ರಾಮ್ ವಿಲಾಸ್ ಪಾಸ್ವಾನ್ 
ಜಿಲ್ಲಾ ಸುದ್ದಿ

ಮಡೆಸ್ನಾನ ಸಂವಿಧಾನ ವಿರೋಧ ಇದರ ವಿರುದ್ಧ ಹೋರಾಟ ಅಗತ್ಯ : ಪಾಸ್ವಾನ್

ಮಡೆಸ್ನಾನ ಅಸ್ಪೃಶ್ಯತೆ ಆಚರಣೆಗೆ ಸಮ. ಮಡೆಸ್ನಾನ ನಡೆಸಲು ಆಸ್ಪದ ಕೊಡುವ ಮಠ, ದೇವಸ್ಥಾನ ಅಥವಾ ಯಾರೇ ಆದರೂ ಅವರ ವಿರುದ್ಧ ಕೇಸ್ ದಾಖಲಿಸ ಬೇಕು ...

ತುಮಕೂರು: ಮಡೆಸ್ನಾನ ಅಸ್ಪೃಶ್ಯತೆ ಆಚರಣೆಗೆ ಸಮ. ಮಡೆಸ್ನಾನ ನಡೆಸಲು ಆಸ್ಪದ ಕೊಡುವ ಮಠ, ದೇವಸ್ಥಾನ ಅಥವಾ ಯಾರೇ ಆದರೂ ಅವರ ವಿರುದ್ಧ ಕೇಸ್ ದಾಖಲಿಸ ಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕರ ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದರು.

ದೇವರಾಯನದುರ್ಗದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ದಲಿತ ಸೇನೆ ಸಮಿತಿ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ರಾಜ್ಯ ಮಟ್ಟದ ಅಧ್ಯಯನ ಶಿಬಿರ  ಉದ್ಘಾಟನೆಗೂ ಮುನ್ನ  ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇಲ್ವರ್ಗದವರು ಊಟ ಮಾಡಿದ ಎಂಜಲೆಲೆಗಳ ಮೇಲೆ ಕೆಳ ವರ್ಗದ ಜನರು ಉರುಳಾಡುವ ಮಡೆಸ್ನಾನಕ್ಕೆ ಧಾರ್ಮಿಕ ಲೇಪ ಹಚ್ಚಲಾಗಿದೆ. ಸಮಾನತೆಯ ಆಶಯ ಹೊಂದಿರುವ ಸಂವಿಧಾನ ವಿರೋಧ ಮಡೆಸ್ನಾನದ ವಿರುದ್ಧ ಹೋರಾಟ ಅನಿವಾರ್ಯ ಎಂದು ತಿಳಿಸಿದರು.

ದೇಶಾದ್ಯಂತ ಏಕರೂಪ ಶಿಕ್ಷಣ ಪದ್ಧತಿ ಜಾರಿಯಾಗಬೇಕು. ಸಾಮಾಜಿಕ, ಸಾಂಸ್ಕೃತಿಕ ಕ್ರಾಂತಿ ಆಗೋವರೆಗೂ ಸಮಗ್ರ ಆರ್ಥಿಕ ಅಭಿವೃದ್ಧಿ ಅಸಾಧ್ಯ. ಆರ್ಥಿಕ ಅಭಿವೃದ್ಧಿಗೆ ಅರ್ಥವೂ ಇಲ್ಲ. ಎಲ್‍ಜೆಪಿ, ದಲಿತ ಸೇನೆ ಮೂಲ ಉದ್ದೇಶ ಇರುವುದು ವರ್ಗರಹಿತ ಸಮಾಜ. ಇದಕ್ಕಾಗಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು ಎಂದು ಸಲಹೆ ನೀಡಿದರು. ಎಸ್‍ಸಿ,

ಎಸ್‍ಟಿ ಕೋಟಾ ಭರ್ತಿಯಾಗುತ್ತಿಲ್ಲ: ಐಎಎಸ್, ಐಪಿಎಸ್ ರೀತಿಯಲ್ಲೇ ಇಂಡಿಯನ್ ಜ್ಯುಡಿಷಿಯಲ್ ಸರ್ವಿಸ್( ಐಜೆಎಸ್) ಜಾರಿಯಾಗಬೇಕು. ಸ್ವಾತಂತ್ರ್ಯ ಬಂದು 69 ವರ್ಷಗಳು ಕಳೆದರೂ ಉನ್ನತ ಹುದ್ದೆಗಳು ಎಸ್‍ಸಿ, ಎಸ್‍ಟಿ ಕೋಟಾದಡಿ ಭರ್ತಿಯಾಗುತ್ತಿಲ್ಲ ಎಂದು ವಿಷಾದಿಸಿದ ಪಾಸ್ವಾನ್, ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಜಾರಿಗೆ ತರಬೇಕು. ಬಡ್ತಿಯಲ್ಲೂ ಮೀಸಲು ಜಾರಿಯಾಗಬೇಕು ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT