ಆಮ್ ಆದ್ಮಿ ಪಕ್ಷ 
ಜಿಲ್ಲಾ ಸುದ್ದಿ

ಮರಳು ಅಡ್ಡೆ ಮೇಲೆ ಆಪ್ ದಾಳಿ

ರಾಜಕಾಲುವೆಯ ಬಳಿ ನಡೆಯುತ್ತಿದ್ದ ಅಕ್ರಮ ಮರಳು ಫಿಲ್ಟರ್ ದಂಧೆಯ ಮೇಲೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಪೊಲೀಸರು ದಾಳಿ ನಡೆಸಿದ್ದಾರೆ.

ಬೆಂಗಳೂರು: ಕಳೆದ ಒಂದೂವರೆ ವರ್ಷದಿಂದ ಕೆಂಗೇರಿಯ ಹೆಮ್ಮಿಗೆಪುರ ವಾರ್ಡ್ ನ ಗಾಣಗಲ್ಲು ಗ್ರಾಮದ ರಾಜಕಾಲುವೆಯ ಬಳಿ ನಡೆಯುತ್ತಿದ್ದ ಅಕ್ರಮ ಮರಳು ಫಿಲ್ಟರ್ ದಂಧೆಯ ಮೇಲೆ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಪೊಲೀಸರು ದಾಳಿ ನಡೆಸಿದ್ದಾರೆ.
ಅಕ್ರಮ ಮರಳು ಫಿಲ್ಟರ್ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಥಳಿಯ ಪೊಲೀಸ್ ಹಾಗು ತಹಸೀಲ್ದಾರರಿಗೆ ಹಲವು ಬಾರಿ ದೂರು ನೀಡಲಾಗಿದೆ. ಆದರೆ ಅಧಿಕಾರಿಗಳು ಅವರೊಂದಿಗೆ ಶಾಮೀಲಾಗಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಬೇಸತ್ತ ಸಾರ್ವಜನಿಕರು ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಅವರಿಗೆ ವಿಷಯ ತಿಳಿಸಿದಾಗ ಅವರು ಎಎಪಿ ಮುಖಂದ ರವಿಕೃಷ್ಣ ರೆಡ್ಡಿ ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ದಂಧೆಕೋರರು ಬಿಡಿಎ ಜಾಗದಲ್ಲಿ ಗುಂಡಿಗಳನ್ನು ತೆರೆದು ಚರಂಡಿಯಿಂದ ಹರಿದು ಬರುವ ನೀರಿನಿಂದ ಮರಳು ಫಿಲ್ಟರ್ ಮಾಡಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದರು. ಅಧಿಕಾರಿಗಳು ಅವರನ್ನು ಬಂಧಿಸದ ಕಾರಣ ಐದಾರು ಕಡೆ ರಾಜಾರೋಷವಾಗಿ ದಂಧೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾತಂತ್ರ್ಯ ಹೋರಾಟಗಾರ ಹೆಚ್ಎಸ್ ದೊರೆಸ್ವಾಮಿ ಸ್ಥಳಿಯರು ದೂರು ನೀಡಿದರೂ ದಂಧೆ ತಡೆಗೆ ಮುಂದಾಗದ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು. ಅಕ್ರಮ ನಡೆಸುತ್ತಿರುವ ಆರೋಪಿಗಳನ್ನು ಬಂಧಿಸಿ ಶಿಕ್ಷಿಸಬೇಕು. ರಾಜಧಾನಿಯಲ್ಲೇ ಈ ರೀತಿಯ ದಂಧೆಗಳು ನಡೆಯುತ್ತಿದ್ದರೂ, ಇದರ ವಿರುದ್ಧ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT