ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಅಧ್ಯಕ್ಷ ಸ್ಥಾನಕ್ಕೆ ಪ್ರೊ.ಜಯಪ್ರಕಾಶ್ ಗೌಡ ನಾಮಪತ್ರ ಸಲ್ಲಿಸಿದರು 
ಜಿಲ್ಲಾ ಸುದ್ದಿ

ಕಸಾಪ: ಘಟಾನುಘಟಿಗಳು ಚುನಾವಣಾ ಕಣಕ್ಕೆ

ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಅಧ್ಯಕ್ಷ ಸ್ಥಾನಕ್ಕೆ ಗುರುವಾರ 6 ಅಭ್ಯರ್ಥಿಗಳಿಂದ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿವೆ. ಆಂಧ್ರ ಪ್ರದೇಶ ಗಡಿನಾಡು...

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಅಧ್ಯಕ್ಷ ಸ್ಥಾನಕ್ಕೆ ಗುರುವಾರ 6 ಅಭ್ಯರ್ಥಿಗಳಿಂದ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿವೆ. ಆಂಧ್ರ ಪ್ರದೇಶ ಗಡಿನಾಡು ಘಟಕಕ್ಕೆ ಇಬ್ಬರು ಉಮೇದುವಾರರಿಂದ ನಾಮಪತ್ರ ಸಲ್ಲಿಕೆಯಾಗಿವೆ.

ನಿವೃತ್ತ ಐಎಎಸ್ ಅಧಿಕಾರಿ ಡಾ. ಮನು ಬಳಿಗಾರ್, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪಟೇಲ್ ಪಾಂಡು, ಕನ್ನಡ ಸೇನೆ ಅಧ್ಯಕ್ಷ ಆರ್.ಎಸ್.ಎನ್.ಗೌಡ, ಮಂಡ್ಯ ಕನ್ನಡ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಗೌಡ, ಮಾ.ಚಿ.ಕೃಷ್ಣ, ಬಸವರಾಜ ಶಿ. ಹಳ್ಳೂರ ಹಾಗೂ ಗಡಿನಾಡು ಘಟಕವಾದ ಆಂಧ್ರಪ್ರದೇಶ ಘಟಕದ ಅಧ್ಯಕ್ಷ ಸ್ಥಾನಕ್ಕೆ ಗಿರಿಜಾಪತಿ, ಎಂ.ಬಿ.ಶಿವಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಬೆಂಗಳೂರು ನಗರ ಜಿಲ್ಲಾ ಘಟಕಕ್ಕೆ ಗಣೇಶ್ ಮೊಕಾಶಿ, ಪಿನಾಕಿ ಪಾಣಿ ಉಮೇದುವಾರಿಕೆ ಸಲ್ಲಿಸಿದರು.

ಈ ಬಾರಿಯ ಕಸಾಪ ಚುನಾವಣೆಯಲ್ಲಿ ಡಾ.ಮನು ಬಳಿಗಾರ್ ಮತ್ತು ಪ್ರೊ.ಜಯಪ್ರಕಾಶ್ ನಡುವೆ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ. ರಾಜ್ಯದ 21 ಜಿಲ್ಲೆಗಳಿಂದ 41 ಅಭ್ಯರ್ಥಿಗಳು 64 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. 9 ಜಿಲ್ಲೆಗಳಿಂದ ಯಾವುದೇ ನಾಮಪತ್ರಗಳು ಸಲ್ಲಿಕೆಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ