ನಗರದ ಉದಯಭಾನು ಕಲಾಸಂಘ ಹೊರತಂದಿರುವ ಎಂಟು ಸಾಧಕರ ಆತ್ಮಚರಿತ್ರೆ ಪುಸ್ತಕಗಳನ್ನು ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಮಾಲತಿ ಪಟ್ಟಣಶೆಟ್ಟಿ ಬಿಡುಗಡೆ ಮÁಡಿದರು. ಹಿರಿಯ ಸಾಹಿತಿ ಡಾ. ಹಂಪಾ ನ 
ಜಿಲ್ಲಾ ಸುದ್ದಿ

ಕ್ರೌರ್ಯ ಬಿಂಬಿಸುವಿಕೆ ಸಲ್ಲ: ಡಾ.ಹಂಪ ನಾಗರಾಜಯ್ಯ

ಪ್ರಸ್ತುತ ದಿನಗಳಲ್ಲಿ ಮಾಧ್ಯಮಗಳು ಉಗ್ರವಾದವನ್ನೇ ಹೆಚ್ಚಾಗಿ ಬಿಂಬಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹಿರಿಯ ಸಾಹಿತಿ ಡಾ.ಹಂಪ ನಾಗರಾಜಯ್ಯ ಹೇಳಿದರು...

ಬೆಂಗಳೂರು: ಪ್ರಸ್ತುತ ದಿನಗಳಲ್ಲಿ ಮಾಧ್ಯಮಗಳು ಉಗ್ರವಾದವನ್ನೇ ಹೆಚ್ಚಾಗಿ ಬಿಂಬಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಹಿರಿಯ ಸಾಹಿತಿ ಡಾ.ಹಂಪ ನಾಗರಾಜಯ್ಯ ಹೇಳಿದರು.

ನಗರದ ಉದಯಭಾನು ಕಲಾಸಂಘ ಹೊರ ತಂದಿರುವ ಅಂತಿಮ ಕಂತಿನ ಸುವರ್ಣ ಪುಸ್ತಕ ಮಾಲೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಮಾಧ್ಯಮದಲ್ಲಿ ಉಗ್ರವಾದಿಗಳ ವಿಚಾರಗಳ ಜತೆಗೆ ಸಾಹಿತ್ಯಿಕ ವಿಚಾರಗಳು ಪ್ರಸಾರವಾಗುತ್ತಿರುವುದು ಸಮಾಧಾನದ ಸಂಗತಿ ಎಂದರು.

ಎಂಟು ಆತ್ಮಚರಿತ್ರೆ ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಮಾಲತಿ ಪಟ್ಟಣಶೆಟ್ಟಿ, ಇಂದಿನ ಸಮಾಜದಲ್ಲಿ ಗುರಿ ಮತ್ತು ಗುರು ಎರಡೂ ಇಲ್ಲ. ಹಿರಿಯ ಸಾಧಕರು ಯುವ ಸಮುದಾಯಕ್ಕೆ ಸಾಹಿತ್ಯದ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಬಡತನ, ಹಸಿವು, ಅವಮಾನದ ನಡುವೆಯೂ ಛಲದಿಂದ ಸಾಧನೆ ಸಾಧ್ಯ ಎಂಬುದನ್ನು ಯುವ ಜನತೆ ಅರಿಯಬೇಕಿದೆ ಎಂದು ಹೇಳಿದರು.

ಬಿ.ಜಿ ಬಣಕಾರ, ಡಾ. ಎಚ್. ನರಸಿಂಹಯ್ಯ, ಡಾ. ಕಲ್ಯಾಣ ಜಗನ್ನಾಥ್ ರಾವ್, ಖಾದ್ರಿ ಶಾಮಣ್ಣ, ಡಾ. ವಿಜಯ, ಏರ್ಯ ಲಕ್ಷೀನಾರಾಯಣ ಆಳ್ವ, ಪ್ರೊ. ಎಂ.ಡಿ.ನಂಜುಂಡ ಸ್ವಾಮಿ, ವೀಣೆ ರಾಜ ರಾಯರ ಆತ್ಮಚರಿತ್ರೆಗಳನ್ನು ಲೋಕಾರ್ಪಣೆ ಮಾಡಲಾಯಿತು. ಜತೆಗೆ ಆತ್ಮಚರಿತ್ರೆಗಳ ಲೇಖಕರಾದ ಎಸ್.ಪಿ ಗೌಡರ, ಪ್ರೊ. ಎಚ್. ಆರ್. ರಾಮಕೃಷ್ಣರಾವ್, ಡಾ. ವೈ. ತುಳಜಪ್ಪ, ಡಾ.ಟಿ. ಪದ್ಮಾ, ಡಾ. ಕೋ.ವೆಂ. ರಾಮಕೃಷ್ಣಗೌಡ, ಎಂ.ರಾಮಚಂದ್ರ, ವೀರಭದ್ರಪ್ಪ ಬಿಸ್ಲಳ್ಳಿ, ಡಾ.ಆರ್.ಪೂರ್ಣಿಮಾ ಅವರನ್ನು ಸನ್ಮಾನಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT