸಿ ಪರಾರಿಯಾಗಿದ್ದಾರೆ...

ಬೆಂಗಳೂರು: ಪಲ್ಸರ್ ಬೈಕ್‍ನಲ್ಲಿ ಬಂದ ಇಬ್ಬರು ಯುವಕರು ಶನಿವಾರ ಬೆಳಗ್ಗೆ ವೃದ್ಧೆಯೊಬ್ಬರ ಸರ ಅಪಹರಿಸಿ ಪರಾರಿಯಾಗಿದ್ದಾರೆ.

ಹುಣಸಮಾರನಹಳ್ಳಿಯ ಚಂದ್ರಮೌಳಿ ಲೇಔಟ್ ನ ನಿವಾಸಿ ಲಲಿತಾ(77) ಸರ ಕಳೆದುಕೊಂಡವರು. ಮನೆ ಮುಂದೆ ಕಸ ಗುಡಿಸುತ್ತಿದ್ದ ಲಲಿತಾ ಅವರಿಗೆ ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ತೆಲುಗಿನಲ್ಲಿ ಮಾತನಾಡಿಸಿದ್ದಾರೆ. ಮಹಿಳೆ ನನಗೆ ತೆಲುಗು ಗೊತ್ತಿಲ್ಲ ಎಂದು ಮನೆ ಒಳಗೆ ಹೋಗಲು ಮುಂದಾಗಿದ್ದಾರೆ. ಈ ವೇಳೆ ಲಲಿತಾ ಅವರ ಬಾಯಿ ಮುಚ್ಚಿದ ಕಳ್ಳರು 20 ಗ್ರಾಂ ತೂಕದ ಸರವನ್ನು ಕಸಿದು ಪರಾರಿಯಾಗಿದ್ದಾರೆ.

ಜೂಜು ಅಡ್ಡೆ ಮೇಲೆ ದಾಳಿ: ಟಿ ದಾಸರಹಳ್ಳಿಯ ಪೈಪ್‍ಲೈನ್ ರಸ್ತೆಯಲ್ಲಿರುವ ಖಾಲಿ ನಿವೇಶನದಲ್ಲಿ ನಡೆಯುತ್ತಿದ್ದ ಜೂಜು ಅಡ್ಡೆ ಮೇಲೆ ಪೀಣ್ಯ ಪೊಲೀಸರು ದಾಳಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಅಶ್ವಥಪ್ಪ (35), ರವಿ (42), ನಾಗರಾಜ್(36) ಮತ್ತು ಮುನಿಯಪ್ಪ(40) ಬಂಧಿತ ಆರೋಪಿಗಳು. ಬಂಧಿತರಿಂದ 25 ಸಾವಿರ ನಗದು, 52 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಡುಗೆ ಭಟ್ಟನ ಮೇಲೆ ಹಲ್ಲೆ : ತಡರಾತ್ರಿಯಲ್ಲಿ ಹೋಟೆಲ್‍ಗೆ ಬಂದ ಇಬ್ಬರು ದುಷ್ಕರ್ಮಿಗಳು ಊಟವಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಅಡುಗೆ ಭಟ್ಟನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಮಾರುತಿ ಸೇವಾನಗರದಲ್ಲಿರುವ ಹೋಟೆಲ್‍ನಲ್ಲಿ ಅಡುಗೆ ಭಟ್ಟನಾಗಿರುವ ಬಲಬನ್ ಸಿಂಗ್(24) ಹಲ್ಲೆಗೊಳಗಾದವರು. ರಾತ್ರಿ 11.30ರ ವೇಳೆ ಹೋಟೆಲ್ ಬಾಗಿಲು ಮುಚ್ಚುವಾಗ ಬಂದ ಆರೋಪಿಗಳು ಊಟ ಕೇಳಿದ್ದಾರೆ. ಊಟ ಖಾಲಿಯಾಗಿದೆ ಎಂದದ್ದಕ್ಕೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಕೋಪಗೊಂಡು ಬಲಬನ್ ಸಿಂಗ್‍ನ ಮುಖಕ್ಕೆ ಬ್ಲೇಡ್‍ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT