ಬೆಂಗಳೂರು ನಗರದ ಮತ್ತು ಗ್ರಾಮಾಂತರ ಪ್ರದೇಶದ ಕೆರೆಗಳ ಒತ್ತುವರಿ ಸಮಗ್ರ ತನಿಖೆಗಾಗಿ ವಿಧಾನ ಮಂಡಲದ ಕೆ.ಬಿ.ಕೋಳಿವಾಡ ನೇತೃತ್ವದ ಸಮಿತಿ ಸೋಮವಾರ ಕೆರೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ 
ಜಿಲ್ಲಾ ಸುದ್ದಿ

ಕೆರೆ ಒತ್ತುವರಿ ಮಾಹಿತಿಗೆ ಕೋಳಿವಾಡ ಸಮಿತಿ ಕೆಂಡ

ಬೆಂಗಳೂರು ನಗರದ ಮತ್ತು ಗ್ರಾಮಾಂತರ ಪ್ರದೇಶದ ಕೆರೆಗಳ ಸಂಖ್ಯೆ ಎಷ್ಟು? ಒತ್ತುವರಿ ಎಷ್ಟು? ಯಾರ್ಯಾರಿಗೆ ನೊಟೀಸ್ ನೀಡಲಾಗಿದೆ? ಎಂಬ...

ಬೆಂಗಳೂರು: ಬೆಂಗಳೂರು ನಗರದ ಮತ್ತು ಗ್ರಾಮಾಂತರ ಪ್ರದೇಶದ ಕೆರೆಗಳ ಸಂಖ್ಯೆ ಎಷ್ಟು? ಒತ್ತುವರಿ ಎಷ್ಟು? ಯಾರ್ಯಾರಿಗೆ ನೊಟೀಸ್ ನೀಡಲಾಗಿದೆ? ಎಂಬ ವಿಸ್ತ್ರೃತ ವರದಿ ನೀಡದ ಸಂಬಂಧಪಟ್ಟ ತಹಸೀಲ್ದಾರ್, ಜಂಟಿ ನಿರ್ದೇಶಕರು ಹಾಗೂ ಅಧಿಕಾರಿಗಳಿಗೆ ಕೆರೆ ಒತ್ತುವರಿ ಪರಿಶೀಲನಾ ಸದನ ಸಮಿತಿಯು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆಯಿತು.

ಸಮಿತಿ ಬಳಿ ಇರುವ ಕೆರೆಗಳ ಸಂಖ್ಯೆಗೂ ಸಂಬಂಧಪಟ್ಟ ತಹಸೀಲ್ದಾರ್ ನೀಡುವ ಮಾಹಿತಿಗೂ ತಾಳೆಯಾಗದಿದ್ದಾಗ ಅಂಕಿ ಸಂಖ್ಯೆಗಳನ್ನು ಸರಿಯಾಗಿ ಸಂಗ್ರಹಿಸದೆ ಯಾಕ್ರೀ ಸಭೆಗೆ ಹಾಜರಾಗ್ತೀರಿ, ಕೆಲವು ಅಧಿಕಾರಿಗಳು ಸುಮ್ಮನೆ ತಲೆಯಾಡಿಸಿದರೆ ಸಾಕು ನಡೆಯುತ್ತೆ ಎಂಬ ಮನೋಭಾವ ಹೊಂದಿದ್ದಾರೆ ಎಂದು ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಕೆರೆಗಳ ಒತ್ತುವರಿ ಸಮಗ್ರ ತನಿಖೆ ನಡೆಸಲು ರಚಿಸಲಾಗಿರುವ ವಿಧಾನ ಮಂಡಲದ ಸಮಿತಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಆಕ್ರೋಶ ವ್ಯಕ್ತಪಡಿಸಿದರು.

 ಕೆಂಪೇಗೌಡ ಬಡಾವಣೆಯಲ್ಲಿ ಕೆರೆ ಒತ್ತುವರಿಯಾಗಿದೆಯೇ?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೂತನವಾಗಿ ನಿರ್ಮಾಣ ಮಾಡುತ್ತಿರುವ ಕೆಂಪೇಗೌಡ ಬಡಾವಣೆಗೆ 14 ಕೆರೆಗಳನ್ನು ಒತ್ತುವರಿ ಮಾಡಲಾಗಿದೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಆರೋಪ ಕೇಳಿ ಬರುತ್ತಿದೆ. 23 ಲೇ ಔಟ್ ಗಳನ್ನು ಮಾಡಿದ್ದು 14 ಕೆರೆಯಂಗಳ ಸೇರಿವೆ. ಸಮಿತಿ ಅಸ್ತಿತ್ವದಲ್ಲಿರುವಾಗಲೇ ಮತ್ತೊಂದು ಅನಾಹುತ ಸಂಭವಿಸುವುದು ಬೇಡ.ಬಿಡಿಎ ರಸ್ತೆ ಹಾಗೂ ನಿವೇಶನಕ್ಕಾಗಿ ರಾಮಸಂದ್ರ ಕೆರೆಗೆ ಸೇರಿದ 25 ಗುಂಟೆ ಜಮೀನನ್ನು ಒತ್ತುವರಿ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ಬಗ್ಗೆ ಲಿಖಿತವಾಗಿ ವರದಿ ನೀಡುವಂತೆ ಬಿಡಿಎ ಆಯುಕ್ತರಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌

JDS ಪಾದಯಾತ್ರೆಯಲ್ಲಿ ರೈತರಿಲ್ಲ, ಪಕ್ಷದ ಕಾರ್ಯಕರ್ತರ ಕರೆತಂದಿದ್ದಾರೆ; ನಿಖಿಲ್‌ ರಾಜಕೀಯ ಭವಿಷ್ಯಕ್ಕಾಗಿ ಹೋರಾಟ: ಡಿಕೆ ಶಿವಕುಮಾರ್‌ ವ್ಯಂಗ್ಯ