ಪಾಲಿಕೆ ಆಯುಕ್ತ ಜಿ. ಕುಮಾರನಾಯಕ್ (ಸಂಗ್ರಹ ಚಿತ್ರ) 
ಜಿಲ್ಲಾ ಸುದ್ದಿ

ಕಸ ವಿಲೇವಾರಿ ಜವಾಬ್ದಾರಿ ಬದಲು

ನಗರದಲ್ಲಿ ಉತ್ಪತ್ತಿಯಾಗುತ್ತಿರುವ ಕಸ ವಿಲೇವಾರಿ ಜವಾಬ್ದಾರಿಯನ್ನು ಆರೋಗ್ಯ ಮತ್ತು ಘನತಾಜ್ಯ ವಿಭಾಗಕ್ಕೆ ವಹಿಸಿ ಪಾಲಿಕೆ ಆಯುಕ್ತ ಜಿ. ಕುಮಾರನಾಯಕ್ ಆದೇಶಿಸಿದ್ದಾರೆ...

ಬೆಂಗಳೂರು: ನಗರದಲ್ಲಿ ಉತ್ಪತ್ತಿಯಾಗುತ್ತಿರುವ ಕಸ ವಿಲೇವಾರಿ ಜವಾಬ್ದಾರಿಯನ್ನು ಆರೋಗ್ಯ ಮತ್ತು ಘನತಾಜ್ಯ ವಿಭಾಗಕ್ಕೆ ವಹಿಸಿ ಪಾಲಿಕೆ ಆಯುಕ್ತ ಜಿ. ಕುಮಾರನಾಯಕ್ ಆದೇಶಿಸಿದ್ದಾರೆ.

ಘನತಾಜ್ಯ ನಿರ್ವಹಣೆಗೆ ಪ್ರತ್ಯೇಕ ಎಂಜಿನಿಯರ್‍ಗಳು ಇಲ್ಲದಿರುವುದರಿಂದ ಸಮರ್ಪಕವಾಗಿ ಕಸವನ್ನು ನಿರ್ವಹಿಸಲು ಸಾಧ್ಯವಾಗುತ್ತಿರಲಿಲ್ಲ. ಪರಿಸರ ಘಟಕವನ್ನು ಸೃಜಿಸಿದ್ದರೂ ಕಸದ ಸಮಸ್ಯೆ ಕಡಿಮೆಯಾಗಿರಲಿಲ್ಲ. ಹೀಗಾಗಿ ಘನತಾಜ್ಯ ಮತ್ತು ಆರೋಗ್ಯ ವಿಭಾಗ ಜೊತೆಯಾಗಿ ಕಾರ್ಯನಿರ್ವಹಿಸಿದರೆ ಮಾತ್ರ ಸ್ವಚ್ಛತೆ ಕಾಪಾಡಲು ಸಾಧ್ಯ ಎಂದು ಆಯುಕ್ತರು ಅಭಿಪ್ರಾಯಪಟ್ಟಿದ್ದಾರೆ.

ಕಿರಿಯ ಆರೋಗ್ಯ ಪರಿವೀಕ್ಷಕರಿಂದ ವಲಯದ ಮುಖ್ಯ ಆರೋಗ್ಯಾಧಿಕಾರಿಗಳವರೆಗೆ ಎಲ್ಲರೂ ತಮ್ಮ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು.

ಕಿರಿಯ ಆರೋಗ್ಯ ನಿರೀಕ್ಷಕರು ನಿತ್ಯ ಬೆಳಗ್ಗೆ 6.30ರಿಂದ ಮಧ್ಯಾಹ್ನ 2.30ರವರೆಗೆ ತಮ್ಮ ವ್ಯಾಪ್ತಿಯ ವಾರ್ಡ್ ಗಳಲ್ಲಿ ಹಾಜರಿದ್ದು, ಕಸ ಸಾಗಿಸುವ ಲಾರಿಗಳು, ತಳ್ಳು ಗಾಡಿಗಳ ಸಂಖ್ಯೆ, ಪೌರ ಕಾರ್ಮಿಕರ ಹಾಜರಾತಿ ತೆಗೆದುಕೊಳ್ಳಬೇಕು. ಮುಖ್ಯವಾಗಿ ಬೀದಿಗಳಲ್ಲಿ ಸ್ವಚ್ಛತೆ ಕಾಪಾಡಿ, ಸಾಧ್ಯವಾದಷ್ಟು ಬ್ಲಾಕ್ ಸ್ಪಾಟ್ ಗಳನ್ನು ಮುಕ್ತವಾಗಿಸಬೇಕು ಎಂದು ಸೂಚಿಸಿದ್ದಾರೆ.

ಹಿರಿಯ ಆರೋಗ್ಯ ನಿರೀಕ್ಷಕರು ಸಗಟು ಪ್ರಮಾಣದಲ್ಲಿ ಉತ್ಪಾದನೆಯಾಗುವ ಕಸ ಸಮರ್ಪಕವಾಗಿ ವಿಲೇವಾರಿಯಾಗುವಂತೆ ನೋಡಿಕೊಳ್ಳಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT