ಮೈಸೂರಿನ ಚೆಲುವಾಂಬ ಆಸ್ಪತ್ರೆಯ ಬಾಣಂತಿಯರ ಕೊಠಡಿ 
ಜಿಲ್ಲಾ ಸುದ್ದಿ

ಮತ್ತೆ ವಿವಾದದಲ್ಲಿ ಚೆಲುವಾಂಬ ಆಸ್ಪತ್ರೆ

ಬಾಣಂತಿಯರ ಸರಣಿ ಸಾವಿನಿಂದ ಸುದ್ದಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆ ಈಗ ನವಜಾತ ಶಿಶುಗಳ ಸರಣಿ ಸಾವಿನಿಂದ ಮತ್ತೆ...

ಮೈಸೂರು: ಬಾಣಂತಿಯರ ಸರಣಿ ಸಾವಿನಿಂದ ಸುದ್ದಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆ ಈಗ ನವಜಾತ ಶಿಶುಗಳ ಸರಣಿ ಸಾವಿನಿಂದ ಮತ್ತೆ ವಿವಾದಕ್ಕೆ ಗುರಿಯಾಗಿದೆ.

ಮೂರು ದಿನಗಳಲ್ಲಿ ಆಸ್ಪತ್ರೆಯಲ್ಲಿ 5 ಗಂಡು, ಒಂದು ಹೆಣ್ಣು ಮಗು ಸೇರಿದಂತೆ ಒಟ್ಟು 6 ಶಿಶುಗಳು ಮೃತಪಟ್ಟಿವೆ. ಈ ನಡುವೆ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದ್ದು, ಈ ಶಿಶುವಿನ ಹೆತ್ತವರ ಪತ್ತೆಗಾಗಿ ವೈದ್ಯರು ಹಾಗೂ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಶೌಚಾಲಯದಲ್ಲಿ ಪತ್ತೆಯಾದ ಶಿಶು ನಂಜನಗೂಡು ತಾಲೂಕು ಕೃಷ್ಣಾಪುರ ನಿವಾಸಿ ರೂಪಾ ಮತ್ತು ಮೂರ್ತಿ ದಂಪತಿಗೆ ಸೇರಿದ್ದು ಎಂಬ ಅನುಮಾನದ ಮೇಲೆ ಚೆಲುವಾಂಬ ಆಸ್ಪತ್ರೆಯ ವೈದ್ಯರು ದೇವರಾಜ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಇದರಿಂದ ಆಕ್ರೋಶಗೊಂಡ ಮೂರ್ತಿ ಕುಟುಂಬಸ್ಥರು ದೇವರಾಜ ಠಾಣೆಗೆ ಬುಧವಾರ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ.

ಏನಾಗಿತ್ತು?: ಆಸ್ಪತ್ರೆಯ ಹೆರಿಗೆ ವಾರ್ಡ್ ನ ಶೌಚಾಲಯದಲ್ಲಿ ಮಂಗಳವಾರ ನವಜಾತ ಶಿಶುವಿನ ಶವ ಪತ್ತೆಯಾಗಿತ್ತು. ಈ ಶಿಶು ರೂಪಾ ಮತ್ತು ಮೂರ್ತಿ ದಂಪತಿಗೆ ಸೇರಿದ್ದು ಎಂದು ವೈದ್ಯರು ಸಂಶಯ ವ್ಯಕ್ತಪಡಿಸಿದ್ದರು. ಆದರೆ, ಈ ದಂಪತಿಗೆ ಜನಿಸಿದ್ದ ಹೆಣ್ಣು ಶಿಶು ಸೋಮವಾರವೇ ಮೃತಪಟ್ಟಿತ್ತು.

ವೈದ್ಯರ ದೂರಿನ ಮೇರೆಗೆ ಪೊಲೀಸರು ಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಊರಿನಲ್ಲಿ ಶಿಶುವಿನ ಅಂತ್ಯ ಸಂಸ್ಕಾರ ನೆರವೇರಿಸಿದ್ದಾಗಿ ತಿಳಿಸಿದ್ದಾರೆ. ಇದನ್ನು ಪೊಲೀಸರು ನಂಬದ ಕಾರಣ ಮೂರ್ತಿ ಕುಟುಂಬದವರು ಹೂತಿದ್ದ ತಮ್ಮ ಶಿಶುವಿನ ಶವವನ್ನು ಹೊರತೆಗೆದು ಪೊಲೀಸ್ ಠಾಣೆಗೆ ಧಾವಿಸಿ, ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ವೈದ್ಯರ ವಿರುದ್ಧ ಪ್ರತಿದೂರು ದಾಖಲಿಸಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದ ಶಿಶು ಸಾವು: ದೂರು
ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕಿನ ಮುದುಗೆರೆ ನಿವಾಸಿ ಚಂದ್ರೇಗೌಡ ಎಂಬುವರ ಪತ್ನಿ ಶೋಭಾ ಅವರು ಚೆಲುವಾಂಬ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ 6ಕ್ಕೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಅರ್ಧ ಗಂಟೆಯ ನಂತರ ಶಿಶು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಆರೋಗ್ಯವಾಗಿದ್ದ ಶಿಶು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಕೆಯ ಪತಿ ಚಂದ್ರೇಗೌಡ ದೂರು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT