ಸಾಂದರ್ಭಿಕ ಚಿತ್ರ 
ಜಿಲ್ಲಾ ಸುದ್ದಿ

ಯುವತಿ ಕುತ್ತಿಗೆಗೆ ವೈರ್ ಬಿಗಿದು ಕೊಲೆ, ಫ್ಲಾಟ್ ನಲ್ಲಿ ಘಟನೆ

ಸಾಫ್ಟ್ ವೇರ್ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ಅಪಾರ್ಟ್ ಮೆಂಟ್ ನಲ್ಲಿ ಅನುಮಾನಾಸ್ಪದವಾಗಿ ಕೊಲೆಯಾದ ಘಟನೆ ಕಾಡುಗೋಡಿ ಪೊಲೀಸ್ ಠಾಣೆ,,,

ಬೆಂಗಳೂರು: ಸಾಫ್ಟ್ ವೇರ್ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯುವತಿ ಅಪಾರ್ಟ್ ಮೆಂಟ್ ನಲ್ಲಿ ಅನುಮಾನಾಸ್ಪದವಾಗಿ ಕೊಲೆಯಾದ ಘಟನೆ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಕಾಡುಗೋಡಿಯ ಮಹಾವೀರ್ ಕಿಂಗ್ಸ್ ಪ್ಲೇಸ್ ಅಪಾರ್ಟ್ ಮೆಂಟ್ ನ ನಾಲ್ಕನೇ ಮಹಡಿಯಲ್ಲಿ ವಾಸವಾಗಿದ್ದ ಕುಸುಮರಾಣಿ ಕೊಲೆಯಾದವರು. ಪಂಜಾಬ್ ಮೂಲದವರಾದ ಇವರು ವೈಟ್ ಫೀಲ್ಡ್ ನಲ್ಲಿರುವ ಐಬಿಎಂ ಸಾಫ್ಟ್ ವೇರ್ ಕಂಪನಿ ಉದ್ಯೋಗಿಯಾಗಿದ್ದರು. ಗೆಳತಿ ಐಟಿಪಿಎಲ್ ನಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿರುವ ನಿಧಿ ಶರ್ಮಾ ಕೆಲಸ ಮುಗಿಸಿ ರಾತ್ರಿ 8ರ ಸುಮಾರಿಗೆ ಮನೆಗೆ ವಾಪಸಾದಾಗ ಕೊಲೆ ಘಟನೆ ಬೆಳಕಿಗೆ ಬಂದಿದೆ. ಕುಸುಮರಾಣಿ ಅವರ ಕುತ್ತಿಗೆಗೆ ವಿದ್ಯುತ್ ವೈರ್ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ.

ಕೊಲೆಯಾದ ಕುಸುಮರಾಣಿ ಅವರು ವಿವಾಹವಾಗಲು ಸಂಗಾತಿಯ ಹುಡುಕಾಟದಲ್ಲಿದ್ದರು.ಅದಕ್ಕಾಗಿ ವಧು ವರರ ಮಾಹಿತಿಯ ವೆಬ್ ಸೈಟ್ ಗಳನ್ನು ಹೆಚ್ಚಾಗಿ ನೋಡುತ್ತಿದ್ದರು ಎನ್ನಲಾಗಿದೆ. ಇದೀಗ ಅವರ ಕೊಲೆ ಹಲವು ಅನುಮಾನ ಹುಟ್ಟು ಹಾಕಿದೆ. ಈ ಸಂಬಂಧ ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರಿಚಿತನಿಂದಲೇ ಕೊಲೆಶಂಕೆ: ಪರಿಚಿತ ವ್ಯಕ್ತಿಯೇ ಕುಸುಮ ರಾಣಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ 11.30 ರ ಸುಮಾರಿಗೆ ಅಪಾರ್ಟ್ ಮೆಂಟ್ ನಿಂದ ವ್ಯಕ್ತಿಯೊಬ್ಬ ಮೊಬೈಲ್ ನಿಂದ ಕುಸುಮರಾಣಿ ಅವರಿಗೆ ಕರೆ ಮಾಡಿದ್ದಾನೆ. ಬಳಿಕ ಕುಸುಮರಾಣಿ ಅವರು ಕೆಳಗೆ ಬಂದು ಸೆಕ್ಯೂರಿಟಿ ಪುಸ್ತಕದಲ್ಲಿ ಆ ವ್ಯಕ್ತಿಯ ಮಾಹಿತಿ ಎಂಟ್ರಿ ಮಾಡಿ ಒಳಗೆ ಕರೆದು ಕೊಂಡು ಹೋಗಿರುವುದು ಸಿಸಿಟಿವಿಯಲ್ಲಿ  ದಾಖಲಾಗಿದೆ.

ಇನ್ನು ಕುಸುಮರಾಣಿ ಮನೆಯೊಳಗೆ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಬ ಆ ವ್ಯಕ್ತಿಯ ಚಲನವಲನ ಅಸ್ಪಷ್ಟವಾಗಿ ದಾಖಲಾಗಿದೆ. ಹಾಗಾಗಿ ಆ ಪರಿಚಿತ ವ್ಯಕ್ತಿಯೇ ಕುಸುಮರಾಣಿ ಕೊಲೆ ಮಾಡಿರುವ ಸಾಧ್ತೆ ದಟ್ಟವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈಗಾಗಲೇ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಸಂಗ್ರಹಿಸಿದ್ದು ಪರಿಶೀಲಿಸಲಾಗುತ್ತಿದೆ. ಘಟನೆ ದಿನ ವ್ಯಕ್ತಿಯೊಬ್ಬ ಕುಸುಮರಾಣಿ ಅವರೊಂದಿಗೆ ಇರುವುದು ದೃಶ್ಯಾವಳಿಯಲ್ಲಿ ದಾಖಲಾಗಿದೆ. ತನಿಖೆಯಲ್ಲಿ ಕೊಲೆಗಾರನ ಬಗ್ಗೆ ಸಣ್ಣ ಸುಳಿವು ಲಭ್ಯವಾಗಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT