ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಬೇರೆ ರಾಜ್ಯದ ಮದ್ಯ ಮಾರಾಟ ತಡೆಗೆ ವಿಶೇಷ ತಂಡ: ಸಚಿವ ತಹಸೀಲ್ದಾರ

ಗೋವಾ, ಆಂಧ್ರಪ್ರದೇಶಗಳಿಂದ ಅಗ್ಗದ ಮದ್ಯ ರಾಜ್ಯದ ಗಡಿ ಭಾಗಗಳಲ್ಲಿ ಒಳ ನುಸುಳುತ್ತಿದ್ದು,ರಾಜ್ಯದ ಆದಾಯಕ್ಕೆ ಹೊಡೆತ ಬೀಳುತ್ತಿದೆ ಅದಕ್ಕಾಗಿ ಗಡಿ ಭಾಗದಲ್ಲಿ...

ಹಾವೇರಿ: ಗೋವಾ, ಆಂಧ್ರಪ್ರದೇಶಗಳಿಂದ ಅಗ್ಗದ ಮದ್ಯ ರಾಜ್ಯದ ಗಡಿ ಭಾಗಗಳಲ್ಲಿ ಒಳ  ನುಸುಳುತ್ತಿದ್ದು,  ರಾಜ್ಯದ ಆದಾಯಕ್ಕೆ ಹೊಡೆತ ಬೀಳುತ್ತಿದೆ. ಅದಕ್ಕಾಗಿ ಗಡಿ ಭಾಗದಲ್ಲಿ   ವಿಶೇಷ ಅಬಕಾರಿ ತಂಡ  ರಚಿಸಿ ಅಕ್ರಮ ತಡೆಗಟ್ಟಲಾಗುವುದು ಎಂದು  ಅಬಕಾರಿ ಮತ್ತು    ಮುಜರಾಯಿ ಖಾತೆ ಸಚಿವ  ಮನೋಹರ ತಹಶೀಲ್ದಾರ ಹಾವೇರಿಯಲ್ಲಿ ತಿಳಿಸಿದರು.

ಪ್ರಸಕ್ತ ವರ್ಷ ಅಬಕಾರಿ ಇಲಾಖೆಯಿಂದ 15,200 ಕೋಟಿ ಆದಾಯದ ಗುರಿ ಹೊಂದಲಾಗಿದ್ದು,  ಪೈಕಿ 11 ಸಾವಿರ  ಕೋಟಿ ಸಂಗ್ರಹವಾಗಿದೆ. ಮಾರ್ಚ್ ಅಂತ್ಯದ ವೇಳೆಗೆ  ಗುರಿ ತಲುಪುವ ವಿಶ್ವಾಸವಿದೆ. ಆದರೆ, ಬೇರೆ ರಾಜ್ಯಗಳಿಂದ ಬರುವ ಅಗ್ಗದ ಹಾಗೂ ನಕಲಿ ಮದ್ಯದ ಆದಾ ಯಕ್ಕೆ ಹೊಡೆತ ಬಿದ್ದಿದ್ದು, ಶೀಘ್ರದಲ್ಲಿ ಅಕ್ರಮ ತಡೆಗಟ್ಟಲಾಗುವುದು ಎಂದು ಹೇಳಿದರು.

ಸಿ ದರ್ಜೆ ದೇವಸ್ಥಾನಗಳಲ್ಲಿ ಸಿಸಿಟಿವಿ: ರಾಜ್ಯದಲ್ಲಿ ಮುಜರಾಯಿ ಇಲಾಖೆಗೆ ಸೇರಿದ 160  ಎ ಕೆಟಗರಿ, 154 ಬಿ ಕೆಟಗರಿ, ಮಿಕ್ಕ 34229 ಸಿ ಕೆಟಗರಿ  ದೇವಸ್ಥಾನಗಳಿವೆ. ಎಲ್ಲ    ದೇವಸ್ಥಾನಗಳಿಗೆ ಪ್ರತಿ ವರ್ಷ 36 ಸಾವಿರ ತಸ್ತೀಕ್ ನೀಡಲಾಗುತ್ತಿದೆ. ಎ ಮತ್ತು ಬಿ ದರ್ಜೆ  ದೇವಸ್ಥಾನಗಳು ಬರುವ ವರಮಾನದಿಂದಲೇ ಮೂಲ ಸೌಲಭ್ಯ ಕಲ್ಪಿಸಿಕೊಳ್ಳಬಹುದು. ಭದ್ರತೆ  ದೃಷ್ಟಿಯಿಂದ ಎಲ್ಲ ದೇವಸ್ಥಾನಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಸಿ    ಕೆಟಗರಿ ದೇವಸ್ಥಾನಗಳಿಗೆ ಸರ್ಕಾರದಿಂದಲೇ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಅನುದಾನ  ನೀಡಲಾಗುವುದು ಎಂದು ತಿಳಿಸಿದರು.

ಇಲಾಖೆಯಡಿ ಬರುವ ದೇವಸ್ಥಾನಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಆಯಾ ಜೀರ್ಣೋದ್ಧಾರ  ಸಮಿತಿ ನೀಡುವ ವರದಿ ಪರಿಶೀಲಿಸಲು ಈ ಹಿಂದೆ ಧಾರ್ಮಿಕ ದತ್ತಿ ಪರಿಷತ್ತು ಇತ್ತು. ಕೆಲವರು  ನ್ಯಾಯಾಲಯಕ್ಕೆ ಹೋಗಿದ್ದರಿಂದ ಅದು ರದ್ದುಗೊಂಡಿದೆ. ಪರಿಷತ್ತಿನಿಂದ ಉತ್ತಮ ಕಾರ್ಯಗಳು ಆಗುತ್ತಿದ್ದವು. ಆದ್ದರಿಂದ ಈಗ ಮತ್ತೆ ಧಾರ್ಮಿಕ ದತ್ತಿ ಪರಿಷತ್ತನ್ನು ಆರಂಭಿಸಲು   ನ್ಯಾಯಾಲಯಕ್ಕೆ  ಸರ್ಕಾರದಿಂದ ಅಪೀಲು ಸಲ್ಲಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT