ವಿಶ್ವಹಿಂದು ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ಸುರೇಂದ್ರ ಕುಮಾರ್ ಜೈನ್ 
ಜಿಲ್ಲಾ ಸುದ್ದಿ

ಲಕ್ಷ ಗ್ರಾಮಕ್ಕೆ ಬಜರಂಗದಳ: ಸುರೇಂದ್ರ ಕುಮಾರ್ ಜೈನ್

ಮುಂದಿನ ಏಪ್ರಿಲ್ ಒಳಗೆ ಬಜರಂಗದಳವನ್ನು 1 ಲಕ್ಷ ಗ್ರಾಮಗಳಿಗೆ ವಿಸ್ತರಣೆ ಮಾಡುವುದಲ್ಲದೆ, ಪ್ರತಿ ಗ್ರಾಮದಲ್ಲೂ ರಾಮೋತ್ಸವ...

ಬೆಂಗಳೂರು: ಮುಂದಿನ ಏಪ್ರಿಲ್ ಒಳಗೆ ಬಜರಂಗದಳವನ್ನು 1 ಲಕ್ಷ ಗ್ರಾಮಗಳಿಗೆ ವಿಸ್ತರಣೆ ಮಾಡುವುದಲ್ಲದೆ, ಪ್ರತಿ ಗ್ರಾಮದಲ್ಲೂ ರಾಮೋತ್ಸವ ಆಚರಣೆ ಮಾಡಲು ಬಜರಂಗದಳ ಸಂಕಲ್ಪ ಮಾಡಿದೆ.

ಎರಡು ದಿನಗಳ ಕಾಲ ನಗರದ ಸರ್ದಾರ್ ಪಟೇಲ್ ಭವನದಲ್ಲಿ ನಡೆದ ಬಜರಂಗದಳದ ರಾಷ್ಟ್ರದ ಅಭಿವೃದ್ಧಿ ಹಾಗೂ ಹಿಂದೂ ಸಮಾಜದ ಉಳಿವಿಗೆ ದೇಶಾದ್ಯಂತ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿಶ್ವಹಿಂದು ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ಸುರೇಂದ್ರ ಕುಮಾರ್ ಜೈನ್ ಹೇಳಿದರು.

ದೇಶದಲ್ಲಿ ಎಲ್ಲ ಜಾತಿ ಮತಗಳಿಗೆ ಸಮಾನವಾದ ರಾಷ್ಟ್ರೀಯ ಜನಸಂಖ್ಯಾ ನೀತಿಯನ್ನು ಜಾರಿಗೊಳಿಸುವಂತೆ ಕೇಂದ್ರಕ್ಕೆ ಒತ್ತಡ ಹೇರಲು ಕೂಡ ನಿರ್ಣಯ ಕೈಗೊಳ್ಳಲಾಗಿದೆ. ಹೆಚ್ಚುತ್ತಿರುವ ಜನಸಂಖ್ಯೆಯಿಂದ ಸಮಾಜದ ಅಭಿವೃದ್ಧಿ ಕಷ್ಟಕರ. ಈ ವಿದ್ಯಮಾನವನ್ನು ಮುಸ್ಲಿಂ ಸಮುದಾಯ ಹೆಚ್ಚು ಅರಿತುಕೊಳ್ಳುವ ಅವಶ್ಯಕತೆ ಇದೆ. ಮುಂದಿನ ಸಮಾಜಕ್ಕೆ ಅಪಾಯಕಾರಿ ಬೆಳವಣಿಗೆಯಾಗಿದ್ದು, ಇಂತಹ ಸನ್ನಿವೇಶಗಳನ್ನು ಎದುರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಜನಸಂಖ್ಯಾ ನೀತಿ ಜಾರಿಗೊಳಿಸುವಂತೆ ಕೇಂದ್ರಕ್ಕೆ ಒತ್ತಡ ಹೇರಲು ಬಜರಂಗದಳದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಮದರಸ ನಿಷೇಧಿಸಿ: ಫ್ರಾನ್ಸ್, ಜರ್ಮನಿ ಸೇರಿದಂತೆ ಪಾಕಿಸ್ತಾನಗಳಲ್ಲಿಯೂ ಭಯೋತ್ಪಾದನಾ ಚಟುವಟಿಕೆಗಳ ಕೇಂದ್ರವಾಗಿರುವ ಮದರಸಗಳ ಮೇಲೆ ನಿಷೇಧ ಹೇರಲಾಗುತ್ತಿದೆ. ದೇಶದಲ್ಲೂ ಇದೇ ರೀತಿಯ ನಿರ್ಧಾರ ಕೇಂದ್ರ ಕೈಗೊಳ್ಳುವಂತೆ ಒತ್ತಾಯಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT