ಪಾಲಿಕೆ ಆಯುಕ್ತ ಜಿ. ಕುಮಾರನಾಯಕ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕಸ ವಿಲೇವಾರಿ ಜವಾಬ್ದಾರಿ ಬದಲು

ನಗರದಲ್ಲಿ ಉತ್ಪತ್ತಿಯಾಗುತ್ತಿರುವ ಕಸ ವಿಲೇವಾರಿ ಜವಾಬ್ದಾರಿಯನ್ನು ಆರೋಗ್ಯ ಮತ್ತು ಘನತಾಜ್ಯ ವಿಭಾಗಕ್ಕೆ ವಹಿಸಿ ಪಾಲಿಕೆ ಆಯುಕ್ತ ಜಿ. ಕುಮಾರನಾಯಕ್ ಆದೇಶಿಸಿದ್ದಾರೆ...

ಬೆಂಗಳೂರು: ನಗರದಲ್ಲಿ ಉತ್ಪತ್ತಿಯಾಗುತ್ತಿರುವ ಕಸ ವಿಲೇವಾರಿ ಜವಾಬ್ದಾರಿಯನ್ನು ಆರೋಗ್ಯ ಮತ್ತು ಘನತಾಜ್ಯ ವಿಭಾಗಕ್ಕೆ ವಹಿಸಿ ಪಾಲಿಕೆ ಆಯುಕ್ತ ಜಿ. ಕುಮಾರನಾಯಕ್ ಆದೇಶಿಸಿದ್ದಾರೆ.

ಘನತಾಜ್ಯ ನಿರ್ವಹಣೆಗೆ ಪ್ರತ್ಯೇಕ ಎಂಜಿನಿಯರ್‍ಗಳು ಇಲ್ಲದಿರುವುದರಿಂದ ಸಮರ್ಪಕವಾಗಿ ಕಸವನ್ನು ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಪರಿಸರ ಘಟಕವನ್ನು ಸೃಜಿಸಿದ್ದರೂ ಕಸದ ಸಮಸ್ಯೆ ಕಡಿಮೆಯಾಗಿರಲಿಲ್ಲ. ಹೀಗಾಗಿ ಘನತಾಜ್ಯ ಮತ್ತು ಆರೋಗ್ಯ ವಿಭಾಗ ಜೊತೆಯಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸ್ವಚ್ಛತೆ ಕಾಪಾಡಲು ಸಾಧ್ಯ ಎಂದು ಆಯುಕ್ತರು ಅಭಿಪ್ರಾಯಪಟ್ಟಿದ್ದಾರೆ.

ಕಿರಿಯ ಆರೋಗ್ಯ ಪರಿವೀಕ್ಷಕರಿಂದ ವಲಯದ ಮುಖ್ಯ ಆರೋಗ್ಯಾಧಿಕಾರಿಗಳವರೆಗೆ ಎಲ್ಲರೂ ತಮ್ಮ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು.

ಕಿರಿಯ ಆರೋಗ್ಯ ನಿರೀಕ್ಷಕರು ನಿತ್ಯ ಬೆಳಗ್ಗೆ 6.30ರಿಂದ ಮಧ್ಯಾಹ್ನ 2.30ರವರೆಗೆ ತಮ್ಮ ವ್ಯಾಪ್ತಿಯ ವಾರ್ಡ್ ಗಳಲ್ಲಿ ಹಾಜರಿದ್ದು, ಕಸ ಸಾಗಿಸುವ ಲಾರಿಗಳು, ತಳ್ಳು ಗಾಡಿಗಳ ಸಂಖ್ಯೆ, ಪೌರ ಕಾರ್ಮಿಕರ ಹಾಜರಾತಿ ತೆಗೆದುಕೊಳ್ಳಬೇಕು. ಮುಖ್ಯವಾಗಿ ಬೀದಿಗಳಲ್ಲಿ ಸ್ವಚ್ಛತೆ ಕಾಪಾಡಿ, ಸಾಧ್ಯವಾದಷ್ಟು ಬ್ಲಾಕ್ ಸ್ಪಾಟ್ ಗಳನ್ನು ಮುಕ್ತವಾಗಿಸಬೇಕು ಎಂದು ಸೂಚಿಸಿದ್ದಾರೆ.

ಹಿರಿಯ ಆರೋಗ್ಯ ನಿರೀಕ್ಷಕರು ಸಗಟು ಪ್ರಮಾಣದಲ್ಲಿ ಉತ್ಪಾದನೆಯಾಗುವ ಕಸ ಸಮರ್ಪಕವಾಗಿ ವಿಲೇವಾರಿಯಾಗುವಂತೆ ನೋಡಿಕೊಳ್ಳಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!