(ಸಾಂದರ್ಭಿಕ ಚಿತ್ರ) 
ಜಿಲ್ಲಾ ಸುದ್ದಿ

ರು.5 ಸಾವಿರಕ್ಕಾಗಿ ಶೂಟೌಟ್

ಕೆ.ಆರ್.ಪುರಂ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದ್ದ ಶೂಟೌಟ್ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲು ಎರಡು ತಂಡ ರಚನೆ ಮಾಡಲಾಗಿದೆ.ಅಲ್ಲದೆ, ಶೂಟೌಟ್‍ಗೆ ಕೇವಲ ರು.5 ಸಾವಿರ ಹಣಕಾಸಿನ ವ್ಯವಹಾರವೇ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ...

ಕೃಷ್ಣರಾಜಪುರ: ಕೆ.ಆರ್.ಪುರಂ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದ್ದ ಶೂಟೌಟ್ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಧಿಸಲು ಎರಡು ತಂಡ ರಚನೆ ಮಾಡಲಾಗಿದೆ.ಅಲ್ಲದೆ, ಶೂಟೌಟ್‍ಗೆ ಕೇವಲ ರು.5 ಸಾವಿರ ಹಣಕಾಸಿನ ವ್ಯವಹಾರವೇ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ಒಂದು ತಂಡ ಮಧ್ಯಪ್ರದೇಶಕ್ಕೆ ತೆರಳಿದ್ದು ಮತ್ತೊಂದು ತಂಡ ಬೆಂಗಳೂರಿನಲ್ಲಿ ಶೋಧ ಕಾರ್ಯ ನಡೆಸುತ್ತಿದೆ. ಮುಖೇಶ್ ಹಾಗೂ ಮನೀಶ್ ಎಂಬುವರು ಈ ಪ್ರಕರಣದ
ಆರೋಪಿಗಳು. ಮಧ್ಯಪ್ರದೇಶಕ್ಕೆ ತೆರಳಿರುವ ತಂಡ ಮುಖೇಶ್ ಸಂಬಂಧಿಕರು, ಸ್ನೇಹಿತರ ಮನೆಗಳಲ್ಲಿ ಹುಡುಕಾಟ ನಡೆಸುತ್ತಿದೆ. ಅಲ್ಲಿಯ ಠಾಣೆಗೂ ವಿಷಯ ತಿಳಿಸಲಾಗಿದೆ. ಮತ್ತೊಂದು ತಂಡ ಬೆಂಗಳೂರಿನಲ್ಲಿರುವ ಮನೀಶ್ ಮನೆ ಮತ್ತು ಸ್ನೇಹಿತರ ಮನೆಗಳು, ರೇಲ್ವೆ ಸ್ಟೇಷನ್‍ಗಳು, ಬಸ್ ನಿಲ್ದಾಣಗಳು ಶೋಧ ಕಾರ್ಯ ನಡೆಸುತ್ತಿದೆ ಎಂದು ಡಿಸಿಪಿ ಸತೀಶ್ ಕುಮಾರ್ ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನ ರಾಮಮೂರ್ತಿನಗರದ ಬಳಿಯ ಶಾಂತಿ ಬಡಾವಣೆಯಲ್ಲಿನ ಮನೆಯೊಂದರಲ್ಲಿ ನಡೆದಿದ್ದ ಶೂಟೌಟ್‍ನಲ್ಲಿ ಬಿನೋದ್ ಎಂಬಾತನಿಗೆ ಮೂರು ಗುಂಡುಗಳು ತಗುಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಬಿನೋದ್‍ಗೆ ಶಸ್ತ್ರ ಚಿಕಿತ್ಸೆ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ರು.5 ಸಾವಿರಕ್ಕೆ ಜಗಳ: ಮುಖೇಶ್ ಮತ್ತು ಮನೀಶ್ ಇಬ್ಬರು ಸಹೋದರರು. ಮುಖೇಶ್ ಜೊತೆ ಬಿನೋದ್ ಹಣಕಾಸಿನ ವ್ಯವಹಾರ (ರು.5 ಸಾವಿರ ರೂಪಾಯಿ) ನಡೆಸಿದ್ದು, ಇದೇ ವಿಚಾರವಾಗಿ ಬಿನೋದ್ ಮತ್ತು ಸ್ನೇಹಿತರು ಮುಖೇಶ್ ಮೇಲೆ ಹಲ್ಲೆ ನಡೆಸಿದ್ದರು. ಇದರಿಂದ ದ್ವೇಷ ಸಾಧಿಸುತ್ತಿದ್ದ ಮುಖೇಶ್ ಬೆಂಗಳೂರಿನಲ್ಲೇ ವಾಸವಿರುವ ಸಹೋದರ ಮನೀಶ್ ಜೊತೆಗೂಡಿ ಬಿನೋದ್‍ನ ಮೇಲೆ ಹಲ್ಲೆ ಮಾಡಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT