ರಾಮಲಿಂಗಾ ರೆಡ್ಡಿ 
ಜಿಲ್ಲಾ ಸುದ್ದಿ

8 ಲಕ್ಷ ಕಿ.ಮೀ ಓಡಿರುವ ಬಸ್ಸುಗಳು ಗುಜರಿಗೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

: ಪ್ರಸಕ್ತ ಸಾಲಿನಲ್ಲಿ ಸಾರಿಗೆ ಇಲಾಖೆಯು ಮೂರು ಸಾವಿರ ಹೊಸ ಬಸ್ಸುಗಳನ್ನು ಖರೀದಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ...

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಸಾರಿಗೆ ಇಲಾಖೆಯು ಮೂರು ಸಾವಿರ ಹೊಸ ಬಸ್ಸುಗಳನ್ನು ಖರೀದಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಎಸ್ಸಾರ್ಟಿಸಿಗೆ 986, ಬಿಎಂಟಿಸಿಗೆ 658, ಎನ್ ಇಆರ್‍ಟಿಸಿಗೆ 702, ಎನ್‍ಡಬ್ಲ್ಯೂಆರ್‍ಟಿಸಿಗೆ 219 ಹಾಗೂ ಎನ್‍ಎಸ್‍ಆರ್‍ಟಿಗೆ 299 ಬಸ್ಸುಗಳನ್ನು ಖರೀದಿಸಲಾಗಿದೆ.

ಸಾರಿಗೆ ಇಲಾಖೆಗೆ ಎಸ್ಸಾರ್ಟಿಸಿ ಮಾತ್ರ ಸೇರಲಿದ್ದು, ಉಳಿದ ನಾಲ್ಕು ವಿಭಾಗಗಳಿಗೆ ಆಯಾ ನಿಗಮಕ್ಕೆ ವಹಿಸಲಾಗಿದೆ. ಬಸ್ ಗಳ ಖರೀದಿಸಿರುವ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಹಾಗೆ 5.2 ವರ್ಷ ಅಥವಾ 8 ಲಕ್ಷ  ಕಿ.ಮೀ. ಓಡಿರುವ 3 ಸಾವಿರ ಬಸ್ಸುಗಳನ್ನು ಗುಜರಿಗೆ ಹಾಕುವ ಕೆಲಸವೂ ಪ್ರಕ್ರಿಯೆಯಲ್ಲಿದೆ ಎಂದರು.

ಆಹಾರ ಪದಾರ್ಥ ಗುಣಮಟ್ಟ: ರಾಜ್ಯದ ಎಲ್ಲ ಬಸ್ ನಿಲ್ದಾಣಗಳಲ್ಲಿ ಮಾರಾಟ ಮಾಡುವ ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಎಂಆರ್‍ಪಿ ದರದಂತೆಯೇ ಮಾರಾಟ ಮಾಡದಿರುವ ಬಗ್ಗೆ ಸಾಕಷ್ಟು ದೂರು ಕೇಳಿ ಬರುತ್ತಿವೆ. ಈ ಬಗ್ಗೆ ಸದ್ಯದಲ್ಲಿಯೇ ಸಹಾಯವಾಣಿ ಆರಂಭಿಸಿ ಪ್ರಯಾಣಿಕರು ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.

ಇದಕ್ಕಾಗಿ ಅಧಿಕಾರಿಗಳನ್ನು ನೇಮಿಸಿ ಮಾರಾಟ ಮಳಿಗೆಗಳು ಸಾರ್ವಜನಿಕರಿಗೆ ಅನ್ಯಾಯ ಮಾಡದಂತೆ ಎಚ್ಚರ ವಹಿಸಲು ನಿಗಾ ಇಡಲಾಗುವುದು. ಆಯಾ ಸ್ಥಳದಲ್ಲಿ ನಾಮಫಲಕ ಅಳವಡಿಸಿ ಸಾರ್ವಜನಿಕರಿಗೂ ಅರಿವು ಮೂಡಿಸಲಾಗುವುದು ಎಂದು ಸಚಿವರು ತಿಳಿಸಿದರು.

ದೆಹಲಿ ಸರ್ಕಾರ ಜಾರಿಗೆ ತಂದಿರುವ ಸಮ-ಬೆಸ ಪದ್ಧತಿಯನ್ನು ಅವಲೋಕಿಸಲಾಗುತ್ತಿದ್ದು, ಅಲ್ಲಿ ಯಶಸ್ವಿಯಾದರೆ ರಾಜ್ಯದಲ್ಲೂ ಜಾರಿಗೆ ತರಲಾಗುವುದು. ಇದರ ನಿರ್ವಹಣಾ ಜವಾಬ್ದಾರಿ ಗೃಹ ಇಲಾಖೆಗೆ ಬರುವುದರಿಂದ ತಾವು ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT