ಬೆಂಗಳೂರು ನಗರದ ಮತ್ತು ಗ್ರಾಮಾಂತರ ಪ್ರದೇಶದ ಕೆರೆಗಳ ಒತ್ತುವರಿ ಸಮಗ್ರ ತನಿಖೆಗಾಗಿ ವಿಧಾನ ಮಂಡಲದ ಕೆ.ಬಿ.ಕೋಳಿವಾಡ ನೇತೃತ್ವದ ಸಮಿತಿ ಸೋಮವಾರ ಕೆರೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ 
ಜಿಲ್ಲಾ ಸುದ್ದಿ

ಕೆರೆ ಒತ್ತುವರಿ ಮಾಹಿತಿಗೆ ಕೋಳಿವಾಡ ಸಮಿತಿ ಕೆಂಡ

ಬೆಂಗಳೂರು ನಗರದ ಮತ್ತು ಗ್ರಾಮಾಂತರ ಪ್ರದೇಶದ ಕೆರೆಗಳ ಸಂಖ್ಯೆ ಎಷ್ಟು? ಒತ್ತುವರಿ ಎಷ್ಟು? ಯಾರ್ಯಾರಿಗೆ ನೊಟೀಸ್ ನೀಡಲಾಗಿದೆ? ಎಂಬ...

ಬೆಂಗಳೂರು: ಬೆಂಗಳೂರು ನಗರದ ಮತ್ತು ಗ್ರಾಮಾಂತರ ಪ್ರದೇಶದ ಕೆರೆಗಳ ಸಂಖ್ಯೆ ಎಷ್ಟು? ಒತ್ತುವರಿ ಎಷ್ಟು? ಯಾರ್ಯಾರಿಗೆ ನೊಟೀಸ್ ನೀಡಲಾಗಿದೆ? ಎಂಬ ವಿಸ್ತ್ರೃತ ವರದಿ ನೀಡದ ಸಂಬಂಧಪಟ್ಟ ತಹಸೀಲ್ದಾರ್, ಜಂಟಿ ನಿರ್ದೇಶಕರು ಹಾಗೂ ಅಧಿಕಾರಿಗಳಿಗೆ ಕೆರೆ ಒತ್ತುವರಿ ಪರಿಶೀಲನಾ ಸದನ ಸಮಿತಿಯು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆಯಿತು.

ಸಮಿತಿ ಬಳಿ ಇರುವ ಕೆರೆಗಳ ಸಂಖ್ಯೆಗೂ ಸಂಬಂಧಪಟ್ಟ ತಹಸೀಲ್ದಾರ್ ನೀಡುವ ಮಾಹಿತಿಗೂ ತಾಳೆಯಾಗದಿದ್ದಾಗ ಅಂಕಿ ಸಂಖ್ಯೆಗಳನ್ನು ಸರಿಯಾಗಿ ಸಂಗ್ರಹಿಸದೆ ಯಾಕ್ರೀ ಸಭೆಗೆ ಹಾಜರಾಗ್ತೀರಿ, ಕೆಲವು ಅಧಿಕಾರಿಗಳು ಸುಮ್ಮನೆ ತಲೆಯಾಡಿಸಿದರೆ ಸಾಕು ನಡೆಯುತ್ತೆ ಎಂಬ ಮನೋಭಾವ ಹೊಂದಿದ್ದಾರೆ ಎಂದು ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಕೆರೆಗಳ ಒತ್ತುವರಿ ಸಮಗ್ರ ತನಿಖೆ ನಡೆಸಲು ರಚಿಸಲಾಗಿರುವ ವಿಧಾನ ಮಂಡಲದ ಸಮಿತಿ ಅಧ್ಯಕ್ಷ ಕೆ.ಬಿ.ಕೋಳಿವಾಡ ಆಕ್ರೋಶ ವ್ಯಕ್ತಪಡಿಸಿದರು.

 ಕೆಂಪೇಗೌಡ ಬಡಾವಣೆಯಲ್ಲಿ ಕೆರೆ ಒತ್ತುವರಿಯಾಗಿದೆಯೇ?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೂತನವಾಗಿ ನಿರ್ಮಾಣ ಮಾಡುತ್ತಿರುವ ಕೆಂಪೇಗೌಡ ಬಡಾವಣೆಗೆ 14 ಕೆರೆಗಳನ್ನು ಒತ್ತುವರಿ ಮಾಡಲಾಗಿದೆ ಎಂಬ ಬಗ್ಗೆ ಮಾಧ್ಯಮಗಳಲ್ಲಿ ಆರೋಪ ಕೇಳಿ ಬರುತ್ತಿದೆ. 23 ಲೇ ಔಟ್ ಗಳನ್ನು ಮಾಡಿದ್ದು 14 ಕೆರೆಯಂಗಳ ಸೇರಿವೆ. ಸಮಿತಿ ಅಸ್ತಿತ್ವದಲ್ಲಿರುವಾಗಲೇ ಮತ್ತೊಂದು ಅನಾಹುತ ಸಂಭವಿಸುವುದು ಬೇಡ.ಬಿಡಿಎ ರಸ್ತೆ ಹಾಗೂ ನಿವೇಶನಕ್ಕಾಗಿ ರಾಮಸಂದ್ರ ಕೆರೆಗೆ ಸೇರಿದ 25 ಗುಂಟೆ ಜಮೀನನ್ನು ಒತ್ತುವರಿ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ಬಗ್ಗೆ ಲಿಖಿತವಾಗಿ ವರದಿ ನೀಡುವಂತೆ ಬಿಡಿಎ ಆಯುಕ್ತರಿಗೆ ಸೂಚನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT